ಬೆಂಗಳೂರು,ಆ.23- ಕರ್ನಾಟಕದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರು ನಾಪತ್ತೆಯಾಗಿದ್ದಾರೆ ಎಂಬ ವರದಿಗಳು ಬಂದಿದ್ದವು. ಇದೀಗ ಅವರು ಸರ್ಕಾರದೊಂದಿಗೆ ಸಂಪರ್ಕ ಸಾಧಿಸಿ, ಕೌಟುಂಬಿಕ ತುರ್ತು ಪರಿಸ್ಥಿತಿಯ ಕಾರಣ ದಿಂದಾಗಿ ರಜೆ ಕೋರಿ ತಮೂರಿಗೆ ತೆರೆಳಿದ್ದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ಅವಧಿಯಲ್ಲಿ ಅವರ ಅಧಿಕೃತ ದೂರವಾಣಿ ಸಂಪರ್ಕಕ್ಕೆ ಸಿಗದಿರುವುದು ಅವರ ಇರುವಿಕೆಯ ಬಗ್ಗೆ ಗೊಂದಲ ಮತ್ತು ಊಹಾಪೋಹಗಳಿಗೆ ಕಾರಣವಾದಂತಿದೆ. ಇದೀಗ ಅವರು ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದು, ವಾಸ್ತವ ಪರಿಸ್ಥಿತಿಯನ್ನು ಜ್ಞಾನೇಂದ್ರಕುಮಾರ್ ಸ್ಪಷ್ಟಪಡಿಸಿದ್ದಾರೆ.
