Wednesday, May 1, 2024
Homeಬೆಂಗಳೂರುನಾಯಂಡಹಳ್ಳಿ ಮೇಲ್ಸೇತುವೆಯಿಂದ ಹಾರಿ ನವವಿವಾಹಿತ ಗುತ್ತಿಗೆ ಕಾರ್ಮಿಕ ಆತ್ಮಹತ್ಯೆ

ನಾಯಂಡಹಳ್ಳಿ ಮೇಲ್ಸೇತುವೆಯಿಂದ ಹಾರಿ ನವವಿವಾಹಿತ ಗುತ್ತಿಗೆ ಕಾರ್ಮಿಕ ಆತ್ಮಹತ್ಯೆ

ಬೆಂಗಳೂರು, ಏ.12- ನಾಲ್ಕು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಕವಿಕಾದ ಗುತ್ತಿಗೆ ನೌಕರ ಫ್ಲೈಓವರ್ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಜ್ಞಾನ ಭಾರತಿ ವ್ಯಾಪ್ತಿಯ ಸೊಣ್ಣೇನಹಳ್ಲಿ ನಿವಾಸಿ ನವೀನ್(30) ಆತ್ಮಹತ್ಯೆಗೆ ಶರಣಾದ ನವವಿವಾಹಿತ.

ಮೈಸೂರು ರಸ್ತೆಯಲ್ಲಿರುವ ಕವಿಕಾದಲ್ಲಿ ನವೀನ್ ಗುತ್ತಿಗೆ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. 4 ತಿಂಗಳ ಹಿಂದೆಯಷ್ಟೇ ನವೀನ್ ವಿವಾಹವಾಗಿದ್ದರು. ಇಂದು ಬೆಳಗ್ಗೆ 8.20ರ ಸುಮಾರಿನಲ್ಲಿ ಕೆಲಸಕ್ಕೆ ಹೋಗುವುದಾಗಿ ಮನೆಯಲ್ಲಿ ಹೇಳಿ ಬೈಕ್ ತೆಗೆದುಕೊಂಡು ಬಂದು ನಾಯಂಡಹಳ್ಳಿ ಪೈಓವರ್ ಮೇಲೆ ನಿಲ್ಲಿಸಿ ಏಕಾಏಕಿ ಕೆಳಗೆ ಜಿಗಿದಿದ್ದಾರೆ.

ಕರ್ತವ್ಯದಲ್ಲಿದ್ದ ಬ್ಯಾಟರಾಯನಪುರ ಸಂಚಾರಿ ಠಾಣಾ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಆ್ಯಂಬುಲೆನ್ಸ್ ಕರೆ ಮಾಡಿ ನಂತರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಆತನನ್ನು ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿದ್ದಾರೆ ಎಂದು ದೃಢೀಕರಿಸಿದ್ದಾರೆ.

ಈತನ ಆತ್ಮಹತ್ಯೆಗೆ ಕಾರಣ ಸಧ್ಯಕ್ಕೆ ತಿಳಿದುಬಂದಿಲ್ಲ. ಬ್ಯಾಟರಾಯನಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News