Saturday, September 21, 2024
Homeಇದೀಗ ಬಂದ ಸುದ್ದಿ24ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳಿಗೆ ಜಯ

24ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳಿಗೆ ಜಯ

ಬೆಂಗಳೂರು,ಮಾ.4- ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ಸಿದ್ದತೆ ನಡೆಸಿರುವಂತೆ ಖಾಸಗಿ ಸುದ್ದಿ ವಾಹಿನಿ ಯೊಂದು ನಡೆಸಿರುವ ಸಮೀಕ್ಷೆಯಲ್ಲಿ ಈ ಬಾರಿ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ನೇತೃತ್ವದ ಎನ್‍ಡಿಎ ಮೈತ್ರಿಕೂಟ 24ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದೆ. ಇಂಡಿಯಾ ಟಿವಿ ಸಿಎನ್‍ಎಕ್ಸ್ ಸಹಭಾಗಿತ್ವದಲ್ಲಿ ನಡೆಸಿರುವ ದಕ್ಷಿಣ ಭಾರತ 130 ಲೋಕಸಭಾ ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ 60 ಸ್ಥಾನ ಹಾಗೂ ಎನ್‍ಡಿಎ ಮೈತ್ರಿಕೂಟ 38 ಹಾಗೂ 32 ಕ್ಷೇತ್ರಗಳು ವೈಎಸ್‍ಆರ್ ಕಾಂಗ್ರೆಸ್, ಟಿಡಿಪಿ, ಎಐಎಡಿಎಂಕೆ, ಬಿಆರ್‍ಎಸ್, ಎಐಎಂಐಎಂ ಪಕ್ಷಗಳ ಪಾಲಾಗಲಿವೆ ಎಂದು ಸಮೀಕ್ಷೆ ತಿಳಿಸಿದೆ.

ಉತ್ತರಭಾರತದಲ್ಲಿ ಬಿಜೆಪಿಗೆ ಭಾರೀ ಬಹುಮತ ಸಿಗುವ ಸಾಧ್ಯತೆ ಇದ್ದರೆ, ಇದಕ್ಕೆ ವ್ಯತಿರಿಕ್ತ ಎಂಬಂತೆ ದಕ್ಷಿಣ ಭಾರತದಲ್ಲಿ ಬಿಜೆಪಿ ಕರ್ನಾಟಕ, ತೆಲಂಗಾಣ, ಗೋವಾ ಮತ್ತು ತಮಿಳುನಾಡಿನಲ್ಲಿ ಖಾತೆ ತೆರೆಯುವ ಸಂಭವವಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ, ಜೆಡಿಎಸ್ ಎನ್‍ಡಿ ಮೈತ್ರಿಕೂಟ 24 ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡರೆ ಆಡಳಿತಾರೂಢ ಕಾಂಗ್ರೆಸ್ 4 ಸ್ಥಾನಗಳನ್ನು ಮಾತ್ರ ಗೆಲ್ಲಬಹುದೆಂದು ಚುನಾವಣಾಪೂರ್ವ ಸಮೀಕ್ಷೆ ಹೇಳಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಪ್ರಧಾನಿ ನರೇಂದ್ರಮೋದಿ ಅವರ ವರ್ಚಸ್ಸಿನ ಪರಿಣಾಮ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲುವ ಲಕ್ಷಣಗಳಿದ್ದು, ಕಾಂಗ್ರೆಸ್‍ಗೆ ಆಂತರಿಕ ಸಮಸ್ಯೆಗಳೇ ಹಿನ್ನಡೆ ಕಾರಣ ಎಂದು ತಿಳಿಸಿದೆ. ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಇದ್ದರೆ ಉಳಿದ ಕಡೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಗೆಲುವಿನ ರಣಕೇಕೆ ಹಾಕಲಿದೆ.

ಇನ್ನು ವಲಯವಾರು ಸಮೀಕ್ಷೆಯನ್ನು ಗಮನಿಸಿದರೆ ಉತ್ತರ ಕರ್ನಾಟಕದ 11 ಕ್ಷೇತ್ರಗಳ ಪೈಕಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯೂ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದರೆ, ಕಾಂಗ್ರೆಸ್ 2 ಕ್ಷೇತ್ರಗಳನ್ನು ಗೆಲ್ಲಲಿದೆ ಎಂದು ಹೇಳಲಾಗಿದೆ. ಕರಾವಳಿಯಲ್ಲಿ ಮೂರು ಕ್ಷೇತ್ರಗಳನ್ನು ಬಿಜೆಪಿ ಗೆಲ್ಲಲಿದೆ. ದಕ್ಷಿಣ ಕರ್ನಾಟಕದ 10 ಕ್ಷೇತ್ರಗಳಲ್ಲಿ ಪೈಕಿ ಬಿಜೆಪಿ – ಜೆಡಿಎಸ್ ಮೈತ್ರಿ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದು, ಕಾಂಗ್ರೆಸ್ 1 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎನ್ನಲಾಗಿದೆ.

ಇನ್ನು, ಬೆಂಗಳೂರಿನ ನಾಲ್ಕು ಕ್ಷೇತ್ರಗಳ ಪೈಕಿ ಬಿಜೆಪಿ ಮೂರು ಹಾಗೂ ಕಾಂಗ್ರೆಸ್ 1 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆಯಿಂದ ತಿಳಿದುಬಂದಿದೆ. ಕಾಂಗ್ರೆಸ್ ಮೂರು ಕ್ಷೇತ್ರಗಳ ಗಳಿಕೆ ಮಾಡಲಿದ್ದು, ಬಿಜೆಪಿ ಮೂರು ಸ್ಥಾನಗಳನ್ನು ಕಳೆದುಕೊಳ್ಳಲಿದೆ. ಕೂಡ ಒಂದು ಸ್ಥಾನವನ್ನು ಹೆಚ್ಚು ಗಳಿಸಲಿದೆ.

ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿಗಳು ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ತುಮಕೂರಿನಲ್ಲಿ ಗೆಲ್ಲುವ ಸಾಧ್ಯತೆ ಇದೆ. ಜೆಡಿಎಸ್ ಹಾಸನ ಹಾಗೂ ಮಂಡ್ಯದಲ್ಲಿ ಗೆಲುವು ಸಾಸಲಿದ್ದು, ಉಳಿದ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಕಾಣಲಿದೆ. ತಮಿಳುನಾಡಿನಲ್ಲಿ ಆಡಳಿತಾರೂಢ ಎಐಎಡಿಎಂಕೆ ಭಾರೀ ಮುನ್ನಡೆ ಸಾಧಿಸಿದರೆ ಕೇರಳದಲ್ಲಿ ಎಲ್‍ಡಿಎಫ್, ತೆಲಂಗಾಣದಲ್ಲಿ ಕಾಂಗ್ರೆಸ್, ಆಂಧ್ರಪ್ರದೇಶದಲ್ಲಿ ವೈಎಸ್‍ಆರ್ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂಬುದು ಸಮೀಕ್ಷೆಯಿಂದ ಗೊತ್ತಾಗಿದೆ. ಕೇವಲ ದಕ್ಷಿಣ ಭಾರತದ 130 ಲೋಕಸಭಾ ಕ್ಷೇತ್ರಗಳಲ್ಲಿ ಮಾತ್ರ ಸಮೀಕ್ಷೆ ನಡೆಸಲಾಗಿದೆ.

RELATED ARTICLES

Latest News