Friday, April 11, 2025
Homeರಾಜ್ಯದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಂಕಿತ ನಕ್ಸಲರ ಓಡಾಟ, ಪೊಲೀಸರು ಆಲರ್ಟ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಂಕಿತ ನಕ್ಸಲರ ಓಡಾಟ, ಪೊಲೀಸರು ಆಲರ್ಟ್

ಮಂಗಳೂರು, ಮಾ.24: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಶಂಕಿತ ನಕ್ಸಲರು ಕಳೆದ ರಾತ್ರಿಬಂದು ಮೊಬೈಲ್ ಚಾರ್ಜ್ ಮಾಡಿ ಅಲ್ಲಿಂದ ಹೋಗಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ.
ಮಳೆಯಾಗುತ್ತಿದ್ದ ನಡುವೆ ಸುಮಾರು ಮೂವರು ಶಂಕಿತರ ತಂಡ ಐನೆಕಿದು ಗ್ರಾಮದ ಅಶೋಕ್ ಎಂಬುವರ ಮನೆಗೆ ಭೇಟಿ ನೀಡಿದ್ದಾರೆ.

ಮನೆಯವರ ಜೊತೆ ಸುಮಾರು ಒಂದು ತಾಸಿಗೂ ಅಕ ಕಾಲ ಮಾತುಕತೆ ನಡೆಸಿ ಮೊಬೈಲ್ ಚಾರ್ಜ್ ಮಾಡಿ ಅಲ್ಲಿಂದ ತೆರಳಿದ್ದಾರೆ ಎನ್ನಲಾಗುತ್ತಿದೆ.ಬಂದಿದ್ದ ಮೂವರ ಬಳಿಯೂ ಶಸ್ತ್ರಸ್ತ್ರಗಳಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ ಪೊಲೀಸರು ಆಲರ್ಟ್ ಆಗಿದ್ದಾರೆ.ಕಳೆದ ವಾರದ ಹಿಂದೆ ದಕ್ಷಿಣ ಕನ್ನಡ-ಕೊಡಗು ಗಡಿ ಭಾಗದ ಕೂಜಿಮಲೆಯ ಎಸ್ಟೇಟ್ ಅಂಗಡಿಗೆ ಬಂದಿದ್ದ ಶಂಕಿತ ನಕ್ಸಲರು,ಈಗ ಐನೆಕಿದುಯಲ್ಲಿ ಕಾಣಿಸಿಕೊಂಡಿದ್ದಾರೆ.

ಕೂಜಿಮಲೆ ಮತ್ತು ಐನೆಕಿದು ನಡುವೆ ಸುಮಾರು 25 ಕಿ.ಮೀ. ಅಂತರವಿದೆ. ಇದೇ ಭಾಗದಲ್ಲಿ ನಕ್ಸಲ್ ನಿಗ್ರಹ ದಳ ನಿರಂತರ ಶೋಧ ಕಾರ್ಯ ನಡೆಸುತ್ತಿದ್ದರೂ ಎಎನ್‍ಎಫ್ ತಂಡಕ್ಕೆ ಶಂಕಿತರು ಕಾಣಿಸಿರಲಿಲ್ಲ. ನಕ್ಸಲರು ಭೇಟಿ ನೀಡಿದ ಪ್ರದೇಶ ಕುಮಾರಪರ್ವತ ಸಾಲಿನ ಪಾಟಿ ಕುಮೇರಿ ದಟ್ಟ ಕಾಡಿಗೆ ಹತ್ತಿರವಿದೆ.

ಇಲ್ಲಿಂದ ಸೋಮವಾರಪೇಟೆ ಮತ್ತು ಇನ್ನೊಂದು ದಾರಿಯಾಗಿ ಗಾಳಿಬೀಡು. ಆ ಬಳಿಕ ಸಂಪಾಜೆ ಮೂಲಕ ಕೇರಳಕ್ಕೆ ಅರಣ್ಯಸಂಪರ್ಕ ಸಾಸಲು ಸಾಧ್ಯವಿದೆ ಎಂದು ಹೇಳಲಾಗುತ್ತಿದೆ ಪ್ರಸ್ತುತ ನಕ್ಸಲ್ ನಿಗ್ರಹ ದಳ ಶೋಧ ಚುರುಕುಗೊಳಿಸಿದೆ.

RELATED ARTICLES

Latest News