Friday, September 20, 2024
Homeರಾಷ್ಟ್ರೀಯ | Nationalವಯನಾಡು ಭೇಟಿ ಮುಂದೂಡಿದ ರಾಹುಲ್‌-ಪ್ರಿಯಾಂಕ

ವಯನಾಡು ಭೇಟಿ ಮುಂದೂಡಿದ ರಾಹುಲ್‌-ಪ್ರಿಯಾಂಕ

ವಯನಾಡು,ಜು.31– ಪ್ರತಿಕೂಲ ವಾತಾವರಣದಿಂದಾಗಿ ಕೇರಳದ ವಯನಾಡಿಗೆ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕ ವಾದ್ರ ಅವರ ಭೇಟಿಗೆ ಅಧಿಕಾರಿಗಳು ನಿರಕಾರಿಸಿರುವ ಕಾರಣ, ಭೇಟಿಯನ್ನು ಸ್ಥಗಿತಗೊಳಿಸಲಾಗಿದೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ರಾಹುಲ್‌, ಭೂಕುಸಿತದಿಂದ ಹಾನಿಗೊಳಗಾದ ಕುಟುಂಬಗಳನ್ನು ಭೇಟಿ ಮಾಡಲು ಮತ್ತು ಪರಿಸ್ಥಿತಿಯನ್ನು ಅವಲೋಕಿಸಲು ಪ್ರಿಯಾಂಕಾ ಮತ್ತು ನಾನು ಇಂದು ವಯನಾಡ್‌ಗೆ ಭೇಟಿ ನೀಡಲು ನಿರ್ಧರಿಸಿದ್ದೆವು. ಆದಾಗ್ಯೂ ನಿರಂತರ ಮಳೆ ಮತ್ತು ಪ್ರತಿಕೂಲ ಹವಾಮಾನದ ಕಾರಣ, ನಾವು ಭೇಟಿ ಕೊಡದಂತೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೂ ಶೀಘ್ರದಲ್ಲೇ ಜಿಲ್ಲೆಗೆ ಭೇಟಿ ನೀಡಿ ಅಲ್ಲಿನ ಜನರನ್ನು ಭೇಟಿಯಾಗಲಿದ್ದೇನೆ ಎಂದಿದ್ದಾರೆ.

ಇದರ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ ಪೋಸ್ಟ್‌ ಕೂಡ ಮಾಡಿದ್ದು, ವಯನಾಡ್‌ನಲ್ಲಿರುವ ನನ್ನ ಸಹೋದರ ಸಹೋದರಿಯರೇ, ನಾವು ನಾಳೆ ವಯನಾಡಿಗೆ ಬರಲು ಸಾಧ್ಯವಾಗದಿದ್ದರೂ, ಈ ದುರಂತ ಸಮಯದಲ್ಲಿ ನಮ ಹೃದಯವು ನಿಮೊಂದಿಗಿದೆ ಮತ್ತು ನಾವು ನಿಮೆಲ್ಲರಿಗಾಗಿ ಪ್ರಾರ್ಥಿಸುತ್ತಿದ್ದೇವೆ ಎಂದು ಎಂದಿದ್ದಾರೆ.

RELATED ARTICLES

Latest News