Sunday, September 8, 2024
Homeರಾಜ್ಯಪುರಸಭೆ ಸದಸ್ಯ ಸ್ಕ್ರಾಪ್‌ ರವಿ ಹಂತಕರ ಸೆರೆಗೆ 2 ತಂಡ ರಚನೆ

ಪುರಸಭೆ ಸದಸ್ಯ ಸ್ಕ್ರಾಪ್‌ ರವಿ ಹಂತಕರ ಸೆರೆಗೆ 2 ತಂಡ ರಚನೆ

ಆನೇಕಲ್‌, ಜು.25- ಮನೆಗೆ ನುಗ್ಗಿ ಪುರಸಭೆ ಸದಸ್ಯನ ಹತ್ಯೆಗೈದು ಪರಾರಿಯಾಗಿರುವ ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.ಪುರಸಭೆ ಸದಸ್ಯ ರವಿ ಮನೆಯ ಆವರಣದಲ್ಲಿಯೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಹಂತಕರ ಬಂಧನಕ್ಕೆ ಪೋಲಿಸರು ಹುಡುಕಾಟ ನಡೆಸಿದ್ದಾರೆ.

ಪುರಸಭೆಯ 22ನೇ ವಾರ್ಡ್‌ ಸದಸ್ಯ ಹಾಗೂ ಕಾಂಗ್ರೆಸ್‌‍ ಮುಖಂಡರಾಗಿದ್ದ ರವಿ ಅಲಿಯಾಲ್‌ ಸ್ಕ್ರಾಪ್‌ ರವಿ ಬಹದ್ದೂರ್‌ ಪುರದ ತಮ ನಿವಾಸದಲ್ಲಿರುವುದನ್ನು ಖಚಿತಪಡಿಸಿಕೊಂಡ ದುಷ್ಕರ್ಮಿಗಳು ನಿನ್ನೆ ರಾತ್ರಿ 8.30ರ ಸಂದರ್ಭದಲ್ಲಿ ಏಕಾಏಕಿ ಮನೆಗೆ ನುಗ್ಗಿ ಮಾರಕಾಸಗಳಿಂದ ರವಿ ಮೇಲೆ ಹಲ್ಲೆ ನಡೆಸಿ ಕೊಲೆಗೈದು ಪರಾರಿಯಾಗಿದ್ದಾರೆ.

ರವಿ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್‌‍ಪಿ ಸಿ.ಕೆ. ಬಾಬು ಭೇಟಿ ನೀಡಿದ ನಂತರ ಮಾದ್ಯಮದವರೊಂದಿಗೆ ಮಾತನಾಡಿ, ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿದ್ದು, ಅವರ ಬಂಧನಕ್ಕೆ ಈಗಾಗಲೇ ಎರಡು ತಂಡಗಳನ್ನು ರಚನೆ ಮಾಡಿದ್ದೇವೆ.

ತನಿಖೆ ನಂತರ ಕೊಲೆಗೆ ನಿಖರ ಕಾರಣ ತಿಳಿಯಲಿದೆ ಎಂದರು. ಸ್ಥಳಕ್ಕೆ ಶಾಸಕ ಬಿ.ಶಿವಣ್ಣ ಭೇಟಿ ನೀಡಿ ರವಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

RELATED ARTICLES

Latest News