Tuesday, September 17, 2024
Homeಜಿಲ್ಲಾ ಸುದ್ದಿಗಳು | District Newsಪ್ರೀತಿಸಿ ಮದುವೆಯಾಗಿ ನಂತರ ಮತಾಂತರವಾಗುವಂತೆ ಕಿರುಕುಳ ನೀಡಿದ ಪತಿಯ ವಿರುದ್ಧ ಕೇಸ್

ಪ್ರೀತಿಸಿ ಮದುವೆಯಾಗಿ ನಂತರ ಮತಾಂತರವಾಗುವಂತೆ ಕಿರುಕುಳ ನೀಡಿದ ಪತಿಯ ವಿರುದ್ಧ ಕೇಸ್

ಹುಬ್ಬಳ್ಳಿ, ಜುಲೈ 27-ಪ್ರೀತಿಸಿ ಮದುವೆಯಾಗಿ ನಂತರ ಮತಾಂತರಕ್ಕೆ ಒಪ್ಪದಿದ ಪತ್ನಿಗೆ ಕಿರುಕುಳ ನೀಡಿ, ಕೊಲೆ ಬೆದರಿಕೆ ಹಾಕಿದ ಆರೋಪಿಯ ವಿರುದ್ಧ ಕಲಘಟಗಿ ಪೊಲೀಸ್‌‍ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಿರುಕುಳಕ್ಕೆ ಒಳಗಾದ ಸಂತ್ರಸ್ತೆ ಈಗ ಪೊಲೀಸರ ಬಳಿ ಅಳಲು ತೊಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಆಕೆಗೆ ಅದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಸಹೋದ್ಯೋಗಿ ಜೊತೆ ಸ್ನೇಹ ಬೆಳೆದಿದೆ. ಸ್ನೇಹ ಪ್ರೇಮಕ್ಕೆ ತಿರುಗಿದೆ. ನಂತರ 2017ರಲ್ಲಿ ಇಬ್ಬರು ವಿವಾಹವಾಗಿದ್ದಾರೆ.

ಆದರೆ, ಆರೋಪಿಗೆ ಮದುವೆಯಾಗಿದ್ದು, ನಾಲ್ಕು ಮಕ್ಕಳಿದ್ದಾರೆ. ಈ ವಿಚಾರವನ್ನು ಮುಚ್ಚಿಟ್ಟು ಆತ ಎರಡನೇ ಮದುವೆಯಾಗಿದ್ದಾನೆ. ಮದುವೆಯಾದ ಹೊಸದರಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ನಂತರ ಮೊದಲನೇ ಮದುವೆ ವಿಚಾರ ತಿಳಿದ ಆಕೆ ವಿವಾರಿಸಿದ್ದಾರೆ.

ಆಗ ಆತ ತನ್ನನಿಜ ಬಣ್ಣ ತೋರಿಸಿ ಮುಸ್ಲಿಂ ಧರ್ಮಕ್ಕೆ ಮತಾಂತರ ಆಗುವಂತೆ ರೇಖಾಗೆ ಒತ್ತಾಯ ಮಾಡಲು ಆರಂಭಿಸಿದ್ದಾನೆ. ಈ ವಿಚಾರವಾಗಿ ಇಬ್ಬರು ಜಗಳವಾಡಿದ್ದಾರೆ. ಇಬ್ಬರ ನಡುವೆ ಬಿರುಕು ಮೂಡಿ ನಂತರ ಆಕೆ ಕಲಘಟಗಿಗೆ ವಾಪಸ್‌‍ಬಂದು ತನ್ನಅಜ್ಜಿ ಜೊತೆ ನೆಲೆಸಿದ್ದರು.

ಬಳಿಕ ಅಲ್ಲಿಗೆ ಬಂದ ಆರೋಪಿ ನೀನು ಎಲ್ಲಿಗಾದರೂ ಹೋಗು ನಿನ್ನನ್ನು ಕೊಲ್ಲುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಇದರಿಂದ ಬೆದರಿದ ಸಂತ್ರಸ್ಥೆ ರಾಮಸೇನೆ ಸೇನೆ ಆರಂಭಿಸಿರುವ ಲವ್‌ ಜಿಹಾದ್‌ ವಿರುದ್ಧದ ಸಹಾಯವಾಣಿಗೆ ಕರೆ ಮಾಡಿದ್ದಾಳೆ.

ಶ್ರೀರಾಮಸೇನೆ ಸೇನೆ ಸಂಘಟನೆಯ ಸಹಾಯದಿಂದ ರೇಖಾ ಕಲಘಟಗಿ ಪೊಲೀಸ್‌‍ ಠಾಣೆಯಲ್ಲಿ ಮುಜಾಹಿದ್‌ ಖಾನ್‌ ವಿರುದ್ದ ದೂರು ದಾಖಲಿಸಿದ್ದಾಳೆ. ಬಲವಂತಾಗಿ ಮತಾಂತರ ಆಗು, ಜೀವ ಬೆದರಿಕೆ ಹಾಕುತ್ತಿದ್ದಾನೆ ದೂರು ನೀಡಿದ್ದಾಳೆ. ಮುಜಾಹಿದ್‌ ಖಾನ್‌ ವಿರುದ್ಧ ಪ್ರಕರಣ ದಾಖಲಾಗಿದೆ.

RELATED ARTICLES

Latest News