Sunday, September 8, 2024
Homeರಾಷ್ಟ್ರೀಯ | Nationalಛತ್ತೀಸ್‍ಗಢ : ಮಣ್ಣಿನ ಗಣಿಗೆ ಬಸ್ ಬಿದ್ದು 12 ಮಂದಿ ದುರ್ಮರಣ

ಛತ್ತೀಸ್‍ಗಢ : ಮಣ್ಣಿನ ಗಣಿಗೆ ಬಸ್ ಬಿದ್ದು 12 ಮಂದಿ ದುರ್ಮರಣ

ದುರ್ಗ್, ಏ 10 (ಪಿಟಿಐ) : ಛತ್ತೀಸ್‍ಗಢದ ದುರ್ಗ್ ಜಿಲ್ಲೆಯಲ್ಲಿ ಬಸ್ಸೊಂದು ಮುರುಮ್ ಮಣ್ಣಿನ ಗಣಿ ಗುಂಡಿಗೆ ಬಿದ್ದಿದ್ದರಿಂದ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಮತ್ತು 14 ಮಂದಿ ಗಾಯಗೊಂಡಿದ್ದಾರೆ.ಕುಮ್ಹಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಖಾಪ್ರಿ ಗ್ರಾಮದ ಬಳಿ ತಡರಾತ್ರಿ 8.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಸಂತ್ರಸ್ತರು ಡಿಸ್ಟಿಲರಿಯಿಂದ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ದುರ್ಗ್ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಶುಕ್ಲಾ ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ 30 ಕ್ಕೂ ಹೆಚ್ಚು ಜನರಿದ್ದ ಬಸ್ ರಸ್ತೆಯಿಂದ ಸ್ಕಿಡ್ ಆಗಿ 40 ಅಡಿ ಆಳದ ಮುರುಮï ಗಣಿಯಲ್ಲಿ ಮುಳುಗಿತು ಎಂದು ಅವರು ಹೇಳಿದರು.ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿದಂತೆ 12 ಜನರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು. ಶುಕ್ಲಾ ಈ ಹಿಂದೆ ಸಾವಿನ ಸಂಖ್ಯೆ 15 ಎಂದು ದೃಢಪಡಿಸಿದ್ದರು. ಮುರುಮ್ , ಒಂದು ರೀತಿಯ ಮಣ್ಣನ್ನು ಹೆಚ್ಚಾಗಿ ನಿರ್ಮಾಣಕ್ಕಾಗಿ ಬಳಸಲಾಗುತ್ತದೆ.

ಘಟನೆಯ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಲಾಗಿದೆ ಎಂದು ದುರ್ಗ್ ಜಿಲ್ಲಾಧಿಕಾರಿ ರಿಚಾ ಪ್ರಕಾಶ್ ಚೌಧರಿ ಸುದ್ದಿಗಾರರಿಗೆ ತಿಳಿಸಿದರು.ಬಸ್ ಕುಮ್ಹಾರಿ ಪ್ರದೇಶದಲ್ಲಿ ನೆಲೆಗೊಂಡಿರುವ ಕೆಡಿಯಾ ಡಿಸ್ಟಿಲರೀಸ್‍ನ ಕಾರ್ಮಿಕರನ್ನು ಹೊತ್ತೊಯ್ಯುತ್ತಿತ್ತು. ಇದುವರೆಗೆ 12 ಜನರ ಸಾವು ದೃಢಪಟ್ಟಿದೆ. ಗಾಯಗೊಂಡ 14 ಮಂದಿಯಲ್ಲಿ 12 ಮಂದಿಯನ್ನು ರಾಯ್‍ಪುರದ ಆಲ್ ಇಂಡಿಯಾ ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‍ಗೆ ಕೊಂಡೊಯ್ಯಲಾಗಿದ್ದು, ಇನ್ನಿಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಸಂತ್ರಸ್ತರಿಗೆ ಕಂಪನಿಯು ಪರಿಹಾರವನ್ನು ನೀಡಿದೆ, ಅವರು ಆಡಳಿತದಿಂದ ಇದೇ ರೀತಿಯ ಸಹಾಯವನ್ನು ಪಡೆಯುತ್ತಾರೆ ಎಂದು ಜಿಲ್ಲಾಧಿಕಾರಿ ಹೇಳಿದರು.ಘಟನೆಯ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲಾಗುವುದು ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಚೌಧರಿ ಹೇಳಿದರು.

RELATED ARTICLES

Latest News