ಬೆಂಗಳೂರು : ಇಂದು ಮಧ್ಯಾಹ್ನ ಬೆಳಗಾವಿಯಿಂದ ಬೆಂಗಳೂರಿಗೆ ಬರುತ್ತಿರುವಾಗ ಇಂಧನ ಸಚಿವ ಕೆಜೆ ಜಾರ್ಜ್ ಸಿದ್ದ ಹೆಲಿಕ್ಯಾಪ್ಟರ್ ತಾಂತ್ರಿಕ ದೋಷದಿಂದ ತುರ್ತು ಭೂಸ್ಪರ್ಶ ಮಾಡಿದೆ.
ಬೆಂಗಳೂರಿಗೆ ಬರುವಾಗ ಪೈಲೆಟ್ ಹೆಲಿಕ್ಯಾಪ್ಟರ್ ನಲ್ಲಿ ದೋಷ ಕಂಡು ಅದನ್ನು ಚಿಕ್ಕಮಂಗಳೂರಿನ ಬಳಿ ತುರ್ತು ಭೂಸ್ಪರ್ಶ ಮಾಡಿದ್ದಾರೆ.
ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಮತ್ತು ಸಚಿವರು ಸುರಕ್ಷಿತರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸಿಂಗಲ್ ಇಂಜಿನ್ ಹೆಲಿಕ್ಯಾಪ್ಟರ್ ಬೆಂಗಳೂರು ಜೊತೆ ಬರುವಾಗ ಬಲವಾದ ಗಾಳಿ ಮತ್ತು ಪ್ರತಿಕೂಲ ಹವಾಮಾನದಿಂದ ಮುಂದೆ ಸಾಗದೆ ಹತ್ತಿರದ ಪ್ರದೇಶದಲ್ಲಿ ಚಿಕ್ಕಮಂಗಳೂರು ಬಳಿಯ ಖಾಲಿ ಜಮೀನಲ್ಲಿ ಸುರಕ್ಷಿತವಾಗಿ ಇಳಿಸಿದ್ದಾರೆ
