ರಕ್ಷಣಾ ಸಚಿವರಾಗಿ ಜೇಟ್ಲಿ ಅಧಿಕಾರ ಸ್ವೀಕಾರ
ನವದೆಹಲಿ, ಮಾ.14-ಗೋವಾ ರಾಜಕೀಯಕ್ಕೆ ಮರಳಿರುವ ಮನೋಹರ್ ಪರಿಕ್ಕರ್ ರಾಜೀನಾಮೆಯಿಂದ ತೆರವಾಗಿರುವ ರಕ್ಷಣಾ ಖಾತೆಯನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಇಂದು ವಿಧ್ಯುಕ್ತವಾಗಿ ವಹಿಸಿಕೊಂಡರು. ರಕ್ಷಣಾ ಖಾತೆಯನ್ನು ಜೇಟ್ಲಿ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ. ಗೋವಾ ಮುಖ್ಯಮಂತ್ರಿಯಾಗಿ ನಿಯೋಜಿತರಾದ ಪರಿಕ್ಕರ್ ನಿನ್ನೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪ್ರಧಾನಿ ನರೇಂದ್ರ ಮೋದಿ ಕೋರಿಕೆ ಮೇರೆಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅಂಗೀಕರಿಸಿದ್ದರು.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments