ಬೆಂಗಳೂರು,ಮಾ.29-ಟಿಕಟ್ ಸಿಗದೆ ಪಕ್ಷದ ವರಿಷ್ಠರ ವಿರುದ್ಧವೇ ಮುನಿಸಿಕೊಂಡಿದ್ದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರನ್ನು ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಚಾಲಕರನ್ನಾಗಿ ನೇಮಕ ಮಾಡಲಾಗಿದೆ.
ಈ ಕ್ಷೇತ್ರದಿಂದ ಗಾಯತ್ರಿ ಸಿದ್ದೇಶ್ವರ್ಗೆ ಟಿಕೆಟ್ ನೀಡಿದ್ದಕ್ಕೆ ಬೇಸರಗೊಂಡಿದ್ದ ಅವರು, ಪಕ್ಷದ ಕಾರ್ಯ ಚಟುವಟಿಕೆಗಳಿಂದ ದೂರ ಉಳಿದಿದ್ದರು. ಇದೀಗ ಅವರನ್ನು ದಾವಣಗೆರೆ ಜಿಲ್ಲಾ ಸಂಚಾಲರನ್ನಾಗಿ ನೇಮಕ ಮಾಡುವ ಮೂಲಕ ಭಿನ್ನಮತ ಶಮನಕ್ಕೆ ಪಕ್ಷದ ವರಿಷ್ಠರು ಕೈ ಹಾಕಿದ್ದಾರೆ.
- Advertisement -
ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರ ಸೂಚನೆ ಮೇರೆಗೆ ದಾವಣಗೆರೆ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜಶೇಖರ್ ನೇಮಕ ಮಾಡಿ ತಮ್ಮ ಆದೇಶ ಹೊರಡಿಸಿದ್ದಾರೆ.
- Advertisement -
