ಪ್ರಯಾಗ್ ರಾಜ್, ಫೆ.11- ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಈವರೆಗೆ 43 ಕೋಟಿ ಜನರು ಅಮೃತ ಸ್ನಾನ ಮಾಡಿದ್ದಾರೆ.
144 ವರ್ಷಗಳ ಬಳಿಕ ಪ್ರಯಾಗ್ ರಾಜ್ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದೆ. ಜ.13 ರಿಂದ ಈ ಕುಂಭಮೇಳ ಆರಂಭವಾಗಿದೆ. ಅಧ್ಯಾತ, ಭಕ್ತಿ-ಭಾವದ ಕೇಂದ್ರವಾಗಿರುವ ಕುಂಭಮೇಳಕ್ಕೆ ದೇಶ-ವಿದೇಶಗಳಿಂದ ಕೋಟ್ಯಂತರ ಸಂಖ್ಯೆಯಲ್ಲಿ ನಿತ್ಯವೂ ಭಕ್ತರು ಹರಿದುಬರುತ್ತಿದ್ದಾರೆ.
ತ್ರಿವೇಣಿ ಸಂಗಮದಲ್ಲಿ ಅಮೃತ ಸ್ನಾನ ಮಾಡಿ ಪುನೀತರಾಗುತ್ತಿದ್ದಾರೆ. ಸಾಧು-ಸಂತರನ್ನು ಭೇಟಿಯಾಗಿ ಆಶೀರ್ವಾದ ಪಡೆಯುತ್ತಿದ್ದಾರೆ. ಫೆ.26 ರವರೆಗೆ ಮಹಾ ಕುಂಭಮೇಳ ಪ್ರಯಾಗಗಗ ರಾಜ್ನಲ್ಲಿ ನಡೆಯಲಿದೆ.
ಮಹಾ ಕುಂಭಮೇಳದ ಅಂಗವಾಗಿ ರಾಷ್ಟ್ರಪತಿ ದ್ರೌಪತಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಅವರು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ. ಇದೇ ರೀತಿ ದೇಶ-ವಿದೇಶಗಳ ಗಣ್ಯರು ಮಹಾ ಕುಂಭ ಮೇಳಕ್ಕೆ ಭೇಟಿ ಕೊಟ್ಟಿದ್ದಾರೆ.