Thursday, September 19, 2024
Homeಜಿಲ್ಲಾ ಸುದ್ದಿಗಳು | District Newsಪಬ್ಜಿ ಆಟದಲ್ಲಿ ಹಣ ಕಳೆದುಕೊಂಡ ವಿದ್ಯಾರ್ಥಿ ಆತಹತ್ಯೆ

ಪಬ್ಜಿ ಆಟದಲ್ಲಿ ಹಣ ಕಳೆದುಕೊಂಡ ವಿದ್ಯಾರ್ಥಿ ಆತಹತ್ಯೆ

ಹುಬ್ಬಳ್ಳಿ,ಜು.11– ಆನ್ಲೈನ್ನಲ್ಲಿ ಪಬ್ಜಿ ಸೇರಿದಂತೆ ವಿವಿಧ ಗೇಮಿಂಗ್ ವ್ಯಾಮೋಹಕ್ಕೆ ವಿದ್ಯಾರ್ಥಿ ಬಲಿಯಾದ ಘಟನೆ ಹುಬ್ಬಳ್ಳಿಯ ಶಿರಡಿ ನಗರದಲ್ಲಿ ನಡೆದಿದೆ.ರಾಕೇಶ್ ಶ್ರೀಶೈಲ್ ಜಂಬಲದಿನ್ನಿ (21) ಮೃತ ವಿದ್ಯಾರ್ಥಿ. ಈತ ಬಿವಿಬಿ ಕಾಲೇಜಿನಲ್ಲಿ ಬಿಇ 6ನೇ ಸೆಮಿಸ್ಟರ್ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.

ಶಿರಡಿ ನಗರದಲ್ಲಿರುವ ವಸತಿ ನಿಲಯದಲ್ಲಿ ವಾಸವಿದ್ದ. ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿದ್ದಾನೆ.ರಾಕೇಶ್ ಶ್ರೀಶೈಲ್ ತಾನು ವಾಸಿಸುತ್ತಿದ್ದ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.

ರಾಕೇಶ್ ಶ್ರೀಶೈಲ್ ಜಂಬಲದಿನ್ನಿ ಸಾವಿನ ಹಿನ್ನೆಲೆ ಪೊಲೀಸ್ ಆಯುಕ್ತ ಶಶಿಕುಮಾರ್ ವಸತಿ ನಿಲಯಕ್ಕೆ ಭೇಟಿ ನೀಡಿದ್ದಾರೆ. ಆತಹತ್ಯೆ ಮಾಡಿಕೊಂಡ ಕೋಣೆಯ ಪರಿಶೀಲನೆ ಮಾಡಿದ್ದಾರೆ.

ಆತಹತ್ಯೆ ವಿಷಯ ಗಮನಕ್ಕೆ ಬರುತ್ತಿದ್ದಂತೆಯೇ ಸಿಬ್ಬಂದಿ ಆತನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ ಆದರೆ ಆಸ್ಪತ್ರೆ ಮುಟ್ಟುವುದರೊಳಗಾಗಿ ಆತ ಮೃತಪಟ್ಟಿದ್ದನು ಸದ್ಯ ಈ ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಅಶೋಕನರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

RELATED ARTICLES

Latest News