Thursday, September 19, 2024
Homeಇದೀಗ ಬಂದ ಸುದ್ದಿಬೆಟ್ಟದಲ್ಲಿ ತಲೆಮರೆಸಿಕೊಂಡಿದ್ದ ದರೋಡೆ ಆರೋಪಿಗೆ ಪೊಲೀಸರ ಗುಂಡೇಟು

ಬೆಟ್ಟದಲ್ಲಿ ತಲೆಮರೆಸಿಕೊಂಡಿದ್ದ ದರೋಡೆ ಆರೋಪಿಗೆ ಪೊಲೀಸರ ಗುಂಡೇಟು

ಹಾಸನ,ಆ.11- ದರೋಡೆ ಪ್ರಕರಣದಲ್ಲಿ ಬೆಟ್ಟದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಬೂಕನಬೆಟ್ಟದಲ್ಲಿ ನಡೆದಿದೆ. ಸತೀಶ ಬಂಧಿತ ಆರೋಪಿ.

ಎರಡು ದರೋಡೆ ಪ್ರಕರಣಗಳ ಪ್ರಮುಖ ಆರೋಪಿಯಾಗಿದ್ದ ಸತೀಶ್‌ ಹಾಗೂ ಆತನ ಸಹಚರರ ಬಂಧನಕ್ಕೆ ಚನ್ನರಾಯಪಟ್ಟಣ ನಗರ ಪೊಲೀಸ್‌‍ ಠಾಣೆಯ ರಘುಪತಿ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ವಿಶೇಷ ತಂಡವೊಂದನ್ನು ರಚಿಸಿದ್ದರು.

ಪ್ರಕರಣದ ಬೆನ್ನತ್ತಿದ ಪೊಲೀಸರು ಆರೋಪಿಗಳು ಬೂಕನಬೆಟ್ಟದಲ್ಲಿ ತಲೆಮರೆಸಿಕೊಂಡಿರುವ ಬಗ್ಗೆ ಬಂದ ನಿಖರ ಮಾಹಿತಿ ಮೇರೆಗೆ ಇಂದು ಮುಂಜಾನೆ ಬಂಧಿಸಲು ತೆರಳಿದ ವೇಳೆ ಆರೋಪಿ ಸತೀಶನನ್ನು ಹಿಡಿಯುವಾಗ ಡ್ರಾಗನ್‌ನಿಂದ ಕಾನ್ಸ್ ಟೇಬಲ್‌ ಮೇಲೆ ಹಲ್ಲೆ ನಡೆಸಿದ್ದಾನೆ.

ಆತರಕ್ಷಣೆಗಾಗಿ ಸಬ್‌ಇನ್‌್ಸಪೆಕ್ಟರ್‌ ಭರತ್‌ರೆಡ್ಡಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಕೂಡಲೇ ಆತನನ್ನು ವಶಕ್ಕೆ ಪಡೆದಿದ್ದಾರೆ. ಉಳಿದ ಇಬ್ಬರು ಆರೋಪಿಗಳು ಪರಾರಿಯಾಗಿದ್ದು, ಅವರ ಬಂಧನಕ್ಕೆ ಬಲೆ ಬೀಸಲಾಗಿದೆ.

ಆರೋಪಿಯ ಡ್ರಾಗನ್‌ ದಾಳಿಯಿಂದ ಗಾಯಗೊಂಡ ಕಾನ್ಸ್ ಟೇಬಲ್‌ ಪುಟ್ಟರಾಜು ಅವರು ಹಿರಿಸಾವೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಆರೋಪಿ ಸತೀಶನನ್ನು ಹಿರಿಸಾವೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

RELATED ARTICLES

Latest News