ತುಮಕೂರು ಭಾಗದಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣ : ಡಾ.ಜಿ.ಪರಮೇಶ್ವರ್

ಬೆಂಗಳೂರು,ಅ.18- ತುಮಕೂರು ಭಾಗದಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದರಿಂದ ಅನುಕೂಲವಾಗಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆಲಮಂಗಲ-ಕುಣಿಗಲ್ ಮಾರ್ಗದಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕೆಂಬ ಪ್ರಸ್ತಾವನೆಯ ಬಗ್ಗೆ ಪ್ರತಿಕ್ರಿಯಿಸಿದರು. ತುಮಕೂರು-ದಾಬಸ್ಪೇಟೆ ನಡುವೆ ವಿಮಾನ ನಿಲ್ದಾಣ ನಿರ್ಮಾಣ ಸೂಕ್ತ ಎಂಬ ಚರ್ಚೆಗಳು ಇವೆ. ಆದರೆ ತಾಂತ್ರಿಕವಾಗಿ ನೆಲಮಂಗಲ-ಕುಣಿಗಲ್ ರಸ್ತೆಯನ್ನು ಆದ್ಯತೆಯನ್ನಾಗಿ ಪರಿಗಣಿಸಲಾಗುತ್ತದೆ ಎಂಬ ಮಾಹಿತಿ ಇದೆ ಎಂದರು.ಏಷ್ಯಾದಲ್ಲೇ ಅತಿದೊಡ್ಡ ಕೈಗಾರಿಕಾ ಹಬ್ನ್ನು ತುಮಕೂರಿನಲ್ಲಿ ನಿರ್ಮಿಸಲಾಗಿದೆ. 20 ಸಾವಿರ ಎಕರೆಯಲ್ಲಿ ಕೈಗಾರಿಕಾ ವಸಾಹತು … Continue reading ತುಮಕೂರು ಭಾಗದಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣ : ಡಾ.ಜಿ.ಪರಮೇಶ್ವರ್