Wednesday, November 19, 2025
Homeಇದೀಗ ಬಂದ ಸುದ್ದಿಫುಟ್ಬಾಲ್ ಪಂದ್ಯದ ವೇಳೆ ಸಿಡಿಲು ಬಡಿದು ಇಬ್ಬರ ಸಾವು

ಫುಟ್ಬಾಲ್ ಪಂದ್ಯದ ವೇಳೆ ಸಿಡಿಲು ಬಡಿದು ಇಬ್ಬರ ಸಾವು

ದುಮ್ಕಾ (ಜಾರ್ಖಂಡ್), ಸೆ.24 -ಜಾರ್ಖಂಡ್‍ನ ದುಮ್ಕಾ ಜಿಲ್ಲೆಯ ಹನ್ಸಿಹಾ ಪ್ರದೇಶದ ಆಟದ ಮೈದಾನಕ್ಕೆ ಸಿಡಿಲು ಬಡಿದು ಪಂದ್ಯ ವೀಕ್ಷಿಸುತ್ತಿದ್ದ ಇಬ್ಬರು ಪ್ರೇಕ್ಷಕರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ.

ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಎಂದು ಪೊಲೀಸರು ತಿಳಿಸಿದ್ದಾರೆ. ಪಂದ್ಯದ ವೇಳೆ ಗುಡುಗು ಸಹಿತ ಭಾರೀ ಮಳೆ ಪ್ರಾರಂಭವಾದ ನಂತರ ಮೈದಾನದಿಂದ ಹೊರಬಂದು ಪಕ್ಕದಲ್ಲಿ ಹಲವಾರು ಪ್ರೇಕ್ಷಕರು ಟೆಂಟ್ ಅಡಿಯಲ್ಲಿ ಆಶ್ರಯ ಪಡೆದಾಗ ಸಿಡಿಲು ಬಡಿದು ಈ ಘಟನೆ ಸಂಭವಿಸಿದೆ.

BIG NEWS : ಸೆ.29 ರಂದು ‘ಕರ್ನಾಟಕ ಬಂದ್’ಗೆ ಕರೆಕೊಟ್ಟ ವಾಟಾಳ್

ಶಿವಲಾಲ್ ಸೊರೆನ್ (32) ಮತ್ತು ಸಂತ್ಲಾಲ್ ಹೆಂಬ್ರಾಮ್ (20) ಎಂಬ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ ಮತ್ತು ಇತರ ಮೂವರು ಗಾಯಗೊಂಡಿದ್ದಾರೆ ಎಂದು ಹನ್ಸಿಹಾ ಪೊಲೀಸ್ ಠಾಣಾಕಾರಿ ಜಿತೇಂದ್ರ ಕುಮಾರ್ ಸಾಹು ತಿಳಿಸಿದ್ದಾರೆ. ಎಲ್ಲಾ ಗಾಯಾಳುಗಳನ್ನು ಸರೈಯಾಹತ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.

RELATED ARTICLES
- Advertisment -

Latest News