ಕೊಚ್ಚಿ, ಆ.11- ಹಣಕಾಸು ಅವ್ಯವಹಾರ ಆರೋಪ ಪ್ರಕರಣ ಕುರಿತು ಜಾರಿ ನಿರ್ದೇಶನಾಲಯ (ಇಡಿ)ನಡೆಸುತ್ತಿರುವ ತನಿಖೆಯನ್ನು ಪ್ರಶ್ನಿಸಿ ಕೇರಳದ ಐವರು ಎಲ್ಡಿಎಫ್ ಶಾಸಕರು ಕೇರಳ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಸಿಪಿಐ(ಎಂ) ಶಾಸಕರಾದ ಕೆ ಕೆ ಶೈಲಜಾ, ಐ ಬಿ ಸತೀಶ್ ಮತ್ತು ನಟ ಎಂ ಮುಖೇಶ, ಸಿಪಿಐ ಶಾಸಕ ಇ ಚಂದ್ರಶೇಖರನ್ ಮತ್ತು ಕಾಂಗ್ರೆಸ್ (ಜಾತ್ಯತೀತ) ಶಾಸಕ ಕಡನಪ್ಪಲ್ಲಿ ರಾಮಚಂದ್ರನ್ ಅವರು ಇಡಿ ತನಿಖೆಯನ್ನು ವಿರೋಧಿಸಿ ಹೈಕೋರ್ಟ್ನಲ್ಲಿ ಜಂಟಿ ಅರ್ಜಿ ಸಲ್ಲಿಸಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಎಸ್ ಮಣಿಕುಮಾರ್ ಮತ್ತು ನ್ಯಾಯಮೂರ್ತಿ ಶಾಜಿ ಪಿ ಚಾಲಿ ಅವರ ಪೀಠದ ಮುಂದೆ ಈ ಅರ್ಜಿಯ ವಿಚಾರಣೆಗೆ ನಡೆಯಲಿದೆ.
ವಿದೇಶಿ ವಿನಿಮಯ, ಮೂಲಸೌಕರ್ಯ ನಿ ಹೊಡಿಕೆಯಲ್ಲಿ ನಡೆದಿರುವ ಅಕ್ರಮ ಕುರಿತು ತನಿಖೆಗೆ ಹಾಜರಾಗ ಬೇಕೆಂದು ನೀಡಿದ
ಸಮನ್ಸ್ಗಳನ್ನು ಕೂಡ ಪ್ರಶ್ನಿಸಿ ಪ್ರತ್ಯೇಕ ಮನವಿಯಲ್ಲಿ ಮಾಜಿ ರಾಜ್ಯ ಹಣಕಾಸು ಸಚಿವ ಥಾಮಸ್ ಐಸಾಕ್ ಸಲ್ಲಿಸಿದ್ದಾರೆ.