ರಸ್ತೆವಿಭಜಕಕ್ಕೆ ಕಾರು ಡಿಕ್ಕಿ : ಇಬ್ಬರು ಸಾವು
ಕುಣಿಗಲ್,ಫೆ.2-ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಉರುಳಿಬಿದ್ದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟು ಮೂವರು ಗಂಭೀರ ಗಾಯಗೊಂಡಿರುವ ಘಟನೆ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಪಳನಿಸ್ವಾಮಿ(65), ಸರಸಮ್ಮ(40) ಮೃತಪಟ್ಟ ದುರ್ದೈವಿಗಳು. ನಿನ್ನೆ ಸಂಜೆ ಬೆಂಗಳೂರಿನಿಂದ ಕಡೂರಿಗೆ ತಮ್ಮ ಸಂಬಂಧಿಕರ ಮದುವೆಗೆಂದು ಸ್ಕಾರ್ಪಿಯೊ ಕಾರಿನಲ್ಲಿ ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 75ರ ಬೇಗೂರು ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಉರುಳಿಬಿದ್ದಿದೆ. ಪರಿಣಾಮ ಪಳನಿಸ್ವಾಮಿ, ಸರಸಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೋಹನ್ಸುಂದರ್, ಗೀತಾ, ಪೂಜಾ ಗಂಭೀರ ಗಾಯಗೊಂಡಿದ್ದು, ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪಿಎಸ್ಐ ಕೇಶವಮೂರ್ತಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >