ಬೆಂಗಳೂರು, ಜ.5- ಪ್ರತಿಷ್ಠಿತ ಆರ್ಎಂವಿ ಎರಡನೇ ಹಂತದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿದ್ದ ಶೆಡ್ಗಳನ್ನು ತೆರವುಗೊಳಿಸಿ ಸುಮಾರು 30 ಕೋಟಿ ರೂ.ಮೌಲ್ಯದ ಆಸ್ತಿಯನ್ನು ವಶಪಡಿಸಿ ಕೊಳ್ಳಲಾಗಿದೆ.
ನಾಗಶೆಟ್ಟಿಹಳ್ಳಿಯ ಆರ್ಎಂವಿ 2ನೇ ಹಂತದಲ್ಲಿರುವ ಸರ್ವೆ ನಂಬರ್ 71/3 ರಲ್ಲಿನ 32 ಗುಂಟೆ ಜಾಗ ಬಿಡಿಎಗೆ ಸೇರಿತ್ತು. ಆದರೆ, ಈ ಜಾಗದಲ್ಲಿ ಎನ್ ಐ ಸೊಸೈಟಿಯವರು ಅನಕೃತವಾಗಿ ತಾತ್ಕಾಲಿಕ ಶೆಡ್ ಗಳನ್ನು ನಿರ್ಮಾಣ ಮಾಡಿದ್ದರು.
ಸದರಿ ಜಾಗವನ್ನು ತೆರವುಗೊಳಿಸುವಂತೆ ಹಲವು ಬಾರಿ ಸೂಚನೆ ನೀಡಿದ್ದರೂ ತೆರವುಗೊಳಿಸಿರಲಿಲ್ಲ. ಇಂದು ಬೆಳಗ್ಗೆ ಬಿಡಿಎ ಕಾರ್ಯಪಾಲಕ ಅಭಿಯಂತರ ಕುಮಾರ್, ಪೊಲೀಸ್ ಅಕಾರಿಗಳಾದ ಭಾಸ್ಕರ್ ಮತ್ತು ರವಿಕುಮಾರ್ ನೇತೃತ್ವದಲ್ಲಿ ಬಿಡಿಎ ಸಿಬ್ಬಂದಿ ಶೆಡ್ಗಳನ್ನು ನೆಲಸಮ ಮಾಡಿ ಸದರಿ ಜಾಗವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಇದರ ಪ್ರಸ್ತುತ ದರ ಸುಮಾರು 30 ಕೋಟಿ ರೂ.ಗಳಾಗಿದ್ದು, ಜಾಗಕ್ಕೆ ಕಾಂಪೌಂಡ್ ನಿರ್ಮಿಸಿ ಬಿಡಿಎ ಸ್ವತ್ತು ಎಂದು ಸೂಚನಾ ಫಲಕವನ್ನು ಹಾಕಲಾಗಿದೆ.
