Sunday, October 6, 2024
Homeಜಿಲ್ಲಾ ಸುದ್ದಿಗಳು | District Newsವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಡೆಂಟ್‌ ಆತಹತ್ಯೆ

ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಡೆಂಟ್‌ ಆತಹತ್ಯೆ

ಶಿವಮೊಗ್ಗ, ಮೇ 27– ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಡೆಂಟ್‌ ನೇಣು ಹಾಕಿಕೊಂಡು ಆತಹತ್ಯೆ ಮಾಡಿಕೊಂಡಿರುವ ಘಟನೆ ಕಳೆದ ರಾತ್ರಿ ಇಲ್ಲಿ ನಡೆದಿದೆ. ಬೆಂಗಳೂರಿನಲ್ಲಿರುವ ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ಲೆಕ್ಕಪತ್ರ ವಿಭಾಗದ ಅಧೀಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದ ಚಂದ್ರಶೇಖರ್‌ (52) ಆತಹತ್ಯೆ ಮಾಡಿಕೊಂಡವರು.

ವಿನೋಬನಗರದ ಕೆಂಚಪ್ಪ ಲೇಔಟ್‌ನಲ್ಲಿರುವ ಮನೆಯಲ್ಲಿ ಅವರು ಕಳೆದ ರಾತ್ರಿ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ನಿಗಮದಲ್ಲಿ ಕೇಳಿ ಬಂದಿದ್ದ ಅವ್ಯವಹಾರದಿಂದ ಮನನೊಂದಿದ್ದ ಅವರು ಡೆತ್‌ನೋಟ್‌ ಬರೆದಿಟ್ಟು ಆತಹತ್ಯೆಗೆ ಶರಣಾಗಿದ್ದಾರೆ.

ಕಳೆದ ಶುಕ್ರವಾರ ಅವರು ರಜೆ ಹಾಕಿ ತಮ ಸ್ವಂತ ಊರಾದ ಶಿವಮೊಗ್ಗಕ್ಕೆ ಬಂದಿದ್ದರು. ಎಲ್ಲರೊಂದಿಗೆ ಲವಲವಿಕೆಯಿಂದಿದ್ದ ಅವರು ನಿನ್ನೆ ಸಂಜೆ ಬೆಡ್‌ರೂಮ್‌ಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರು. ರಾತ್ರಿ ಊಟಕ್ಕೆ ಕರೆಯಲು ಪತ್ನಿ ಬಾಗಿಲು ತಟ್ಟಿದಾಗ ಬಾಗಿಲು ತೆರೆಯದಿದ್ದಾಗ ಅನುಮಾನಗೊಂಡು ಮನೆಯವರು ಬಾಗಿಲು ಒಡೆದು ನೋಡಿದಾಗ ನೇಣು ಹಾಕಿಕೊಂಡಿರುವುದು ಗೊತ್ತಾಗಿದೆ.

ತಕ್ಷಣ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಡೆತ್‌ನೋಟ್‌ನಲ್ಲಿ ಇಲಾಖೆಯ ಕೆಲ ಅಧಿಕಾರಿಗಳ ಹೆಸರು ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ ಎಂದು ಹಿರಿಯ ಪೊಲೀಸ್‌‍ ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES

Latest News