Thursday, September 19, 2024
Homeರಾಷ್ಟ್ರೀಯ | Nationalವೈಎಸ್‌‍ಆರ್‌ ಕಾಂಗ್ರೆಸ್‌‍ ಪಕ್ಷದ ಸದಸ್ಯನ ಭೀಕರ ಕೊಲೆ

ವೈಎಸ್‌‍ಆರ್‌ ಕಾಂಗ್ರೆಸ್‌‍ ಪಕ್ಷದ ಸದಸ್ಯನ ಭೀಕರ ಕೊಲೆ

ಹೈದರಾಬಾದ್,ಜು.18– ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಯುವ ಘಟಕದ ಸದಸ್ಯನನ್ನು ತಡರಾತ್ರಿ ಪಲ್ನಾಡು ಜಿಲ್ಲೆಯಲ್ಲಿ ನಡುರಸ್ತೆಯಲ್ಲಿ ಕಡಿದು ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜನದಟ್ಟಣೆಯ ನಡುವೆಯೇ ನಡೆದಿರುವ ಈ ಭೀಕರ ಕೊಲೆ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ ಯುವ ಘಟಕದ ಸದಸ್ಯ ಶೇಖ್ ರಶೀದ್ ಎಂಬಾತನ ಮೇಲೆ ಹಲ್ಲೆಗೊಳ ಗಾದ ಶೇಖ್ ಜಿಲಾನಿ ಮಚ್ಚಿನಿಂದ ಅಮಾನುಷವಾಗಿ ಹಲ್ಲೆ ನಡೆಸಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಜಿಲಾನಿ ರಶೀದ್ ಅವರ ಕುತ್ತಿಗೆಗೆ ಮಾರಣಾಂತಿಕ ಹೊಡೆತ ನೀಡುವ ಮೊದಲು ಅವರ ಎರಡೂ ಕೈಗಳನ್ನು ಕತ್ತರಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.ಈ ಭೀಕರ ಹತ್ಯೆಯ ಹಿಂದಿನ ಕಾರಣವು ವೈಯಕ್ತಿಕ ದ್ವೇಷದಿಂದ ನಡೆದಿರಬಹುದು ಮತ್ತು ಯಾವುದೇ ರಾಜಕೀಯ ಉದ್ದೇಶಗಳ ಊಹಾಪೋಹಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದೆ ಎಂದು ಪ್ರಾಥಮಿಕ ತನಿಖೆಗಳು ಸೂಚಿಸುತ್ತವೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥ ಕಂಚಿ ಶ್ರೀನಿವಾಸ್ ರಾವ್ ಹೇಳಿದ್ದಾರೆ.

ಘಟನೆಗೆ ಪ್ರತಿಕ್ರಿಯೆಯಾಗಿ, ಘಟನೆ ನಡೆದ ವಿನುಕೊಂಡ ಪಟ್ಟಣದಾದ್ಯಂತ ಕಟ್ಟುನಿಟ್ಟಾದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಶಾಂತಿಯನ್ನು ಪ್ರಚೋದಿಸುವ ಅಥವಾ ಶಾಂತಿ ಕದಡುವ ಯಾವುದೇ ಪ್ರಯತ್ನಗಳು ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಪೊಲೀಸ್ ಮುಖ್ಯಸ್ಥರು ಎಚ್ಚರಿಕೆ ನೀಡಿದ್ದಾರೆ. ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ರಾವ್ ಹೇಳಿದರು.

RELATED ARTICLES

Latest News