Wednesday, November 5, 2025
Homeರಾಜಕೀಯ | Politicsಸಂಸದ ಸುಧಾಕರ್‌ ಮದ್ಯ ಹಂಚಿಕೆ ಕುರಿತು ಜೆ.ಪಿ.ನಡ್ಡಾ ಉತ್ತರಿಸಬೇಕು : ಡಿಕೆಶಿ

ಸಂಸದ ಸುಧಾಕರ್‌ ಮದ್ಯ ಹಂಚಿಕೆ ಕುರಿತು ಜೆ.ಪಿ.ನಡ್ಡಾ ಉತ್ತರಿಸಬೇಕು : ಡಿಕೆಶಿ

ಬೆಂಗಳೂರು,ಜು.8- ಬಿಜೆಪಿ ಸಂಸದ ಡಾ ಕೆ.ಸುಧಾಕರ್‌ ಅವರು ಕಾರ್ಯಕರ್ತರಿಗೆ ಮದ್ಯ ಹಂಚಿಕೆ ಮಾಡಿರುವ ಬಗ್ಗೆ ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಉತ್ತರಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮಗಳು ಈ ವಿಚಾರವಾಗಿ ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನೆಲಮಂಗಲದಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ಮದ್ಯ ಹಂಚಿಕೆ ಮಾಡಿರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸುವುದು ಬೇರೆ ವಿಚಾರ.

- Advertisement -

ಆದರೆ ಬಿಜೆಪಿ ಪ್ರಮುಖ ನಾಯಕರು ಇದಕ್ಕೆ ಸ್ಪಷ್ಟನೆ ನೀಡಬೇಕು. ಬಿಜೆಪಿಯ ಇಂಥ ಸಂಸ್ಕೃತಿ ಬಗ್ಗೆ ಸ್ಥಳೀಯ ಬಿಜೆಪಿ ನಾಯಕರಿಗಿಂತ ರಾಷ್ಟ್ರೀಯ ನಾಯಕರು ಉತ್ತರಿಸಬೇಕು ಎಂದು ತಿಳಿಸಿದರು.

- Advertisement -
RELATED ARTICLES

Latest News