Sunday, September 29, 2024
Homeಜಿಲ್ಲಾ ಸುದ್ದಿಗಳು | District Newsಮಲೈ ಮಹದೇಶ್ವರಸ್ವಾಮಿ ಹುಂಡಿಯಲ್ಲಿ 28 ದಿನದಲ್ಲಿ 1.64 ಕೋಟಿ ರೂ. ಕಾಣಿಕೆ ಸಂಗ್ರಹ

ಮಲೈ ಮಹದೇಶ್ವರಸ್ವಾಮಿ ಹುಂಡಿಯಲ್ಲಿ 28 ದಿನದಲ್ಲಿ 1.64 ಕೋಟಿ ರೂ. ಕಾಣಿಕೆ ಸಂಗ್ರಹ

1.64 crore donation collected in Malai Mahadeshwara Hundi

ಹನೂರು, ಸೆ.27- ತಾಲ್ಲೂಕಿನ ಪುಣ್ಯ ಕ್ಷೇತ್ರ ಶ್ರೀ ಮಲೈ ಮಹದೇಶ್ವರಬೆಟ್ಟ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ವತಿಯಿಂದ ಸಾಲೂರು ಬೃಹನಠಾಧ್ಯಕ್ಷ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಜೀಗಳ ದಿವ್ಯ ಸಾನಿಥ್ಯದಲ್ಲಿ ಕಾರ್ಯದರ್ಶಿ ಎ. ಇ. ರಘುರವರ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು 28 ದಿನದಲ್ಲಿ 1.64 ಕೋಟಿ ರೂ. ನಗದು ರೂಪದಲ್ಲಿ ಸಂಗ್ರಹವಾಗಿದೆ ಮತ್ತು 21 ಗ್ರಾಂ. ಚಿನ್ನ 2.100 ಕೆ.ಜಿ. ಬೆಳ್ಳಿ ಸಂಗ್ರಹವಾಗಿದೆ.

ಭಕ್ತಾದಿಗಳು ಹರಿಕೆ ರೂಪದಲ್ಲಿ ಸಲ್ಲಿಸಿದ ಕಾಣಿಕೆ 28 ದಿನದಲ್ಲಿ ಸಂಗ್ರಹ ಆಗಿರುವ ಮಾದಪ್ಪನ ಹುಂಡಿಯಲ್ಲಿ 1,64,22,932 ಕೋಟಿ ರೂ. ನಗದು 21 ಗ್ರಾಂ.ಚಿನ್ನ ಮತ್ತು 2.100 ಕೆ.ಜಿ ಬೆಳ್ಳಿಯ ಪದಾರ್ಥಗಳು ಸಂಗ್ರಹವಾಗಿದೆ.

ಮ.ಬೆಟ್ಟದ ಖಾಸಗಿ ಬಸ್‌‍ ನಿಲ್ದಾಣ ವಾಣಿಜ್ಯ ಸಂಕೀರ್ಣ ಸಿಸಿಟಿವಿ ಕ್ಯಾಮೆರಾ ಕಣ್ಗಾವಲಿನಲ್ಲಿ ಮತ್ತು ಮ.ಬೆಟ್ಟ ಪೊಲೀಸರ ಬಂದೋಬಸ್ತ್‌ ನಲ್ಲಿ ಬೆಳಿಗ್ಗೆ 6.30 ಗಂಟೆಗೆ ಪ್ರಾರಂಭವಾದ ಹುಂಡಿ ಹಣ ಎಣಿಕೆ ಕಾರ್ಯವು ಸಂಜೆ 5ರವರೆಗೂ ನಡೆಯಿತು.

ಹುಂಡಿ ಎಣಿಕೆ ಪ್ರಕ್ರಿಯೆಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ರಘ ಎ.ಈ ಉಪ ಕಾರ್ಯದರ್ಶಿ ಜಿ.ಎಲ್‌.ಚಂದ್ರಶೇಖರ ಸರಗೂರ ಮಹದೇವಸ್ವಾಮಿ ಹಣಕಾಸು ಲೆಕ್ಕ ಪತ್ರ ಸಲಹೆಗಾರ ನಾಗೇಶ್‌ ಜಿಲ್ಲಾಡಳಿತ ಕಛೇರಿಯ ಕು.ಶ್ವೇತಾ ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು ಪೊಲೀಸ್‌‍ ಅಧಿಕಾರಿಗಳು ಮತ್ತು ಬ್ಯಾಂಕ್‌ ಅಪ್‌ ಬರೋಡ ವ್‌ಯವಸ್ಥಾಪಕರು ಮತ್ತು ಸಿಬ್ಬಂದಿಗಳು ಹಾಜರಿದ್ದರು.

RELATED ARTICLES

Latest News