Friday, November 7, 2025
Home Blog Page 1945

ಫುಟ್ಬಾಲ್ ಪಂದ್ಯದ ವೇಳೆ ಸಿಡಿಲು ಬಡಿದು ಇಬ್ಬರ ಸಾವು

ದುಮ್ಕಾ (ಜಾರ್ಖಂಡ್), ಸೆ.24 -ಜಾರ್ಖಂಡ್‍ನ ದುಮ್ಕಾ ಜಿಲ್ಲೆಯ ಹನ್ಸಿಹಾ ಪ್ರದೇಶದ ಆಟದ ಮೈದಾನಕ್ಕೆ ಸಿಡಿಲು ಬಡಿದು ಪಂದ್ಯ ವೀಕ್ಷಿಸುತ್ತಿದ್ದ ಇಬ್ಬರು ಪ್ರೇಕ್ಷಕರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ.

ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಎಂದು ಪೊಲೀಸರು ತಿಳಿಸಿದ್ದಾರೆ. ಪಂದ್ಯದ ವೇಳೆ ಗುಡುಗು ಸಹಿತ ಭಾರೀ ಮಳೆ ಪ್ರಾರಂಭವಾದ ನಂತರ ಮೈದಾನದಿಂದ ಹೊರಬಂದು ಪಕ್ಕದಲ್ಲಿ ಹಲವಾರು ಪ್ರೇಕ್ಷಕರು ಟೆಂಟ್ ಅಡಿಯಲ್ಲಿ ಆಶ್ರಯ ಪಡೆದಾಗ ಸಿಡಿಲು ಬಡಿದು ಈ ಘಟನೆ ಸಂಭವಿಸಿದೆ.

BIG NEWS : ಸೆ.29 ರಂದು ‘ಕರ್ನಾಟಕ ಬಂದ್’ಗೆ ಕರೆಕೊಟ್ಟ ವಾಟಾಳ್

ಶಿವಲಾಲ್ ಸೊರೆನ್ (32) ಮತ್ತು ಸಂತ್ಲಾಲ್ ಹೆಂಬ್ರಾಮ್ (20) ಎಂಬ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ ಮತ್ತು ಇತರ ಮೂವರು ಗಾಯಗೊಂಡಿದ್ದಾರೆ ಎಂದು ಹನ್ಸಿಹಾ ಪೊಲೀಸ್ ಠಾಣಾಕಾರಿ ಜಿತೇಂದ್ರ ಕುಮಾರ್ ಸಾಹು ತಿಳಿಸಿದ್ದಾರೆ. ಎಲ್ಲಾ ಗಾಯಾಳುಗಳನ್ನು ಸರೈಯಾಹತ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.

ಕಾವೇರಿಗಾಗಿ ಕರೆನೀಡಿರುವ ಬಂದ್‍ ವಿರೋಧಿಸುವಂತೆ ಸಚಿವರಿಗೆ ಸಿಎಂ ಸಂದೇಶ

ಬೆಂಗಳೂರು,ಸೆ.24- ಕಾವೇರಿ ನೀರಿಗಾಗಿ ವಿವಿಧ ಸಂಘಟನೆಗಳು ಕರೆ ನೀಡಿರುವ ಬಂದ್‍ಗೆ ವಿರೋಧ ವ್ಯಕ್ತಪಡಿಸದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಸಂದೇಶ ರವಾನಿಸಿದ್ದಾರೆ. ಕಾವೇರಿ ನಾಡಿನ ಅಸ್ಮಿತೆಯಾಗಿದ್ದು, ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿರುವುದು ಕನ್ನಡಿಯಷ್ಟೇ ಸತ್ಯವಾಗಿದೆ.

ಒಂದೆಡೆ ನ್ಯಾಯಾಲಯದ ಆದೇಶ ಪಾಲನೆ ಮಾಡಬೇಕಾದ ಅನಿವಾರ್ಯತೆ ಇದೆ. ಮತ್ತೊಂದೆಡೆ ಜಲಾಶಯಗಳಲ್ಲಿ ನೀರು ಬರಿದಾಗುತ್ತಿರುವುದರಿಂದ ನಮ್ಮ ಬೆಳೆ ಹಾಗೂ ಕುಡಿಯುವ ನೀರಿನ ಸಂಕಷ್ಟಗಳು ಹೆಚ್ಚಾಗುತ್ತಿದೆ. ಎಷ್ಟು ಬಾರಿ ಮನವಿ ಮಾಡಿದರೂ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿಲ್ಲ. ಪ್ರಧಾನಮಂತ್ರಿಯವರಿಗೆ ಸಮಯ ಕೇಳಿದರೂ ಸ್ಪಂದಿಸಿಲ್ಲ.

ಈ ವಿಷಯದಲ್ಲಿ ರಾಜ್ಯಸರ್ಕಾರ ಅಸಹಾಯಕವಾಗಿದೆ. ನ್ಯಾಯಾಲಯಗಳಿಗೆ, ನೀರು ಹಂಚಿಕೆಯ ಸಮಿತಿಗಳಿಗೆ ವಾಸ್ತವತೆಯನ್ನು ಮನವರಿಕೆ ಮಾಡಿಕೊಡಬೇಕು. ಇದಕ್ಕೆ ಪೂರಕವಾಗಿ ಜನಾಂದೋಲನ ನಡೆಯುತ್ತಿದೆ. ಇದನ್ನು ನಾವು ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ. ಬಂದ್ ಸೇರಿದಂತೆ ಯಾವುದೇ ಹೋರಾಟಗಳಿಗೆ ವಿರೋಧ ವ್ಯಕ್ತಪಡಿಸುವುದು ಬೇಡ ಎಂದು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

BIG NEWS : ಸೆ.29 ರಂದು ‘ಕರ್ನಾಟಕ ಬಂದ್’ಗೆ ಕರೆಕೊಟ್ಟ ವಾಟಾಳ್

ಪ್ರತಿಭಟನಾಕಾರರು ಸಹಜವಾಗಿ ಕೇಂದ್ರದ ಜೊತೆ ರಾಜ್ಯಸರ್ಕಾರವನ್ನು ಟೀಕೆ ಮಾಡುತ್ತಾರೆ. ಪ್ರಜಾಪ್ರಭುತ್ವದಲ್ಲಿ ಟೀಕೆಗಳಿಗೆ ನಾವು ಒಗ್ಗಿಕೊಳ್ಳಬೇಕು, ನ್ಯಾಯಕ್ಕಾಗಿ ಹೋರಾಟ ಮಾಡುತ್ತಿರುವುದು, ಲೇವಡಿ ಮಾಡುವುದು, ಬೆದರಿಸುವುದು ಖಂಡಿಸುವಂತಹ ಪ್ರವೃತ್ತಿಗಳು ಬೇಡ. ಪ್ರಜಾಸತ್ತಾತ್ಮಕವಾಗಿ ಕಾನೂನು ಚೌಕಟ್ಟಿನಲ್ಲಿ ಪ್ರತಿಭಟನೆ ಮಾಡುವವರಿಗೆ ಮುಕ್ತ ಸ್ವಾತಂತ್ರ್ಯವಿದೆ. ನಾವು ಅದನ್ನು ಗೌರವಿಸೋಣ ಎಂಬ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ಬಂದ್‍ನಿಂದ ಬ್ರಾಂಡ್ ಬೆಂಗಳೂರಿಗೆ ಧಕ್ಕೆಯಾಗುತ್ತದೆ ಎಂಬ ಅಸಮಾಧಾನವನ್ನು ವ್ಯಕ್ತಪಡಿಸಿದರು. ಅದರ ಬೆನ್ನಲ್ಲೇ ಕರವೇಯ ಪ್ರವೀಣ್‍ಶೆಟ್ಟಿ, ಕೆಲವು ಸಂಘಟನೆಗಳು ಬೆಂಗಳೂರು ಬಂದ್‍ಗೆ ಬಹಿರಂಗ ವಿರೋಧ ವ್ಯಕ್ತಪಡಿಸಿದರು. ಅದರ ಬೆನ್ನಲ್ಲೇ ಹಿರಿಯರಾದ ವಾಟಾಳ್ ನಾಗರಾಜ್ ಹಾಗೂ ಮತ್ತಿತರರು ಸೆ.29 ಕ್ಕೆ ಕರ್ನಾಟಕ ಬಂದ್‍ಗೆ ಕರೆ ನೀಡಿದ್ದಾರೆ.

ಹೀಗಾಗಿ ಬೆಂಗಳೂರು ಬಂದ್ ವಿಷಯದಲ್ಲೂ ಗೊಂದಲಗಳು ಸೃಷ್ಟಿಯಾಗಲಾರಂಭಿಸಿವೆ. ಕಾವೇರಿ ವಿಷಯದಲ್ಲಿ ಪ್ರತಿಭಟನೆ ನಡೆಯುತ್ತಿರುವುದರ ಬಗ್ಗೆ ಸರ್ಕಾರದಲ್ಲಿರುವ ಕೆಲವರು ಅಸಮಾಧಾನಗೊಂಡರೆ, ಪ್ರತಿಭಟನೆಗಳಿಂದ ರಾಜ್ಯಸರ್ಕಾರಕ್ಕೆ ಸಹಾಯವಾಗುತ್ತಿದೆ ಎಂಬ ಪ್ರತಿಪಾದನೆಯನ್ನು ಕೆಲವರು ಮಾಡುತ್ತಿದ್ದಾರೆ. ಈಗ ಬಂದ್‍ಗಳಲ್ಲೂ ಬೆಂಗಳೂರು, ಕರ್ನಾಟಕ ಎಂಬ ಗೊಂದಲಗಳು ಸೃಷ್ಟಿಯಾಗಿವೆ.

BIG NEWS : ಸೆ.29 ರಂದು ‘ಕರ್ನಾಟಕ ಬಂದ್’ಗೆ ಕರೆಕೊಟ್ಟ ವಾಟಾಳ್

ಬೆಂಗಳೂರು,ಸೆ.24- ಕಾವೇರಿ ಉಳಿವಿಗಾಗಿ ರೈತಪರ ಸಂಘಟನೆಗಳು, ವಿವಿಧ ಸಂಘಟನೆಗಳು ಬೆಂಗಳೂರು ಬಂದ್‍ಗೆ ಸೆಪ್ಟೆಂಬರ್ 26 ರಂದು ರಾಜಧಾನಿ ಬೆಂಗಳೂರಿಗೆ ಕರೆ ಕೊಟ್ಟ ಬೆನ್ನಲ್ಲೇ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಸೆ. 29 ರಂದು ಕರ್ನಾಟಕ ಬಂದ್ ಮಾಡಲು ಮುಂದಾಗಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಅಖಿಲ ಕರ್ನಾಟಕ ಡಾ.ರಾಜ್‍ಕುಮಾರ್ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದ್, ಕನ್ನಡ ಸೇನೆ ಕುಮಾರ್, ಕರವೇ ಅಧ್ಯಕ್ಷ ಪ್ರವೀಣ್‍ಶೆಟ್ಟಿ, ಕನ್ನಡ ಜಾಗೃತಿ ವೇದಿಕೆ ಅಧ್ಯಕ್ಷ ಮಂಜುನಾಥ್ ದೇವ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಹೋರಾಟವನ್ನು ರಾಜ್ಯಾದ್ಯಂತ ಮಾಡಬೇಕಾಗಿದೆ. ಅದಕ್ಕಾಗಿ ನಾವು ಕರ್ನಾಟಕ ಬಂದ್ ಮಾಡಿ ಸರ್ಕಾರದ ಗಮನ ಸೆಳೆಯಬೇಕು. ಹೀಗಾಗಿ ಬಂದ್ ಮಾಡಲು ನಿರ್ಧರಿಸಿದ್ದೇವೆ. ನಾಳೆ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಹೇಳಿದರು.

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 5 ದಿನ ಮಳೆ

ಕಾವೇರಿ ವಿವಾದದಲ್ಲಿ ನಮಗೆ ನಿರಂತರ ಅನ್ಯಾಯವಾಗುತ್ತಿದೆ. ಇದಕ್ಕಾಗಿ ನಾವೂ ಕೂಡ ನಿರಂತರವಾಗಿ ಹೋರಾಟ ಮಾಡುತ್ತಲೇ ಬಂದಿದ್ದೇವೆ. ನಿನ್ನೆ ಹಲವು ಸಂಘಟನೆಗಳು ಬೆಂಗಳೂರು ಬಂದ್ ಮಾಡಲು ನಿರ್ಧರಿಸಿದ್ದಾರೆ. ಹೋರಾಟ ಬೆಂಗಳೂರಿಗೆ ಸೀಮಿತವಾಗಬಾರದು. ಈ ಹಿನ್ನೆಲೆಯಲ್ಲಿ ನಾಳೆ ಎಲ್ಲಾ ಸಂಘಟನೆಗಳೊಂದಿಗೆ ಚರ್ಚಿಸಿ ಹೋರಾಟವನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು.

ಸೆ. 29 ಕ್ಕೆ ರಾಜ್ಯ ಬಂದ್ ಮಾಡುವ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಮೊದಲಿನಿಂದಲೂ ಕಾವೇರಿ ವಿವಾದದಲ್ಲಿ ಅನ್ಯಾಯವಾಗುತ್ತಿದೆ, ಹೋರಾಟ ಕೂಡ ಅನಿವಾರ್ಯವಾಗಿದೆ. ಕನ್ನಡ ನಾಡು, ನುಡಿ, ಜಲದ ವಿಷಯದಲ್ಲಿ ಕನ್ನಡಪರ ಸಂಘಟನೆಗಳು ಹೋರಾಟ ಮಾಡಲೇಬೇಕಾಗಿದೆ. ಈ ಹಿನ್ನೆಲೆಯಲ್ಲಿ ನಾವು ಬಂದ್‍ಗೆ ಮುಂದಾಗಿದ್ದೇವೆ ಎಂದು ಸಾ.ರಾ.ಗೋವಿಂದ್ ತಿಳಿಸಿದರು.

ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಎನ್.ಎಂ.ಸುರೇಶ್ ಆಯ್ಕೆ

ಬೆಂಗಳೂರು,ಸೆ.24: ಭಾರೀ ಕುತೂಹಲ ಮೂಡಿಸಿದ್ದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳ ಚುನಾವಣೆಯಲ್ಲಿ ತೀವ್ರ ಪೈಪೋಟಿಯ ನಡುವೆಯೇ ನಿರ್ಮಾಪಕ ಎನ್ ಎಂ. ಸುರೇಶ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಿನ್ನೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ತಡರಾತ್ರಿವರೆಗೂ ನಡೆದು ಭಾರೀ ಅಂತರದಿಂದ ಎನ್ ಎಂ. ಸುರೇಶ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಇಂದು ಬೆಳಿಗ್ಗೆ ಅಧಿಕಾರ ವಹಿಸಿಕೊಂಡರು.

ಎಲ್ಲಾ ವಲಯಗಳಿಂದ ಒಟ್ಟು 1599 ಸದಸ್ಯರು ಮತದಾನದ ಹಕ್ಕು ಪಡೆದಿದ್ದರು. ಇದರಲ್ಲಿ 967 ಮಂದಿ ಮತದಾನ ಮಾಡಿದ್ದರು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸುರೇಶ್ 337 ಪಡೆದು ಅಧ್ಯಕ್ಷರಾಗಿ ಆಯ್ಕೆಯಾದರೆ ಉಳಿದಂತೆ ಎ.ಗಣೇಶ್ 204, ವಿ.ಹೆಚ್. ಸುರೇಶ್ (ಮಾರ್ಸ್ ಸುರೇಶ್)181, ಶಿಲ್ಪಾ ಶ್ರೀನಿವಾಸ್ 217 ಮತ ಪಡೆದು ಪರಾಭವಗೊಂಡರು.

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 5 ದಿನ ಮಳೆ

ಗೌರವ ಕಾರ್ಯದರ್ಶಿಯಾಗಿ ವಿತರಕರ ವಲಯದಿಂದ ಭಾ.ಮಾ. ಗಿರೀಶ್, ವಿ. ಸುಬ್ರಹ್ಮಣಿ(ಕರಿಸುಬ್ಬು) ಪ್ರದರ್ಶಕರ ವಲಯದಿಂದ ಸುಂದರ್ ರಾಜು ಆರ್. ಗೆಲುವು ಸಾಸಿದ್ದಾರೆ.

ಇನ್ನು ಉಪಾಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕರ ವಲಯದಿಂದ ಪ್ರಮೀಳ ಜೋಶಾಯಿ, ವಿತರಕರ ವಲಯದಿಂದ ಜಿ. ವೆಂಕಟೇಶ್, ಪ್ರದರ್ಶಕರ ವಲಯದಿಂದ ನರಸಿಂಹಲು ಜಯಗಳಿಸಿದ್ದು, ಖಜಾಂಚಿಯಾಗಿ ಜಯಸಿಂಹ ಮುಸುರಿ ವಿಜೇತರಾಗಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 5 ದಿನ ಮಳೆ

ಬೆಂಗಳೂರು, ಸೆ.24- ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಿದ್ದು, ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ. ನೈರುತ್ಯ ಮುಂಗಾರು ಚೇತರಿಕೆಯಾಗಿರುವುದರಿಂದ ಈ ತಿಂಗಳ ಅಂತ್ಯದವರೆಗೂ ಮಳೆ ನಿರೀಕ್ಷಿಸಬಹುದು.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಇದರ ಪ್ರಭಾವದಿಂದ ರಾಜ್ಯದ ಕರಾವಳಿ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಮಳೆ ಬರುವ ಸಂಭವಿದೆ. ವಾಯುಭಾರ ಕುಸಿತ ಪರಿಣಾಮದಿಂದ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ. ಕೆಲವೆಡೆ ತುಂತುರು ಇಲ್ಲವೆ, ಸಾಧಾರಣ ಮಳೆ ಆಗಾಗ್ಗೆ ಬರುವ ನಿರೀಕ್ಷೆ ಇದೆ. ಮಂಗಳವಾರದ ನಂತರ ದಕ್ಷಿಣ ಒಳನಾಡಿನಲ್ಲೂ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ತಜ್ಞರು ಹೇಳಿದ್ದಾರೆ.

ಭಾರತೀಯ ಹವಾಮಾನ ಇಲಾಖೆಯೂ ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ವ್ಯಾಪಕ ಪ್ರಮಾಣದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ರಾಜ್ಯದ ಒಳನಾಡಿನಲ್ಲಿ ಭಾಗಶಃ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದೆ.

ಮದ್ಯಭಾಗ್ಯ ನೀಡಿ ಕರ್ನಾಟಕವನ್ನು ‘ಕುಡುಕರ ತೋಟ’ ಮಾಡುತ್ತಿದೆ ಧನಪಿಶಾಚಿ ಸರ್ಕಾರ : ಹೆಚ್ಡಿಕೆ ಆಕ್ರೋಶ

ನೀಗದ ಮಳೆ ಕೊರತೆ:ಆದರೂ ನೈರುತ್ಯ ಮುಂಗಾರಿನ ಅವ ಮುಗಿಯುತ್ತಾ ಬಂದಿದ್ದರೂ ರಾಜ್ಯದಲ್ಲಿ ಮಳೆ ಕೊರತೆಯು ಈತನಕ ನಿವಾರಣೆಯಾಗಿಲ್ಲ. ಆಗಸ್ಟ್ ನಲ್ಲಿ ಪ್ರಾರಂಭವಾದ ಮಳೆ ಕೊರತೆ ಸೆಪ್ಟೆಂಬರ್‍ನಲ್ಲೂ ಮುಂದುವರೆದಿದ್ದು, ಬರದ ತೀವ್ರತೆ ಹೆಚ್ಚತೊಡಗಿದೆ. ಇದರಿಂದ ಬಿತ್ತಿದ ಬೆಳೆ ಹಾನಿಯಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ರಾಜ್ಯದ ಕೆಲವೆಡೆ ಚದುರಿದಂತೆ ಅಲ್ಲಲ್ಲಿ ಮಳೆಯಾಗುತ್ತಿದ್ದರೂ ವ್ಯಾಪಕವಾಗಿ ರಾಜ್ಯಾದ್ಯಂತ ವಾಡಿಕೆ ಪ್ರಮಾಣದ ಮಳೆಯಾಗುತ್ತಿಲ್ಲ. ಹೀಗಾಗಿ ಜಲಾಶಯಗಳಲ್ಲಿನ ಒಳಹರಿವು ಏರಿಕೆಯಾಗುತ್ತಿಲ್ಲ. ಕಳೆದ ವರ್ಷ ಅತಿವೃಷ್ಟಿಯಾಗಿದ್ದರೆ, ಈ ವರ್ಷ ಬರಪರಿಸ್ಥಿತಿ ಎದುರಿಸುವಂತಾಗಿದೆ.

ತಡವಾಗಿ ಆರಂಭವಾದ ಮುಂಗಾರು ಮಳೆಯು ಜೂನ್‍ನಲ್ಲಿ ಕೈಕೊಟ್ಟಿತ್ತು. ಆದರೆ, ಜುಲೈ ಸುಧಾರಿಸಿ ವಾಡಿಕೆಗಿಂತ ಹೆಚ್ಚು ಮಳೆಯಾಗಿ ನಿಟ್ಟುಸಿರು ಬಿಡುವಂತಾಗಿತ್ತು. ಆದರೆ, ಮತ್ತೆ ಆಗಸ್ಟ್‍ನಲ್ಲಿ ಮುಂಗಾರು ಮಳೆ ಕೈಕೊಟ್ಟು ಶತಮಾನದ ದಾಖಲೆ ಮುರಿಯುವಷ್ಟು ಮಳೆ ಕೊರತೆಯಾಗಿದೆ. ಇದರಿಂದ ರಾಜ್ಯ ಬೀಕರ ಬರಗಾಲ ಎದುರಿಸುವಂತಾಗಿದೆ. ಸೆಪ್ಟೆಂಬರ್‍ನಲ್ಲಿ ಮಳೆ ಚೇತರಿಸಿಕೊಳ್ಳಬಹುದೆಂಬ ನಿರೀಕ್ಷೆ ಹುಸಿಯಾಗಿದೆ.

ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಕಳೆದ ಒಂದು ವಾರದಲ್ಲಿ ಮಳೆ ಕೊರತೆ ಪ್ರಮಾಣ ಹೆಚ್ಚಾಗಿದೆ. ವಾಡಿಕೆ ಪ್ರಮಾಣಕ್ಕಿಂತ ಶೇ.36ರಷ್ಟು ರಾಜ್ಯದಲ್ಲಿ ಮಳೆ ಕಡಿಮೆಯಾಗಿದೆ. ಅದೇ ರೀತಿ ಸೆಪ್ಟೆಂಬರ್ ಒಂದರಿಂದ ನಿನ್ನೆವರೆಗೆ ರಾಜ್ಯದಲ್ಲಿ ವಾಡಿಕೆಗಿಂತ ಶೇ.11 ಕಡಿಮೆ ಮಳೆಯಾಗಿದೆ. ಕೆಲವೆಡೆ ಕೊರತೆ ಪ್ರಮಾಣ ಇನ್ನೂ ಹೆಚ್ಚಿದೆ.

ಮುಂಗಾರು ಹಂಗಾಮಿನ ಅವಯ ಜೂನ್ ಒಂದರಿಂದ ನಿನ್ನೆವರೆಗೆ ರಾಜ್ಯದಲ್ಲಿ ಶೇ.26ರಷ್ಟು ಮಳೆ ಕೊರತೆ ಇದೆ. ಜನವರಿಯಿಂದ ನಿನ್ನೆವರೆಗೆ ಮಳೆ ಪ್ರಮಾಣದಲ್ಲೂ ವಾಡಿಕೆಗಿಂತ ಶೇ. 26ರಷ್ಟು ಕೊರತೆ ಕಂಡುಬಂದಿದೆ. ಅಕ್ಟೋಬರ್‍ನಿಂದ ಹಿಂಗಾರು ಮಳೆ ಆರಂಭವಾಗುವುದು ರೂಢಿ. ನೈರುತ್ಯ ಮುಂಗಾರು ಮಾರುತಗಳು ಮರಳಿದ ಬಳಿಕ ಈಶಾನ್ಯ ಹಿಂಗಾರಿನ ಮಾರುತಗಳು ಪ್ರಾರಂಭವಾಗುತ್ತವೆ. ಹಿಂಗಾರಿನ ಆರಂಭದ ಮುನ್ಸೂಚನೆಯೂ ಅಶಾದಾಯಕವಾಗಿಲ್ಲ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಯಡಿಯೂರಪ್ಪನವರ ಆಶೀರ್ವಾದ ಪಡೆದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು,ಸೆ.24- ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ನಿರ್ಧಾರ ಪ್ರಕಟವಾದ ಬೆನ್ನಲ್ಲೇ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಶೀರ್ವಾದ ಪಡೆದರು.ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಯಡಿಯೂರಪ್ಪ ಅವರನ್ನು ನಿಖಿಲ್ ಕುಮಾರಸ್ವಾಮಿ ಅವರು ಸೌಹಾರ್ದಯುತ ಭೇಟಿ ಮಾಡಿದರು.

ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಬೆಂಬಲ ನೀಡಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಚುನಾವಣೆ ಎದುರಿಸುತ್ತವೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ರಾಜ್ಯದ 28 ಕ್ಷೇತ್ರಗಳನ್ನು ಗೆಲ್ಲುತ್ತವೆ. ಮಂಡ್ಯ ಲೋಕಸಭಾ ಚುನಾವಣೆ ಬಗ್ಗೆ ಮಾತನಾಡಲು ಇದು ಸೂಕ್ತ ಸಮಯವಲ್ಲ. ಅಲ್ಲಿರುವ ಮಾಜಿ ಶಾಸಕರು, ನಾಯಕರು ತೀರ್ಮಾನ ಮಾಡುತ್ತಾರೆ. ಮಂಡ್ಯದಲ್ಲಿ ನಮ್ಮ ಪಕ್ಷದಲ್ಲಿ ಅಭ್ಯರ್ಥಿಗಳಿಗೆ ಕೊರತೆಯಿಲ್ಲ. ಅನೇಕ ನಾಯಕರುಗಳಿದ್ದಾರೆ ಎಂದು ಅವರು ತಿಳಿಸಿದರು.

ಮದ್ಯಭಾಗ್ಯ ನೀಡಿ ಕರ್ನಾಟಕವನ್ನು ‘ಕುಡುಕರ ತೋಟ’ ಮಾಡುತ್ತಿದೆ ಧನಪಿಶಾಚಿ ಸರ್ಕಾರ : ಹೆಚ್ಡಿಕೆ ಆಕ್ರೋಶ

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ರಾಜ್ಯದ ಹಿತ ಕಾಪಾಡುವ ದೃಷ್ಟಿಯಿಂದ ಬಿಜೆಪಿ ಜತೆ ಮೈತ್ರಿಯ ನಿರ್ಧಾರ ಮಾಡಿದ್ದಾರೆ. ಯಡಿಯೂರಪ್ಪ ಅವರ ಕೊಡುಗೆ ರಾಜ್ಯಕ್ಕೆ ಸಾಕಷ್ಟಿದೆ. ಹಿರಿಯರ ಆಶೀರ್ವಾದ ಪಡೆದುಕೊಳ್ಳುವುದು ಸಂಸ್ಕøತಿ. ಹಾಗಾಗಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿರುವುದಾಗಿ ಅವರು ಹೇಳಿದರು.

ಬಿಜೆಪಿ ಪಕ್ಷವು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪಕ್ಷ ಎಂದು ಭಾವಿಸಿದ್ದೇನೆ. ರಾಜ್ಯದ ಬಿಜೆಪಿ ನಾಯಕರನ್ನು ಕಡೆಗಣಿಸುವುದಿಲ್ಲ ಎಂಬ ವಿಶ್ವಾಸವಿದೆ. ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರಗಳ ಹಂಚಿಕೆ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.

ಜೆಡಿಎಸ್ ಪ್ರಾದೇಶಿಕ ಪಕ್ಷವನ್ನು ಅನೇಕರು ಶ್ರಮವಹಿಸಿ ಕಟ್ಟಿದ್ದಾರೆ. ನಮ್ಮ ನಾಯಕರು ಪಕ್ಷ ಮುನ್ನಡೆಸಿದ್ದಾರೆ. ಯುವಕರು ಪಕ್ಷದ ಜವಾಬ್ದಾರಿ ತೆಗೆದುಕೊಂಡು ಇನ್ನಷ್ಟು ಸಂಘಟನೆ ಮಾಡಬೇಕಾಗಿದೆ. ಆ ನಿಟ್ಟಿನಲ್ಲಿ ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರು ನಿರ್ವಹಿಸುತ್ತೇನೆ ಎಂದು ಅವರು ಹೇಳಿದರು

ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಹೊಳೆನರಸೀಪುರದಲ್ಲಿ ಕಾರ್ಯಕ್ರಮವಿದ್ದ ಹಿನ್ನೆಲೆಯಲ್ಲಿ ಅವರು ದೆಹಲಿಯಿಂದ ಮುಂಚಿತವಾಗಿ ರಾಜ್ಯಕ್ಕೆ ಮರಳಿದರು. ಆದರೆ, ಮೊದಲ ದಿನದ ಉಭಯ ಪಕ್ಷಗಳ ನಾಯಕರ ಮಾತುಕತೆಯ ಸಂದರ್ಭದಲ್ಲಿ ರೇವಣ್ಣ ಕೂಡ ಇದ್ದರು. ಎಲ್ಲರ ಸಮ್ಮುಖದಲ್ಲೆ ಮೈತ್ರಿಯ ಮುಂದಿನ ತೀರ್ಮಾನಗಳ ಬಗ್ಗೆ ಚರ್ಚೆಯಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಬೆಂಗಳೂರು ಬಂದ್ ಗೆ ನಮ್ಮ ಬೆಂಬಲವಿರಲಿದೆ. ನಿನ್ನೆ ಮಂಡ್ಯ ಬಂದ್ನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭಾಗಿಯಾಗಿದ್ದರು. ರೈತ ಬಂಧುಗಳಿಗೆ ನ್ಯಾಯ ಒದಗಿಸಿ ಕೊಡುವುದರಲ್ಲಿ ನಾವು ಯಾವಾಗಲೂ ಜೊತೆಗಿರುತ್ತೇವೆ ಎಂದು ಅವರು ಹೇಳಿದರು. ಅಲ್ಪಸಂಖ್ಯಾತ ನಾಯಕರು ಜೆಡಿಎಸ್ ಗೆ ರಾಜೀನಾಮೆ ನೀಡಿದ ಬಗ್ಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.

ಬಿಜೆಪಿ-ಜೆಡಿಎಸ್ ಮೈತ್ರಿ ಕಾರ್ಯಕರ್ತರಿಗೆ ಮಾಡಿದ ನಂಬಿಕೆ ದ್ರೋಹ : ಜನತಾಶಕೀಲ್

ಚನ್ನಪಟಣ,ಸೆ.24-ದೇಶದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‍ನ ಸರ್ವೋಚ್ಚ ನಾಯಕ ಎಚ್.ಡಿ.ದೇವೇಗೌಡರವರು ಹಾಗೂ ಮಾಜಿ ಮುಖ್ಯಮಂತ್ರಿ ಹಾಗೂ ಕ್ಷೇತ್ರದ ಶಾಸಕರಾದ ಎಚ್.ಡಿ.ಕುಮಾರಸ್ವಾಮಿರವರು ತಾವೇ ಕೋಮುವಾದಿ ಪಕ್ಷವೆಂದೇ ಕರೆಯುತ್ತಿದ್ದ ಬಿಜೆಪಿಯ ಎನ್‍ಡಿಎ ಜೊತೆ ಮೈತ್ರಿ ಮಾಡಿಕೊಂಡು, ಬಿಜೆಪಿ ನಾಯಕರ ಜೊತೆ ಕೈ ಎತ್ತಿರುವುದು ತಮ್ಮನ್ನೇ ನಂಬಿದ ಕೋಟ್ಯಾಂತರ ಕಾರ್ಯಕರ್ತರ ಮನಸ್ಸಿಗೆ ಅಘಾತವನ್ನು ಉಂಟುಮಾಡಿದ್ದಾರೆಂದು, ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತ ಯುವ ಮುಖಂಡ ಜನತಾ ಶಕೀಲ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ತಮ್ಮ ಪಕ್ಷದ ಉದಯದಿನದಿಂದಲೂ ಬಿಜೆಪಿಯ ಬಗ್ಗೆ ತಮ್ಮ ಅಸಮಾದಾನವನ್ನು ಹೊರ ಹಾಕುತ್ತಿದ್ದ ಮಾಜಿ ಪ್ರಧಾನಿಗಳಾದ ದೇವೇಗೌಡರು ತಮ್ಮನ್ನೇ ನಂಬಿದ ಕಾರ್ಯಕರ್ತರು.ಮತದಾರರು ಅದರಲ್ಲೂ ಮುಸ್ಲಿಂ ಸಮುದಾಯದ ನಂಬಿಕೆಗೆ ದ್ರೋಹ ಬಗೆದು, ತಮ್ಮ ಕುಟುಂಬದ ರಾಜಕೀಯ ನೆಲೆಗಾಗಿ,ಕೋಮುವಾದಿಯನ್ನೇ ಮೈಗೂಡಿಸಿಕೊಂಡಿರುವ ಎನ್‍ಡಿಎ ಜೊತೆ ನಂಟು ಬೆಳಸಿರುವುದು, ನಿಮ್ಮ ರಾಜಕೀಯ ಕುತಂತ್ರಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ.

ಮದ್ಯಭಾಗ್ಯ ನೀಡಿ ಕರ್ನಾಟಕವನ್ನು ‘ಕುಡುಕರ ತೋಟ’ ಮಾಡುತ್ತಿದೆ ಧನಪಿಶಾಚಿ ಸರ್ಕಾರ : ಹೆಚ್ಡಿಕೆ ಆಕ್ರೋಶ

ಚನ್ನಪಟ್ಟಣ ಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿರವರ ರಾಜಕೀಯ ಜನ್ಮ ನೀಡಿದ ಕ್ಷೇತ್ರದ ಮುಸ್ಲಿಂ ಮತದಾರರು ನಿಮ್ಮ ಕಣ್ಣಿಗೆ ಕಾಣಲಿಲ್ಲವೇ, ಸೋಲಿನ ಹತಾಸೆಯಲ್ಲಿದ್ದ ನಿಮಗೆ ನಗರ ಪ್ರದೇಶವೊಂದರಲ್ಲಿ 15 ಸಾವಿರಕ್ಕೂ ಹೆಚ್ಚು ಮತಗಳನ್ನು ಅಂತರದಿಂದ ಜಯದ ಮಾಲೆಯನ್ನು ಹಾಕಿದ ಮುಸ್ಲಿಂ ಮತದಾರರಿಗೆ ನೀವು ಕೊಟ್ಟಿರುವ ಬಹುದೊಡ್ಡ ಕೊಡಗೆಯೇ ಇದು ಎಂದು ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ.

ತಮ್ಮ ಸರ್ಕಾರವನ್ನು ತಗೆದ ಬಿಜೆಪಿ ಎಂದು ಬೊಬ್ಬೆ ಹೊಡೆಯುತ್ತಿದ್ದ ಕುಮಾರಸ್ವಾಮಿರವರೇ ಈಗ ಸರ್ಕಾರವನ್ನು ತೆಗೆದದ್ದು ಜ್ಞಾಪಕಕ್ಕೆ ಬರುತ್ತಿಲ್ಲವೇ, ತಮ್ಮ ಅಕಾರ ಹಾಗೂ ರಾಜಕೀಯಲಾಭದ ಭವಿಷ್ಯಕ್ಕಾಗಿ ಯಾರನ್ನು, ಯಾವ ಸಮಯದಲ್ಲಿ ಬೇಕಾದರೂ ಕೂಡ ದುರುಪಯೋಗಪಡಿಸಿಕೊಳ್ಳಲು ನಿಪುಣರೆಂದು ಸಾಬಿತು ಮಾಡಿದ್ದೀರಿ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಕ್ಷ ಪಕ್ಷ ಎಂದು ಸಾಮಾನ್ಯ ಕಾರ್ಯಕರ್ತರು ಹೊಡದಾಡಿಕೊಂಡು ಪೊಲೀಸ್ ಠಾಣೆ ಮೆಟ್ಟಿಲೇರಿ ನಂತರ ನ್ಯಾಯಾಲಯದಲ್ಲಿ ಇಂದಿಗೂ ಪ್ರಕರಣದ ವ್ಯಾಜ್ಯ ನಡೆಯುತ್ತಿದೆ ಆದರೆ ಅಂತಹ ನಿಷ್ಟವಂತ ಕಾರ್ಯಕರ್ತರ ಪ್ರಾಮಾಣಿಕತೆ.ನಿಷ್ಟೆಗೆ ದ್ರೋಹ ಬಗೆದಿರುವ ನಿಮಗೆ ಕಾಲವೇ ಉತ್ತರ ನೀಡಲಿದೆ ಎಂದು ತಮ್ಮ ಭವಿಷ್ಯ ನುಡಿದಿದ್ದಾರೆ.

ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಸುಳಿವು ನೀಡಿತ್ತು ಅಮೆರಿಕದ ಗುಪ್ತಚರ ಇಲಾಖೆ

ನವದೆಹಲಿ, ಸೆ.24- ಕೆನಡಾದಲ್ಲಿ ಖಲಿಸ್ತಾನ ಟೈಗರ್ ಫೋರ್ಸ್ ನ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ನನ್ನು ಯಾವುದೇ ಸಂದರ್ಭದಲ್ಲೂ ಹತ್ಯೆ ಮಾಡಬಹುದು ಎಂದು ಅಲ್ಲಿನ ಸರ್ಕಾರದ ಅಮೆರಿಕದ ಗುಪ್ತಚರ ವಿಭಾಗದ ಅಧಿಕಾರಿಗಳು ಎಚ್ಚರಿಕೆ ಕೊಟ್ಟಿದ್ದರು.
ಹರ್ದೀಪ್ ಸಿಂಗ್ ನಿಜ್ಜರ್ ಮೇಲೆ ಕೆಲವರು ಕಣ್ಣಿಟ್ಟಿದ್ದಾರೆ.

ಆತನನ್ನು ಎದುರಾಳಿ ತಂಡಗಳು ಯಾವುದೇ ಸಂದರ್ಭದಲ್ಲೂ ಹತ್ಯೆ ಮಾಡಬಹುದು. ನಾವು ಇದನ್ನು ಖಚಿತವಾದ ಮಾಹಿತಿ ಮೇರೆಗೆ ಹೇಳುತ್ತಿದ್ದೇವೆ ಎಂದು ಯುಎಸ್ ಗುಪ್ತಚರ ವಿಭಾಗ ಕೆನಡಾಕ್ಕೆ ಸಲಹೆ ಕೊಟ್ಟಿತ್ತು.ಆದರೆ ಕೆನಡಾ ಸರ್ಕಾರ ಇದನ್ನು ನಿರ್ಲಕ್ಷಿಸಿದ್ದರಿಂದಲೇ ಹರ್ದೀಪ್ ಸಿಂಗ್ ನಿಜ್ಜರ್ ಭೀಕರವಾಗಿ ಹತ್ಯೆಗೀಡಾಗಿದ್ದಾರೆ. ಕೆನಡಾ ಸರ್ಕಾರದ ಪ್ರಮಾದವು ಇದೆ ಎಂದು ಗುಪ್ತಚರ ವಿಭಾಗ ಹೇಳಿದೆ.

ಭಾರತ-ಕೆನಡಾ ಬಿಕ್ಕಟ್ಟಿನಿಂದ ಅಂತರ ಕಾಪಾಡಿಕೊಂಡ ಅಮೆರಿಕ

ನ್ಯೂಯಾರ್ಕ್ ಟೈಮ್ಸ್ ಮಾಡಿರುವ ಸುದ್ದಿಯಂತೆ ಭಾರತದ ಏಜೆನ್ಸಿಗಳು ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ನೇರವಾಗಿ ಶಾಮೀಲಾಗಿವೆಯೋ ಇಲ್ಲವೋ ಎಂಬುದು ತನಿಖೆಯಿಂದ ಗೊತ್ತಾಗುತ್ತದೆ. ಉಭಯ ರಾಷ್ಟ್ರಗಳ ನಡುವೆ ರಾಜತಾಂತ್ರಿಕ ಸಂಬಂಧ ಹಾಳಾಗಬಾರದೆಂಬುದು ತಮ್ಮ ಉದ್ದೇಶವಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತ ನೇರವಾಗಿ ಭಾಗಿಯಾಗಿರುವುದಕ್ಕೆ ಸಮರ್ಪಕವಾದ ದಾಖಲೆಗಳು ಇಲ್ಲ. ಕೆನಡಾ ಸರ್ಕಾರ ಯಾವ ಆಧಾರದ ಮೇಲೆ ಆರೋಪ ಮಾಡಿದೆ ಎಂಬುದು ನಮಗೂ ತಿಳಿದಿಲ್ಲ. ಎರಡು ರಾಷ್ಟ್ರಗಳ ನಡುವೆ ಪರಿಸ್ಥಿತಿಯನ್ನು ತಿಳಿಗೊಳಿಸಲು ನಾವು ಪ್ರಯತ್ನಿಸುತ್ತೇವೆ. ಯಾವುದೇ ರಾಷ್ಟ್ರ ಉದ್ವಿಗ್ನಗೊಳಿಸುವ ಕೆಲಸವನ್ನು ಮಾಡಬಾರದು ಎಂದು ಅಮೆರಿಕಾದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮದ್ಯಭಾಗ್ಯ ನೀಡಿ ಕರ್ನಾಟಕವನ್ನು ‘ಕುಡುಕರ ತೋಟ’ ಮಾಡುತ್ತಿದೆ ಧನಪಿಶಾಚಿ ಸರ್ಕಾರ : ಹೆಚ್ಡಿಕೆ ಆಕ್ರೋಶ

ಬೆಂಗಳೂರು, ಸೆ.24- ಒಂದೆಡೆ ಮನೆಮನೆಗೂ ಗೃಹಜ್ಯೋತಿ ಎಂದು ಹೇಳಿ, ಈಗ ಮನೆಮನೆಗೂ ಮದ್ಯಭಾಗ್ಯ ನೀಡಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ. ಸರ್ಕಾರವು ಧನಪಿಶಾಚಿ ಅವತಾರವೆತ್ತಿ ಅಬಕಾರಿ ಆದಾಯ ಹೆಚ್ಚಿಸಿಕೊಳ್ಳಲು ಈಗ ಮದ್ಯ ಸಮಾರಾಧನೆಗೆ ಶ್ರೀಕಾರ ಹಾಡಿದೆ. ಇದು 6ನೇ ಗ್ಯಾರಂಟಿ ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಅವರು ವ್ಯಂಗ್ಯವಾಡಿದ್ದಾರೆ.

ಕರ್ನಾಟಕ ರಾಜ್ಯವು ವಿಜ್ಞಾನ, ತಂತ್ರಜ್ಞಾನ, ಆವಿಷ್ಕಾರ ಐಟಿ-ಬಿಟಿಗೆ ಪ್ರಸಿದ್ಧಿ. ಇನ್ನು ಮುಂದೆ ಇದು ಬದಲಾಗಬಹುದು. ಕಾರಣವಿಷ್ಟೇ, ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಕುಡುಕರ ತೋಟವನ್ನಾಗಿ ಮಾಡಲಿದೆ ಎಂದು ಅವರು ಆರೋಪಿಸಿದ್ದಾರೆ. ಚುನಾವಣೆಗೆ ಮುನ್ನ ಸರ್ವ ಜನಾಂಗದ ಶಾಂತಿಯ ತೋಟ ಎನ್ನುತ್ತಿದ್ದರು, ಗೆದ್ದ ನಂತರ ಕರ್ನಾಟಕ ಕುಡುಕರ ತೋಟ ಎನ್ನುತ್ತಿದ್ದಾರೆ. ಇದು ರಾಜ್ಯ ಕಾಂಗ್ರೆಸ್ ಸರ್ಕಾರದ ಸಂಕಲ್ಪ ಎಂದು ಅವರು ಟೀಕಿಸಿದ್ದಾರೆ.

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರ್ಕಾರದ್ದು. ಖೊಟ್ಟಿ ಗ್ಯಾರಂಟಿಗಳಿಂದ ಜನರನ್ನು ಯಾಮಾರಿಸಿದ್ದು ಸಾಲದೆಂಬಂತೆ ಪ್ರತೀ ಪಂಚಾಯಿತಿಯಲ್ಲೂ ಮದ್ಯದ ಅಂಗಡಿ ತೆರೆಯಲು ಸಿದ್ಧತೆ ನಡೆಸಿರುವುದು ನಾಚಿಕೆಗೇಡು ಎಂದಿದ್ದಾರೆ.
ಅಕ್ಕಿ, ಬೇಳೆ, ದವಸ ಧಾನ್ಯ, ಹಣ್ಣು ತರಕಾರಿ, ಹಾಲು-ಮೊಸರು ಸಿಗುವ ಸೂಪರ್ ಮಾರುಕಟ್ಟೆಗಳಲ್ಲೂ ಮುಕ್ತವಾಗಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದು ಅಸಹ್ಯದ ಪರಮಾವ. ಇದೇನಾ ಸಮಾಜವಾದ ಎಂದು ಅವರು ಪ್ರಶ್ನಿಸಿದ್ದಾರೆ.

ಗ್ಯಾರಂಟಿ ಸರ್ಕಾರದಲ್ಲಿ ಹುದ್ದೆ ಗುದ್ದಾಟ, ರಾಜಣ್ಣ ವಿರುದ್ಧ ಡಿಕೆಶಿ ಬೆಂಬಲಿಗರ ಆಕ್ರೋಶ

3,000 ಜನಸಂಖ್ಯೆಯುಳ್ಳ ಪ್ರತೀ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾರ್‍ತೆಗೆದು ಮನೆಹಾಳು ಮಾಡಲಿದೆ ಸರ್ಕಾರ. ಸುಳ್ಳು ಗ್ಯಾರಂಟಿಗಳನ್ನು ನಂಬಿ ಮೋಸ ಹೋದ ಮಹಿಳೆಯರಿಗೆ ಕರ್ನಾಟಕದಲ್ಲಿ ಕೇಡುಗಾಲ ಶುರುವಾಗಿದೆ. ಅವರ ಸೌಭಾಗ್ಯಕ್ಕೆ ಎದುರಾಗಿದೆ ಸಂಚಕಾರ. ಇದು ಮನೆಹಾಳು ಸರ್ಕಾರ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ನಾರಿಯರಿಗೆ ಶಕ್ತಿ ತುಂಬುತ್ತೇವೆ ಎಂದ ಸರ್ಕಾರ, ಈಗ ಅವರ ಬಾಳಿಗೆ ಬೆಂಕಿ ಹಾಕುತ್ತಿದೆ. ಗೃಹಲಕ್ಷ್ಮೀ ಎಂದ ಸರ್ಕಾರ ಅವರ ಬಾಳಿಗೆ ಗ್ರಹಣವಾಗಿದೆ. ಗೃಹಜ್ಯೋತಿ ಎಂದ ಸರ್ಕಾರ ಅವರ ಬಾಳಜ್ಯೋತಿಯನ್ನೇ ನಂದಿಸುತ್ತಿದೆ. ಅನ್ನಭಾಗ್ಯ ಎಂದ ಸರ್ಕಾರ, ಈಗ ಮದ್ಯಭಾಗ್ಯ ಎನ್ನುತ್ತಿದೆ ಎಂದು ಅವರು ಟೀಕಾ ಪ್ರಹಾರ ನಡೆಸಿದ್ದಾರೆ.

ಭಾರತ-ಕೆನಡಾ ಬಿಕ್ಕಟ್ಟಿನಿಂದ ಅಂತರ ಕಾಪಾಡಿಕೊಂಡ ಅಮೆರಿಕ

ನ್ಯೂಯಾರ್ಕ್, ಸೆ.24- ಭಾರತ ಮತ್ತು ಕೆನಡಾ ನಡುವೆ ಉಂಟಾಗಿರುವ ರಾಜತಾಂತ್ರಿಕ ಬಿಕ್ಕಟ್ಟಿನಿಂದ ಸುರಕ್ಷಿತ ಅಂತರ ಕಾಪಾಡಿಕೊಳ್ಳಲು ಅಮೆರಿಕ ಮುಂದಾಗಿದೆ.ಕೆನಡಾದ ಪ್ರಜೆ ಎಂದು ಹೇಳಲಾಗುತ್ತಿರುವ ಖಲಿಸ್ತಾನ ಟೈಗರ್ ಫೋರ್ಸ್ ನ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರ ಉಭಯ ರಾಷ್ಟ್ರಗಳ ನಡುವೆ ಸಂಬಂಧ ವಿಕೋಪಕ್ಕೆ ತಿರುಗಿದೆ.

ಈ ಸಂದರ್ಭದಲ್ಲಿ ದೊಡ್ಡಣ್ಣನ ಪಾತ್ರ ನಿರ್ವಹಿಸುತ್ತಿರುವ ಅಮೆರಿಕ ಭಾರತದ ಜೊತೆ ನಿಷ್ಠುರವಾಗಿ ನಡೆದುಕೊಳ್ಳಲು ಹಿಂದೇಟು ಹಾಕುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಆತ್ಮೀಯ ಸಂಬಂಧ ಹೊಂದಿರುವ ಅಧ್ಯಕ್ಷ ಜೋಬಿಡನ್ ಸರ್ಕಾರ ವಿವಾದದಿಂದ ಸಾಧ್ಯವಾದಷ್ಟು ಹೊರಗುಳಿಯಲು ಪ್ರಯತ್ನಿಸುತ್ತಿದೆ ಎಂದು ತಿಳಿದುಬಂದಿದೆ.

ಭಾರತ ಮತ್ತು ಅಮೆರಿಕ ನಡುವೆ ಎಲ್ಲಾ ಕ್ಷೇತ್ರಗಳಲ್ಲೂ ಸಾಕಷ್ಟು ವ್ಯಾಪಾರ ವಹಿವಾಟು ನಡೆಯುತ್ತಿದೆ. ಇತ್ತೀಚಿನ ದಶಕಗಳಲ್ಲಿ ಉಭಯ ರಾಷ್ಟ್ರಗಳು ಭಾಯಿ ಭಾಯಿ ಎನ್ನುವಷ್ಟು ಹತ್ತಿರವಾಗಿವೆ. ಇಂತಹ ವೇಳೆ ಕೆನಡಾಕ್ಕಾಗಿ ಭಾರತದ ಸ್ನೇಹವನ್ನು ಕಳೆದುಕೊಳ್ಳಬಾರದೆಂದು ಅಮೆರಿಕಾದ ರಾಜತಾಂತ್ರಕ ಅಧಿಕಾರಿಗಳು ಜೋಬಿಡನ್‍ಗೆ ಸಲಹೆ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಗ್ಯಾರಂಟಿ ಸರ್ಕಾರದಲ್ಲಿ ಹುದ್ದೆ ಗುದ್ದಾಟ, ರಾಜಣ್ಣ ವಿರುದ್ಧ ಡಿಕೆಶಿ ಬೆಂಬಲಿಗರ ಆಕ್ರೋಶ

ದಕ್ಷಿಣ ಏಷ್ಯಾದಲ್ಲಿ ಚೀನಾದ ಪ್ರಾಬಲ್ಯವನ್ನು ಕುಗ್ಗಿಸಬೇಕಾದರೆ ಭಾರತದ ಜೊತೆ ನಾವು ನಿಲ್ಲಲೇ ಬೇಕು. ಹತ್ಯೆಗೀಡಾದ ಹರ್ದೀಪ್ ಸಿಂಗ್ ನಿಜ್ಜರ್ ಕೆನಡಾದ ಪ್ರಜೆ ಎಂದು ಅಲ್ಲಿನ ಸರ್ಕಾರ ಹೇಳುತ್ತಿದೆ. ಆದರೆ ಆತ ಮೋಸ್ಟ್ ವಾಂಟೆಡ್ ಉಗ್ರ ಎಂದು ಭಾರತ ಹೇಳಿದೆ. ಸಾಲದ್ದಕ್ಕೆ ನಮ್ಮ ಬಳಿ ಆರೋಪವನ್ನು ಪುಷ್ಠೀಕರಿಸುವ ಸಾಕ್ಷ್ಯಾಧಾರಗಳಿವೆ ಎಂದು ಹೇಳುತ್ತಿದೆ.

ಇಂತಹ ಸಂದರ್ಭದಲ್ಲಿ ನಾವು ವಿವಾದದಿಂದ ಸುರಕ್ಷಿತ ಅಂತರವನ್ನು ಕಾಪಾಡಿಕೊಳ್ಳಬೇಕು. ಉಭಯ ರಾಷ್ಟ್ರಗಳ ನಡುವೆ ಪರಿಸ್ಥಿತಿ ಕೈಮೀರದಂತೆ ತಿಳಿ ಹೇಳಬೇಕು. ರಾಜತಾಂತ್ರಿಕ ಮಾರ್ಗದಲ್ಲೇ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಸಲಹೆ ನೀಡಬಹುದೇ ಹೊರತು ವ್ಯಾಪಾರ, ವಾಣಿಜ್ಯವಹಿವಾಟು ಉದ್ದೇಶದಿಂದ ಭಾರತದ ಜೊತೆ ನಿಷ್ಠುರವಾಗಿ ನಡೆದುಕೊಳ್ಳುವುದು ಅಷ್ಟೊಂದು ಸಮಂಜಸವಲ್ಲ ಎಂದು ಸಿಗ್ನಂ ಗ್ಲೋಬಲ್ ಅಡ್ವೈಸರ್ ಸಂಸ್ಥಾಪಕರು ಹೇಳಿದ್ದಾರೆ.

ಉಭಯ ರಾಷ್ಟ್ರಗಳ ನಡುವೆ ಸಾರ್ವಭೌಮತ್ವ ಪ್ರಶ್ನೆ ಎದುರಾಗಿದೆ. ಅಮೆರಿಕ ನೇರವಾಗಿ ಮಧ್ಯಸ್ಥಿಕೆ ವಹಿಸಿಕೊಂಡರೆ ಭಾರತದ ಸಾತ್ವಿಕ ಆಕ್ರೋಶಕ್ಕೆ ತುತ್ತಾಗಬಹುದು. ಇದು ಅತ್ಯಂತ ಸೂಕ್ಷ್ಮವಾದ ವಿಷಯವಾಗಿರುವುದರಿಂದ ಜೋಬಿಡನ್ ಸರ್ಕಾರ ಅತ್ಯಂತ ಎಚ್ಚರಿಕೆ ವಹಿಸುವುದು ಅಗತ್ಯ ಎಂದು ಹೇಳಿದ್ದಾರೆ.