Friday, May 17, 2024
Homeರಾಷ್ಟ್ರೀಯಗಾಢ ಮಂಜಿನಿಂದಾಗಿ ಕಾರು ಟ್ರಕ್‍ಗೆ ಡಿಕ್ಕಿ, ಇಬ್ಬರು ಪೊಲೀಸರು ಬಲಿ

ಗಾಢ ಮಂಜಿನಿಂದಾಗಿ ಕಾರು ಟ್ರಕ್‍ಗೆ ಡಿಕ್ಕಿ, ಇಬ್ಬರು ಪೊಲೀಸರು ಬಲಿ

ನವದೆಹಲಿ, ಜ 9 (ಪಿಟಿಐ) ಹರಿಯಾಣದ ಸೋನಿಪತ್ ಜಿಲ್ಲೆಯ ಕುಂಡಲಿ ಗಡಿಯ ಬಳಿ ಗಾಢ ಮಂಜಿನಿಂದಾಗಿ ಕಾರು ಟ್ರಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದೆಹಲಿ ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾತ್ರಿ 11.30ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಲಿಪಶುಗಳನ್ನು ವಾಯುವ್ಯ ಜಿಲ್ಲೆಯ ವಿಶೇಷ ಸಿಬ್ಬಂದಿಯ ಇನ್ಸ್‍ಪೆಕ್ಟರ್ ದಿನೇಶ್ ಬೇನಿವಾಲ್ ಮತ್ತು ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾದ ಎಟಿಒ ಇನ್‍ಸ್ಪೆಕ್ಟರ್ ರಣವೀರ್ ಎಂದು ಗುರುತಿಸಲಾಗಿದೆ. ಅವರು ವೈಯಕ್ತಿಕ ಕಾರಿನಲ್ಲಿ ತಮ್ಮ ಸೋನಿಪತ್ ಮನೆಗಳಿಗೆ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹರಿಯಾಣದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇವರು ಸಂಚರಿಸುತ್ತಿದ್ದ ಕಾರು ನಿಲುಗಡೆ ಮಾಡಿದ ಟ್ರಕ್‍ಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

RELATED ARTICLES

Latest News