ಬೆಂಗಳೂರು,ಜು.27– ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 1,52,760 ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರ ಸರಬರಾಜು ಆಗುವುದು ಬಾಕಿ ಇದೆ ಎಂದು ಕೃಷಿ ಸಚಿವ ಎಂ.ಚಲುವರಾಯ ಸ್ವಾಮಿ ತಿಳಿಸಿದ್ದಾರೆ.
ಈ ಸಂಬಂಧ ಎಕ್್ಸನಲ್ಲಿ ಪೋಸ್ಟ್ ಮಾಡಿರುವ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 11,17,000 ಮೆಟ್ರಿಕ್ ಟನ್ ರಸಗೊಬ್ಬರ ಹಂಚಿಕೆಯಾಗಿದೆ ಎಂದಿದ್ದಾರೆ. ಏಪ್ರಿಲ್ನಿಂದ ನಿನ್ನೆಯವರೆಗೆ ಯೂರಿಯ ರಸಗೊಬ್ಬರದ ಬೇಡಿಕೆ, 6,80,655 ಮೆಟ್ರಿಕ್ ಟನ್ನಷ್ಟಿದೆ. ಕೇಂದ್ರ ಸರ್ಕಾರ 5,27,895 ಮೆಟ್ರಿಕ್ ಟನ್ ಯೂರಿಯಾವನ್ನು ಸರಬರಾಜು ಮಾಡಿದೆ. ಹಳೆಯ ದಾಸ್ತಾನು 3,46,499 ಮೆಟ್ರಿಕ್ ಟನ್ ಇತ್ತು ಅವರು ಹೇಳಿದ್ದಾರೆ.
ಒಟ್ಟು 8,74,394 ಮೆಟ್ರಿಕ್ ಟನ್ ಯೂರಿಯ ದಾಸ್ತಾನಿನಲ್ಲಿ 7,30,659 ಮೆಟ್ರಿಕ್ ಟನ್ ವಿತರಣೆ ಮತ್ತು ಮಾರಾಟ ಮಾಡಲಾಗಿದೆ. ಇನ್ನು 1,53,735 ಮೆಟ್ರಿಕ್ ಟನ್ ದಾಸ್ತಾನಿದೆ ಎಂದು ಮಾಹಿತಿ ನೀಡಿದ್ದಾರೆ. ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಯೂರಿಯ ರಸಗೊಬ್ಬರದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದ್ದರು.
- ಸಿಎಂ ತವರಿನಲ್ಲಿ ಮತ್ತೆ ಬಾಲ ಬಿಚ್ಚಿದ ಮೈಕ್ರೋ ಫೈನಾನ್ಸ್ ಕಂಪನಿಗಳು, ಸಾಲದ ಕಂತು ಕಟ್ಟದಿದ್ದಕ್ಕೆ ಮನೆ ಜಪ್ತಿ
- ಪಟೇಲ್ ಅವರ ಏಕೀಕೃತ ಭಾರತದ ಕನನು ಸನನಾಗಿಸಿದ್ದು ಪ್ರಧಾನಿ ಮೋದಿ : ಅಮಿತ್ ಶಾ
- ಸರ್ದಾರ್ ಪಟೇಲ್ 150ನೇ ಜನ್ಮ ದಿನಾಚರಣೆ : ಏಕತಾ ಪ್ರತಿಜ್ಞೆ ಬೋಧಿಸಿದ ಪ್ರಧಾನಿ ಮೋದಿ
- ಹೋಟೆಲ್ನಲ್ಲಿ ಸಿಕ್ಕಿದ 7 ಲಕ್ಷ ಮೌಲ್ಯದ ಚಿನ್ನದ ಸರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಸಪ್ಲೇಯರ್
- ಜೆಟ್ಬ್ಲೂ ವಿಮಾನ ತುರ್ತು ಭೂಸ್ಪರ್ಶ, ಹಲವು ಪ್ರಯಾಣಿಕರಿಗೆ ಗಾಯ
