Saturday, April 27, 2024
Homeರಾಜ್ಯಕಾರಿಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ, ಒಂದೇ ಕುಟುಂಬದ ಐವರ ಸಾವು

ಕಾರಿಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ, ಒಂದೇ ಕುಟುಂಬದ ಐವರ ಸಾವು

ಕಾರವಾರ,ಡಿ.8- ಅತಿವೇಗವಾಗಿ ಮುನ್ನುಗ್ಗಿದ್ದ ಕೆಎಸ್ಆರ್‌ಟಿಸಿ ಬಸ್‍ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐದು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಶಿರಸಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿನಲ್ಲಿ ನಡೆದಿದೆ.

ಮೃತರನ್ನು ಮಂಗಳೂರು ಮೂಲದ ಸುಹಾಸ್, ಪುಷ್ಪಲತಾ, ನಿತ್ಯಲಕ್ಷ್ಮಿ, ರಾಮಕೃಷ್ಣ ರಾವ್, ಅರವಿಂದ್ ಎಂದು ಗುರುತಿಸಲಾಗಿದೆ. ಒಂದೇ ಕುಟುಂಬದ ಈ ಐದು ಮಂದಿ ಮದುವೆ ಸಮಾ ರಂಭಕ್ಕಾಗಿ ಮಂಗಳೂರಿನಿಂದ
ಶಿರಸಿಗೆ ಕಾರಿನಲ್ಲಿ ಹೋಗುತ್ತಿದ್ದರು.

ಗ್ಯಾರಂಟಿ ಯೋಜನೆಗಳಿಗೆ SC-ST ಅನುದಾನ ಬಳಕೆ : ಮೇಲ್ಮನೆಯಲ್ಲಿ ಕೋಲಾಹಲ

ಉತ್ತರ ಕನ್ನಡ ಜಿಲ್ಲೆ, ಶಿರಸಿ-ಕುಮುಟಾ ರಸ್ತೆಯ ಬಂಡಲ್ ಗ್ರಾಮದ ಬಳಿ ಅತಿವೇಗವಾಗಿ ಮುನ್ನುಗ್ಗಿ ಬಂದ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್ ಅತಿವೇಗದಿಂದಾಗಿ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ಬಸ್‍ನಲ್ಲಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುದ್ದಿ ತಿಳಿದು ಶಿರಸಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ನಾಲ್ವರ ಮೃತದೇಹಗಳನ್ನು ಕಾರಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News