Homeರಾಷ್ಟ್ರೀಯನಟಿ ತ್ರಿಷಾ ಕುರಿತ ಕೀಳುಮಟ್ಟದ ಹೇಳಿಕೆ ನೀಡಿದ ಉದಯನಿಧಿ ಸ್ಟಾಲಿನ್ ಬಂಧನ

ನಟಿ ತ್ರಿಷಾ ಕುರಿತ ಕೀಳುಮಟ್ಟದ ಹೇಳಿಕೆ ನೀಡಿದ ಉದಯನಿಧಿ ಸ್ಟಾಲಿನ್ ಬಂಧನ

Udhayanidhi Stalin Arrested From His Home Over Remarks Against Actor Trisha

ಚೆನ್ನೈ-ನಟಿ ತ್ರಿಷಾ ಹಾಗೂ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ (ಟಿವಿಕೆ ಪಕ್ಷ) ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ, ತಮಿಳುನಾಡು ಪೊಲೀಸರು ವಿರೋಧ ಪಕ್ಷದ ಪ್ರಮುಖ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಮಂಗಳವಾರ ಬೆಳಿಗ್ಗೆ ಚೆನ್ನೈನಲ್ಲಿರುವ ಅವರ ನಿವಾಸದಲ್ಲಿ ಬಂಧಿಸಿದ್ದಾರೆ. ಈ ಬೆಳವಣಿಗೆಯು ತಮಿಳುನಾಡು ರಾಜಕೀಯದಲ್ಲಿ ಭಾರೀ ಕೋಲಾಹಲ ಸೃಷ್ಟಿಸಿದೆ.

ಮಂಗಳವಾರ ಬೆಳಿಗ್ಗೆ ಪೊಲೀಸರು ಉದಯನಿಧಿ ಸ್ಟಾಲಿನ್ ಅವರ ಮನೆಯ ಬಳಿ ಜಮಾಯಿಸಿ ಅವರನ್ನು ವಶಕ್ಕೆ ಪಡೆದರು. ಬಂಧನದ ಸಮಯದಲ್ಲಿಯೂ ಪೊಲೀಸರ ಬೆಂಗಾವಲಿನೊಂದಿಗೆ ನಗುತ್ತಾ ಕಾಣಿಸಿಕೊಂಡ ಉದಯನಿಧಿ, ಈ ಕ್ರಮವನ್ನು ಕೇವಲ “ತಮಾಷೆ” ಎಂದು ಕರೆದಿದ್ದು, ತಾನು ಇದರ ವಿರುದ್ಧ “ಕಾನೂನುಬದ್ಧವಾಗಿ ಹೋರಾಟ ಮಾಡುವುದಾಗಿ” ತಿಳಿಸಿದ್ದಾರೆ.

ಆದರೆ, ಈ ಬಂಧನ ರಾಜಕೀಯ ಸೇಡಿನಿಂದ ಕೂಡಿದೆ ಎಂಬ ವಾದವನ್ನು ಟಿವಿಕೆ (TVK) ಪಕ್ಷದ ಮುಖಂಡ ಅಮೆರಿಕಾಯ್ ನಾರಾಯಣನ್ ತಳ್ಳಿಹಾಕಿದ್ದಾರೆ. “ಮುಖ್ಯಮಂತ್ರಿ ವಿಜಯ್ ಅಥವಾ ಟಿವಿಕೆ ವಿರುದ್ಧ ಮಾತನಾಡಿದ್ದಕ್ಕಾಗಿ ಅವರನ್ನು ಬಂಧಿಸಿಲ್ಲ, ಬದಲಿಗೆ ಸಾರ್ವಜನಿಕ ವೇದಿಕೆಯಲ್ಲಿ ಮಹಿಳೆಯೊಬ್ಬರನ್ನು ಕೀಳಾಗಿ ಅವಮಾನಿಸಿರುವುದಕ್ಕಾಗಿ ಕಾನೂನು ಕ್ರಮ ಕೈಗೊಳ್ಳಲಾಗಿದೆ” ಎಂದು ಅವರು ಎನ್‌ಡಿಟಿವಿ ವಾಹಿನಿಗೆ ಸ್ಪಷ್ಟಪಡಿಸಿದ್ದಾರೆ.

ಅಲ್ಲದೆ, ಉದಯನಿಧಿ ಅವರ ಈ ರೀತಿಯ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸಿರುವ ಟಿವಿಕೆ ನಾಯಕರು, ಅವರ ಹೆಸರನ್ನು “ಅಶ್ಲೀಲ ನಿಧಿ” ಎಂದು ಬದಲಾಯಿಸಬೇಕು ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಟಿಯರ ಹಾಗೂ ಮಹಿಳೆಯರ ಗೌರವಕ್ಕೆ ಧಕ್ಕೆ ತರುವಂತಹ ರಾಜಕೀಯ ನಾಯಕರ ವರ್ತನೆಗೆ ಸಾರ್ವಜನಿಕ ವಲಯದಿಂದಲೂ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ರಾಜ್ಯದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಸೋಮವಾರ ತಂಜಾವೂರಿನಲ್ಲಿ ಕಾವೇರಿ ನದಿ ನೀರಿನ ವಿವಾದದ ಕುರಿತು ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ರ್ಯಾಲಿಯನ್ನುದ್ದೇಶಿಸಿ ಉದಯನಿಧಿ ಸ್ಟಾಲಿನ್ ಮಾತನಾಡುತ್ತಿದ್ದರು. ಈ ವೇಳೆ ತಮಿಳುನಾಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಜ್ಯಕ್ಕೆ ಹನಿ ನೀರು ಸಿಗದಿದ್ದರೂ ಮುಖ್ಯಮಂತ್ರಿಗಳು ಮೌನವಾಗಿದ್ದಾರೆ ಎಂದು ಟೀಕಿಸಿದರು.

ಈ ಸಂದರ್ಭದಲ್ಲಿ ಸಭೆಯಲ್ಲಿದ್ದ ಕೆಲವರು ನಟಿ ತ್ರಿಷಾ ಅವರ ಹೆಸರನ್ನು ಹೇಳಿ ಘೋಷಣೆಗಳನ್ನು ಕೂಗಿದರು. ಇದಕ್ಕೆ ಪ್ರತಿಕ್ರಿಯಿಸಿದ ಉದಯನಿಧಿ, ಸಾರ್ವಜನಿಕ ವೇದಿಕೆಯಲ್ಲಿ ನಟಿ ತ್ರಿಷಾ ಮತ್ತು ಮುಖ್ಯಮಂತ್ರಿ ವಿಜಯ್ ಅವರನ್ನು ಉದ್ದೇಶಿಸಿ ವಿವಾದಾತ್ಮಕ ಹಾಗೂ ಆಕ್ಷೇಪಾರ್ಹ ದ ನುಡಿಗಳನ್ನಾಡಿದ್ದರು.

ಈ ಹೇಳಿಕೆಯು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ರಾಜಕೀಯ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.ಈ ಹೇಳಿಕೆಯು ಅಸಭ್ಯ, ಲೈಂಗಿಕ ವ್ಯಂಗ್ಯ ಹಾಗೂ ಮಹಿಳೆಯರ ಅಪಮಾನವೆಂದು ಟಿವಿಕೆ ಮತ್ತು ಬಿಜೆಪಿ ಪಕ್ಷಗಳು ತೀವ್ರವಾಗಿ ಖಂಡಿಸಿವೆ.ಬಂಧನದ ಭೀತಿಯ ಹಿನ್ನೆಲೆಯಲ್ಲಿ ಉದಯನಿಧಿ ನಿರೀಕ್ಷಣಾ ಜಾಮೀನು ಕೋರಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಇಂದು ಮಧ್ಯಾಹ್ನ ವಿಚಾರಣೆ ನಡೆಯಲಿದೆ.

ಇದು ಕಾವೇರಿ ನೀರು ಹಾಗೂ ಸರ್ಕಾರದ ವೈಫಲ್ಯಗಳಿಂದ ಜನರ ಗಮನ ಬೇರೆಡೆ ಸೆಳೆಯಲು ವಿರೋಧ ಪಕ್ಷಗಳು ಸೃಷ್ಟಿಸಿರುವ ರಾಜಕೀಯ ಪ್ರೇರಿತ ಕಟ್ಟುಕಥೆ ಎಂದು ಡಿಎಂಕೆ ಸ್ಪಷ್ಟಪಡಿಸಿದೆ.

ಮತ್ತೊಂದೆಡೆ, ಡಿಎಂಕೆ ಪಕ್ಷವು ತನ್ನ ನಾಯಕನ ಪರವಾಗಿ ನಿಂತಿದ್ದು, ಮಾಜಿ ಸಚಿವ ಟಿ ಮನೋ ತಂಗರಾಜ್ ಈ ವಿವಾದವನ್ನು ತಳ್ಳಿಹಾಕಿದ್ದಾರೆ. ಕಾವೇರಿ ಸಮಸ್ಯೆ ಮತ್ತು ಡೆಲ್ಟಾ ರೈತರ ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ವಿರೋಧ ಪಕ್ಷಗಳು ಮಾಡುತ್ತಿರುವ ರಾಜಕೀಯ ಪಿತೂರಿ ಇದಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಪ್ರಸ್ತುತ ಚೆನ್ನೈನಲ್ಲಿರುವ ಉದಯನಿಧಿ ನಿವಾಸದ ಹೊರಗೆ ಪೊಲೀಸ್ ಭದ್ರತೆ ಕಲ್ಪಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಪಡೆದುಕೊಳ್ಳಲು ಮದ್ರಾಸ್ ಹೈಕೋರ್ಟ್‌ನಲ್ಲಿ ಅರ್ಜಿ ದಾಖಲಿಸಲಾಗಿದೆ. ನ್ಯಾಯಾಲಯದ ಇಂದಿನ ಆದೇಶದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

RELATED ARTICLES
spot_img

Latest News