Saturday, September 28, 2024
Homeರಾಜ್ಯಗೃಹಲಕ್ಷ್ಮಿ ಹಣ ಬಿಡುಗಡೆ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಹೇಳಿದ್ದೇನು..?

ಗೃಹಲಕ್ಷ್ಮಿ ಹಣ ಬಿಡುಗಡೆ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಹೇಳಿದ್ದೇನು..?

Lakshmi Hebbalkar

ಬೆಳಗಾವಿ, ಸೆ.28- ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆಯ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲ ದಿನಗಳಲ್ಲೇ ಆಗಸ್ಟ್‌ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ನಿರಂತರ ಪ್ರಕ್ರಿಯೆ. ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಮಾಜಿ ಮುರುಗೇಶ್‌ ನಿರಾಣಿ ಅವರು ಅಧಿಕಾರದಲ್ಲಿದ್ದಾಗ ಪಂಚಮಸಾಲಿ ಸಮುದಾಯದ ಬಗ್ಗೆ ಯೋಚಿಸಲಿಲ್ಲ. ಈಗ ಸುಖಾಸುಮನೆ ನನ್ನ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಬೇರೆ ಸಮಾಜಕ್ಕೆ ಯಾವುದೇ ತೊಂದರೆಯಾಗದಂತೆ ಮೀಸಲಾತಿ ನೀಡಲಿ ಎಂಬುದೇ ನಮ ಆಗ್ರಹವಾಗಿದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.

ಬೆಳಗಾವಿ ಜಿಲ್ಲಾ ವಿಭಜನೆಯಾದರೆ ಬೆಂಬಲ: ಬೆಳಗಾವಿ ಜಿಲ್ಲೆಯನ್ನು ಮೂರು ವಿಭಾಗಗಳನ್ನಾಗಿ ಮಾಡಬಹುದು. ಜಿಲ್ಲೆ ವಿಭಜನೆ ಗೊಂಡರೆ ಅಭಿವೃದ್ಧಿಗೆ ಮತ್ತಷ್ಟು ಒತ್ತು ನೀಡಬಹುದು. ಈ ಕುರಿತು ದಸರಾ ಹಬ್ಬ ಮುಕ್ತಾಯಗೊಂಡ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

RELATED ARTICLES

Latest News