Friday, May 3, 2024
Homeರಾಷ್ಟ್ರೀಯಕಂದಕಕ್ಕೆ ಬಸ್ ಉರುಳಿ ಬಿದ್ದು 6 ಪ್ರಯಾಣಿಕರ ಸಾವು

ಕಂದಕಕ್ಕೆ ಬಸ್ ಉರುಳಿ ಬಿದ್ದು 6 ಪ್ರಯಾಣಿಕರ ಸಾವು

ಡೆಹ್ರಾಡೂನ್,ಅ.9- ನೈನಿತಾಲ್ ಜಿಲ್ಲೆಯ ಕಲಾಧುಂಗಿ ಪ್ರದೇಶದಲ್ಲಿ ಬಸ್ ಕಂದಕಕ್ಕೆ ಬಿದ್ದ ಪರಿಣಾಮ ಆರು ಪ್ರಯಾಣಿಕರು ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿದ್ದಾರೆ. ಬಸ್ ಹರ್ಯಾಣದ ಹಿಸಾರ್ ಜಿಲ್ಲೆಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿತ್ತು. ನೈನಿತಾಲ್ ಜಿಲ್ಲಾ ನಿಯಂತ್ರಣ ಕೊಠಡಿಯಿಂದ ಬಂದ ಮಾಹಿತಿಯ ಪ್ರಕಾರ, ಪ್ರವಾಸಿಗರು ನೈನಿತಾಲ್‍ಗೆ ಭೇಟಿ ನೀಡಿ ಹಿಂದಿರುಗುತ್ತಿದ್ದಾಗ ಅವರ ಬಸ್ ಕಲಾಧುಂಗಿಯ ನಲ್ನಿ ಪ್ರದೇಶದಲ್ಲಿ 100 ಮೀಟರ್ ಆಳದ ಕಮರಿಗೆ ಬಿದ್ದಿದೆ.

ಮಾಹಿತಿ ಪ್ರಕಾರ ರಾತ್ರಿ 8 ಗಂಟೆ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಆರು ಪ್ರವಾಸಿಗರು ಸಾವನ್ನಪ್ಪಿದ್ದಾರೆ ಮತ್ತು 27 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ದೆಹಲಿಯಲ್ಲಿ ಬೈಕ್‍ನಲ್ಲಿ ಬಂದ ವ್ಯಕ್ತಿಗಳಿಂದ ಹಂಗೇರಿ ಪ್ರಜೆಯ ದರೋಡೆ

ಅಪಘಾತದ ವೇಳೆ ಬಸ್‍ನಲ್ಲಿ 33 ಮಂದಿ ಪ್ರಯಾಣಿಕರಿದ್ದರು. ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಅಪಘಾತಕ್ಕೆ ಕಾರಣಗಳು ಇನ್ನೂ ತಿಳಿದುಬಂದಿಲ್ಲ.

RELATED ARTICLES

Latest News