ಕಂಟೈನರ್‌-ಕಾರ್ ನಡುವೆ ಭೀಕರ ಅಪಘಾತ, ಮಗು ಸೇರಿ 6 ಜನ ಸ್ಥಳದಲ್ಲೇ ಸಾವು

ಹಾಸನ,ಮೇ 26- ಕಂಟೈನರ್‌ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಆರು ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-75ರ ಈಚನಹಳ್ಳಿ ಬಳಿ ಇಂದು ಬೆಳಿಗ್ಗೆ ನಡೆದಿದೆ.ನಾರಾಯಣಸ್ವಾಮಿ, ಸುನಂದ, ರವಿಕುಮಾರ್‌, ನೇತ್ರ, ಚೇತನ್‌ (ಬಾಲಕ), ರಾಕೇಶ್‌ (ಚಾಲಕ) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮೃತರು ಚಿಕ್ಕಬಳ್ಳಾಪುರ ಜಿಲ್ಲೆ ಹೊಸಕೋಟೆ ತಾಲೂಕಿನ ಅಂದರಹಳ್ಳಿ ಹಾಗೂ ದೇವನಹಳ್ಳಿ ಬಳಿಯ ಕಾರಹಳ್ಳಿ ಮೂಲದವರೆಂದು ತಿಳಿದುಬಂದಿದೆ.ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು ಈಟಿಯೋಸ್‌‍ ಕಾರಿನಲ್ಲಿ ತೆರಳಿದ್ದ ಒಂದೇ ಕುಟುಂಬದ … Continue reading ಕಂಟೈನರ್‌-ಕಾರ್ ನಡುವೆ ಭೀಕರ ಅಪಘಾತ, ಮಗು ಸೇರಿ 6 ಜನ ಸ್ಥಳದಲ್ಲೇ ಸಾವು