ಬೆಂಗಳೂರು,ಜೂ.14- ನಡು ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸಿಕೊಂಡು ವಾಹನ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದ ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷನನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಳೆದ 12 ರಂದು ರಾತ್ರಿ ತನ್ನ ಹುಟ್ಟುಹಬ್ಬ ಆಚರಣೆಗಾಗಿ ಭಕ್ತವತ್ಸಲ ಎಂಬಾತ ನರಸೀಪುರ ಮುಖ್ಯರಸ್ತೆಯಲ್ಲಿ ಬೀದಿಬದಿ ವ್ಯಾಪಾರಸ್ಥರನ್ನು ಸೇರಿಸಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾನೆ. ಆ ವೇಳೆ ಪಟಾಕಿ ಸಿಡಿಸಿ ಗಲಾಟೆ-ಗದ್ದಲ ಮಾಡಿದ್ದಲ್ಲದೆ ಸಾರ್ವಜನಿಕರಿಗೆ ಉಪದ್ರ ನೀಡಿದ್ದರು.
ಹುಟ್ಟುಹಬ್ಬ ಆಚರಣೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದರು. ಪೊಲೀಸರ ಸೋಷಿಯಲ್ ಮೀಡಿಯಾದ ವಿಂಗ್ ಇದನ್ನು ಗಮನಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಇದೀಗ ಸಂಘದ ಅಧ್ಯಕ್ಷ ಭಕ್ತವತ್ಸಲನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.