Thursday, May 2, 2024
Homeರಾಷ್ಟ್ರೀಯಸುರಂಗ ಕಾರ್ಯಾಚರಣೆಗೆ ಮತ್ತೆ ಅಡ್ಡಿ

ಸುರಂಗ ಕಾರ್ಯಾಚರಣೆಗೆ ಮತ್ತೆ ಅಡ್ಡಿ

ಉತ್ತರಕಾಶಿ, ನ.25- ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಕಳೆದ 13 ದಿನಗಳಿಂದ ಸಿಲುಕಿರುವ 41 ಕಾರ್ಮಿಕರನ್ನು ಜೀವಂತವಾಗಿ ಹೊರತರುವ ರಕ್ಷಣಾ ಕಾರ್ಯಚರಣೆ ಮುಂದುವರಿದಿದ್ದು, ತಾಂತ್ರಿಕ ಕಾರಣಗಳಿಂದಾಗಿ ರಕ್ಷಣಾ ಕಾರ್ಯಾಚರಣೆ ಮತ್ತಷ್ಟು ವಿಳಂಬವಾಗಿದೆ.

ಡ್ರಿಲ್ಲಿಂಗ್ ಮಷಿನ್‍ನಲ್ಲಿ ಪದೇ ಪದೇ ದೋಷ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ನಿಲ್ಲಿಸಲಾಯಿತು. ಡ್ರಿಲ್ಲಿಂಗ್ ಮಷಿನ್‍ನಲ್ಲಿ ಕಂಡು ಬಂದಿರುವ ತಾಂತ್ರಿಕ ಸಮಸ್ಯೆ ಪತ್ತೆ ಹಚ್ಚಿ ಸರಿಪಡಿಸಲು ವಿಶೇಷ ತಂಡವನ್ನು ಸ್ಥಳಕ್ಕೆ ಕರೆಸಲಾಗಿದೆ. ಯಂತ್ರ ಸರಿಪಡಿಸಿದ ಬಳಿಕ ಕಾರ್ಯಾಚರಣೆ ಮತ್ತೆ ಆರಂಭವಾಗಲಿದೆ.

ಕಳೆದ 13 ದಿನಗಳಿಂದ ಕಾರ್ಯಚರಣೆ ನಡೆಯುತ್ತಿದ್ದು, ಕಾರ್ಯಚರಣೆ ಮುಕ್ತಾಯಗೊಳ್ಳಬೇಕಿತ್ತು. ಆದರೆ, ಕಡೆಯ ಹಂತದ ಡ್ರಿಲ್ಲಿಂಗ್ ವೇಳೆ ತಾಂತ್ರಿಕ ಸಮಸ್ಯೆ ಎದುರಾದ ಬಳಿಕ ಕಾರ್ಯಚರಣೆ ನಿಲ್ಲಿಸಲಾಗಿತ್ತು. ಇಂದು ಬೆಳಗ್ಗೆಯಿಂದ ಮತ್ತೆ ಪುನಾರಂಭಗೊಂಡಿದ್ದು, ಈವರೆಗೂ ರಕ್ಷಣಾ ತಂಡವು 50 ಮೀಟರ್‍ಗಳವರೆಗೆ ಕೊರೆದಿದೆ. ಸಿಕ್ಕಿಬಿದ್ದ ಕಾರ್ಮಿಕರನ್ನು ತಲುಪಲು ಇನ್ನೂ 10 ಮೀಟರ್‍ಗಳು ಉಳಿದಿವೆ. ಇನ್ನು ಪೈಪ್‍ಗಳನ್ನು ಮೃದುವಾಗಿ ಇಳಿಸಲು 6 ಮೀಟರ್‍ಗಳ ಮೂರು ಪೈಪ್‍ಗಳನ್ನು ಬಳಸಲಾಗುತ್ತಿದೆ.

ಯಂತ್ರವು ಇಲ್ಲಿಯವರೆಗೆ 46.8 ಮೀಟರ್ ಕೊರೆದಿದ್ದು, ಒಟ್ಟು 57 ಮೀಟರ್ ಕೊರೆದು ಪೈಪ್‍ಗಳನ್ನು ಹಾಕುವ ಮೂಲಕ ಪ್ರತ್ಯೇಕ ದಾರಿಯನ್ನು ನಿರ್ಮಿಸಬೇಕಿದೆ. ಯಂತ್ರಕ್ಕೆ ಕಬ್ಬಿಣ ಕವಚ ಅಡ್ಡಿಯಾಗಿದ್ದು, ಅದನ್ನು ಕೊರೆಯಲಾಗದೆ ಯಂತ್ರ ಕೆಟ್ಟು ನಿಲ್ಲುತ್ತಿದೆ.

ಸುರಂಗದೊಳಗೆ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ನಿರಂತರವಾಗಿ ಶ್ರಮ ಹಾಕಲಾಗುತ್ತಿದೆ. ಕೆಲವೊಮ್ಮೆ ಮೆಷಿನ್‍ಗಳು ಕೈಕೊಡುತ್ತಿವೆ. ಈ ಮಧ್ಯೆ ಸುರಂಗದೊಳಗೆ ಪೈಪ್‍ಗಳನ್ನು ಜೋಡಿಸಲು ವೆಲ್ಡಿಂಗ್ ಮಾಡುತ್ತಿರುವ ಹೊಗೆ, ಕಾರ್ಮಿಕರ ಮೂಗಿಗೆ ಬಡಿದಿದೆ. ಇದರಿಂದ ಕಾರ್ಮಿಕರಲ್ಲಿ ಸುರಂಗದಿಂದ ಹೊರಹೋಗುತ್ತೇವೆ ಎಂಬ ಆಶಾಭಾವ ಮೂಡಿದೆ. ಕಾರ್ಮಿಕರರಿಗೆ ವೆಲ್ಡಿಂಗ್ ವಾಸನೆ ತಲುಪಿರುವುದನ್ನು ವಾಕಿಟಾಕಿ ಮೂಲಕ ಕಾರ್ಮಿಕರು ಅಕಾರಿಗಳಿಗೆ ತಿಳಿಸಿದ್ದಾರೆ.

ಇನ್ನು ಮಾಧ್ಯಮಗಳು ರಕ್ಷಣಾ ಕಾರ್ಯದ ಸಮಯದ ಮಿತಿಯ ಬಗ್ಗೆ ಊಹಿಸಬೇಡಿ ಎಂದು ವಿಪತ್ತು ನಿರ್ವಹಣ ಪ್ರಾಧಿಕಾರ ಸಲಹೆ ನೀಡಿದೆ. ರಕ್ಷಣಾ ಕಾರ್ಯಾಚರಣೆಯನ್ನು ಪೂರ್ಣಗೊಳಿಸುವ ಸಮಯದ ಬಗ್ಗೆ ಊಹಿಸಬೇಡಿ. ಇದು ತಪ್ಪು ಅಭಿಪ್ರಾಯವನ್ನು ಸೃಷ್ಟಿಸುತ್ತದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮಾಧ್ಯಮಗಳಿಗೆ ಸಲಹೆ ನೀಡಿದೆ.

ಇದನ್ನು 100% ನಿಖರತೆಯೊಂದಿಗೆ ಹೇಳಲು ಸಾಧ್ಯವಾಗಲಿಲ್ಲ. ಆದರೆ ಅವರು ನಿರೀಕ್ಷಿಸುತ್ತಿರುವುದು ಮುಂದಿನ 5.4 ಮೀಟರ್‍ಗಳಲ್ಲಿ ಗರ್ಡರ್‍ಗಳು, ಪೈಪ್‍ಗಳು ಮತ್ತು ಲೋಹದ ತಟ್ಟೆಗಳಂತಹ ನಿರಂತರ ಲೋಹದ ವಸ್ತುವಿಲ್ಲ ಎಂದು ಅವರು ಸೂಚಿಸಿದ್ದರು ಎಂದು ರಕ್ಷಣಾ ಕಾರ್ಯಾಚರಣೆ ನೋಡಲ್ ಅಧಿಕಾರಿಯಾಗಿರುವ ಉತ್ತರಾಖಂಡ ಕಾರ್ಯದರ್ಶಿ ನೀರಜ್ ಖೈರ್ವಾಲ್ ಹೇಳಿದ್ದಾರೆ.

ಡಿಕೆಶಿ ಪ್ರಕರಣ ವಾಪಾಸ್ ನಿರ್ಧಾರ ದುರದೃಷ್ಟಕರ: ಬಿ.ವೈ.ವಿಜಯೇಂದ್ರ

ಕಾರ್ಯಾಚರಣೆ ಮುಂದೂಡಿಕೆ ಡ್ರಿಲ್ ನಿಲ್ಲಿಸಿದ ನಂತರ, ಸಿಕ್ಕಿಬಿದ್ದ ಕಾರ್ಮಿಕರನ್ನು ಹಸ್ತಚಾಲಿತವಾಗಿ ಹತ್ತಿರಕ್ಕೆ ತರುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಆದರೆ ರಕ್ಷಣೆ ಅಸಾಧ್ಯವಾಗಿದೆ ಎಂದು ಅಕಾರಿಗಳು ತಿಳಿಸಿದ್ದಾರೆ
ಆಗರ್ ಯಂತ್ರವು ಮತ್ತೆ ಕೆಲವು ತೊಂದರೆ ಎದುರಿಸಿದೆ ಮತ್ತು ಅದಕ್ಕಾಗಿಯೇ ಅದನ್ನು ವಾಪಸ್ ತೆಗೆಯಲಾಗುತ್ತಿದೆ. ಏಕಕಾಲದಲ್ಲಿ ಸಿಕ್ಕಿಬಿದ್ದ ಕಾರ್ಮಿಕರನ್ನು ತಲುಪಿಸಲು ಪ್ರಯತ್ನಿಸಲಾಗುತ್ತಿದೆ.

ಕಾರ್ಮಿಕರ ಪರಿಸ್ಥಿತಿ ಹೇಗಿದೆ: ಕಾರ್ಮಿಕರು 13 ದಿನಗಳಿಂದ ಸಿಕ್ಕಿಬಿದ್ದಿದ್ದರೂ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರು ಸಮರ್ಪಕವಾಗಿ ಬಟ್ಟೆ ಧರಿಸಿದ್ದಾರೆ ಮತ್ತು ನಾವು ಅವರೊಂದಿಗೆ ಮಾತನಾಡುವಾಗ, ಅವರು ತಾವಾಗಿಯೇ ಹೊರಬರುವುದಾಗಿ ಹೇಳಿದ್ದಾರೆ. ಅದು ಅವರಲ್ಲಿರುವ ಮಾನಸಿಕ ಶಕ್ತಿಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾರ್ಮಿಕರು ತಮ್ಮ ಕುಟುಂಬಗಳೊಂದಿಗೆ ಮಾತನಾಡುತ್ತಿದ್ದಾರೆ ಮತ್ತು ಈ ಹಿಂದೆ ಅಂತಹ ಪರಿಸ್ಥಿತಿಯಲ್ಲಿದ್ದ ಒಬ್ಬ ಕಾರ್ಮಿಕರು ತಮ್ಮ ಸಹೋದ್ಯೋಗಿಗಳಿಗೆ ಅವರ ನೈತಿಕತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತಿದ್ದಾರೆ. ಕಾರ್ಮಿಕರಿಗೆ ಕತ್ತರಿಸಿದ ಹಣ್ಣುಗಳು, ಬಿಸಿ ಚಪಾತಿ, ದಾಲ್ ಮತ್ತು ಸಬ್ಜಿ ನೀಡಲಾಗುತ್ತಿದೆ. ಇವುಗಳನ್ನು ಬಾಟಲಿಗಳಲ್ಲಿ ತುಂಬಿ ಪೈಪ್ ಮೂಲಕ ತಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಸರ್ಕಾರದ ತೀರ್ಮಾನವನ್ನು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡುತ್ತೇನೆ : ಯತ್ನಾಳ್

ಸುರಂಗದೊಳಗೆ ಸಿಲುಕಿರುವ ಕಾರ್ಮಿಕರಿಗೆ ಆಹಾರ ಪಾನೀಯ ತಯಾರಿಸಿ ರವಾನಿಸಲು ಏಳು ಮಂದಿಯನ್ನು ನೇಮಿಸಲಾಗಿದೆ. ಈ ಹಿಂದೆ ಪಫ್ ರೈಸ್ ಸರಬರಾಜು ಮಾಡಲಾಗಿತ್ತು. ಪ್ರತಿ 45 ನಿಮಿಷಗಳಿಗೊಮ್ಮೆ 4 ಇಂಚಿನ ಪೈಪ್ ಮೂಲಕ ಕಳುಹಿಸಲಾಗುತ್ತಿತ್ತು. ಹುರಿದ ಬೇಳೆ, ನೆನೆಸಿದ ಬೇಳೆ, ಬಾದಾಮಿ, ಗೋಡಂಬಿ, ಒಣದ್ರಾಕ್ಷಿ ಮತ್ತು ಪಾಪ್‍ಕಾರ್ನ್ ಮತ್ತು ಕಡಲೆಕಾಯಿಗಳನ್ನು ನೀಡಲಾಗುತ್ತಿತ್ತು. ಈಗ ಆರು ಇಂಚಿನ ಪೈಪ್ ಮೂಲಕ ಕಾರ್ಮಿಕರಿಗೆ ಬೇಯಿಸಿದ ಆಹಾರ ನೀಡಲಾಗುತ್ತಿದೆ. ಇನ್ನು ಉತ್ತರಕಾಶಿಯಲ್ಲಿ ನಡೆಯುತ್ತಿರುವ ಆಪರೇಷನ್‍ಗಾಗಿ ಬೆಂಗಳೂರಿನ ತಂಡವು ಸೇರಿಕೊಂಡಿದೆ.

ಸ್ಕ್ವಾಡ್ರನ್ ಇನ್ರಾದಿಂದ ಆರು ಸುರಂಗ ಗಣಿಗಾರಿಕೆ ತಜ್ಞ ಎಂಜಿನಿಯರ್‍ಗಳ ತಂಡ ತೆರಳಿದೆ. ತಂಡವು ಡ್ರೋನ್ ಕ್ಯಾಮೆರಾಗಳ ಸಹಾಯದಿಂದ ಸುರಂಗದೊಳಗಿನ ಪರಿಸ್ಥಿತಿಗಳನ್ನು ರೆಕಾರ್ಡ್ ಮಾಡಿ ರಕ್ಷಣಾ ತಂಡದ ಜೊತೆಗೆ ಚಿಕೊಳ್ಳಲಿದೆ. ಮತ್ತು ಕೃತಕ ಬುದ್ದಿಮತ್ತೆ ಸಹಾಯದಿಂದ ಡೇಟಾವನ್ನು ಸಂಗ್ರಹಿಸಿದೆ. ಈ ಡೇಟಾ ರಕ್ಷಣಾ ಕಾರ್ಯಾಚರಣೆಗೆ ಸಾಕಷ್ಟು ಸಹಾಯ ಮಾಡಿದೆ.

ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿಗೆ ಜೊತೆಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಟನಲ್ ಒಳಗೆ ಇರುವ ಕಾರ್ಮಿಕರ ಪರಿಸ್ಥಿತಿ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿರುವ ರಕ್ಷಣಾ ತಂಡಗಳ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ನಿನ್ನೆಯಷ್ಟೆ ಸಿಎಂ ಧಾಮಿ ಟನಲ್ ಒಳಗಿರುವ ಕಾರ್ಮಿಕರ ಜೊತೆಗೆ ಮಾತುಕತೆ ನಡೆಸಿ ಸಾಧ್ಯವಾದಷ್ಟು ಬೇಗ ಎಲ್ಲರನ್ನು ಹೊರ ಕರೆತರುವ ಭರವಸೆ ನೀಡಿದ್ದಾರೆ.

ನ.12ರಂದು ಸುರಂಗ ಕುಸಿದಿದ್ದು ಕಳೆದ 14 ದಿನಗಳ ಕಾರ್ಮಿಕರು ಟನಲ್ ಒಳಗೆ ಸಿಲುಕಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೂ ನಿರಂತರವಾಗಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಉತ್ತರಕಾಶಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗವು ಮಹತ್ವಾಕಾಂಕ್ಷೆಯ ಚಾರ್ ಧಾಮ್ ಯೋಜನೆಯ ಭಾಗವಾಗಿದೆ, ಇದು ಹಿಂದೂ ಯಾತ್ರಾ ಸ್ಥಳಗಳಾದ ಬದರಿನಾಥ್, ಕೇದಾರನಾಥ, ಗಂಗೋತ್ರಿ ಮತ್ತು ಯಮುನೋತ್ರಿಗಳಿಗೆ ಸಂಪರ್ಕವನ್ನು ಹೆಚ್ಚಿಸಲು ರಾಷ್ಟ್ರೀಯ ಮೂಲಸೌಕರ್ಯ ಉಪಕ್ರಮವಾಗಿದೆ.

RELATED ARTICLES

Latest News