Thursday, September 19, 2024
Homeರಾಷ್ಟ್ರೀಯ | Nationalಹೊಸ ಕ್ರಿಮಿನಲ್ ಕಾನೂನುಗಳಲ್ಲಿ ಶಿಕ್ಷೆಗಿಂತ ನ್ಯಾಯಕ್ಕೆ ಆದ್ಯತೆ ನೀಡಿದ್ದೇವೆ : ಮೋದಿ

ಹೊಸ ಕ್ರಿಮಿನಲ್ ಕಾನೂನುಗಳಲ್ಲಿ ಶಿಕ್ಷೆಗಿಂತ ನ್ಯಾಯಕ್ಕೆ ಆದ್ಯತೆ ನೀಡಿದ್ದೇವೆ : ಮೋದಿ

ನವದೆಹಲಿ,ಆ.15-ಈ ವರ್ಷದ ಜುಲೈನಲ್ಲಿ ಜಾರಿಗೆ ತಂದ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಎಲ್ಲರಿಗೂ ನ್ಯಾಯ ಖಾತ್ರಿಪಡಿಸುವ ಗುರಿಯನ್ನು ಹೊಂದಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕೆಂಪುಕೋಟೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ರಾಷ್ಟ್ರ ಉದ್ದೇಶಿಸಿ ಮಾತನಾಡಿದ ಅವರು, ಎಲ್ಲರಿಗೂ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ನಾವು ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ತಂದಿದ್ದೇವೆ. ಹೊಸ ಕ್ರಿಮಿನಲ್ ಕಾನೂನುಗಳಲ್ಲಿ ನಾವು ಶಿಕ್ಷೆಗಿಂತ ನ್ಯಾಯಕ್ಕೆ ಆದ್ಯತೆ ನೀಡಿದ್ದೇವೆ ಎಂದರು.

ಈ ವರ್ಷದ ಜುಲೈನಲ್ಲಿ, ಮೂರು ಹೊಸ ಕ್ರಿಮಿನಲ್ ಕಾನೂನುಗಳು ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ, ಮತ್ತು ಭಾರತೀಯ ಸಾಕ್ಷಿ ಅಧಿನಿಯಮ್ ಜಾರಿಗೆ ತರಲಾಗಿದೆ. ಕೆಲಸ ಮಾಡುವ ಮಹಿಳೆಯರಿಗೆ, ಹೆರಿಗೆ ರಜೆಯನ್ನು 12 ವಾರಗಳಿಂದ 26 ವಾರಗಳಿಗೆ ಹೆಚ್ಚಿಸಲಾಗಿದೆ.

ನಾವು ಮಹಿಳೆಯರನ್ನು ಗೌರವಿಸುವುದು ಮಾತ್ರವಲ್ಲ ಹೆಣ್ಣುಮಕ್ಕಳ ವಿಚಾರದಲ್ಲಿ ಸೂಕ್ಷ್ಮ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತಿದೆ. ತನ್ನ ಮಗುವನ್ನು ಗುಣಮಟ್ಟದ ನಾಗರಿಕನನ್ನಾಗಿ ಮಾಡಲು ತಾಯಿಯ ಅವಶ್ಯಕತೆಗಳಿಗೆ ಅಡ್ಡಿಯಾಗುವುದಿಲ್ಲ ಎಂದರು.

ಲೆಕ್ಕವಿಲ್ಲದಷ್ಟು ಸವಾಲುಗಳಿವೆ. ಒಳಗೆ ಸವಾಲುಗಳಿವೆ, ಹೊರಗೆಯೂ ಸವಾಲುಗಳಿವೆ. ನಾವು ಬಲಶಾಲಿಯಾದಂತೆ, ಗಮನ ಹೆಚ್ಚಾದಂತೆ ಸವಾಲುಗಳೂ ಹೆಚ್ಚುತ್ತಿವೆ. ಅಂತಹ ಶಕ್ತಿಗಳಿಗೆ ನಾನು ಹೇಳಲು ಬಯಸುತ್ತೇನೆ, ಭಾರತದ ಅಭಿವೃದ್ಧಿಯು ಯಾರಿಗೂ ತೊಂದರೆ ತರುವುದಿಲ್ಲ, ಬುದ್ಧನ ಆದೇಶ ಪಾಲಿಸುತ್ತೇವೆ.

ಯುದ್ಧ ನಮ ಮಾರ್ಗವಲ್ಲ,ಆದ್ದರಿಂದ ಭಾರತದ ಪ್ರಗತಿಯ ಬಗ್ಗೆ ಜಗತ್ತು ಚಿಂತಿಸಬೇಕಾಗಿಲ್ಲ, ನೀವು ಭಾರತದ ಮೌಲ್ಯಗಳನ್ನು ಅರ್ಥಮಾಡಿಕೊಳ್ಳಬೇಕು, ಭಾರತದ ಸಾವಿರಾರು ವರ್ಷಗಳ ಇತಿಹಾಸವನ್ನು ಅರ್ಥಮಾಡಿಕೊಳ್ಳಬೇಕು, ನಮನ್ನು ಬಿಕ್ಕಟ್ಟು ಎಂದು ಪರಿಗಣಿಸಬೇಡಿ ಎಂದಿದ್ದಾರೆ.

RELATED ARTICLES

Latest News