Sunday, October 20, 2024
Homeಜಿಲ್ಲಾ ಸುದ್ದಿಗಳು | District Newsಕಾರ್ಪೆಂಟರ್‌ನನ್ನು ಗುಂಡಿಕ್ಕಿ ಕೊಂದಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ

ಕಾರ್ಪೆಂಟರ್‌ನನ್ನು ಗುಂಡಿಕ್ಕಿ ಕೊಂದಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ

Accused who shot dead Carpenter gets life sentence

ಚಿಕ್ಕಮಗಳೂರು, ಅ.11– ಸಾಲ ವಾಪಸ್ ಕೇಳಿದ್ದಕ್ಕೆ ಗುಂಡಿಕ್ಕಿ ವ್ಯಕ್ತಿಯನ್ನು ಕೊಲೆ ಮಾಡಿದ ಒಬ್ಬ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ಇನ್ನೊಬ್ಬನಿಗೆ ಮೂರು ವರ್ಷ ಕಠಿಣ ಸಜೆ ದಂಡ ವಿಧಿಸಲಾಗಿದೆ.

ಕಾರ್ಪೆಂಟರ್ ನಾಗೇಶ್ ಆಚಾರ್ ಎಂಬುವರನ್ನು 2021 ನ. 27ರಂದು ರಾತ್ರಿ ಮೂಡಿಗೆರೆ ತಾಲ್ಲೂಕು ಬಿದುರುತಳ ಅರಣ್ಯ ಪ್ರದೇಶದಲ್ಲಿ ಬಂದೂಕಿನಿಂದ ಗುಂಡು ಹಾರಿಸಿ, ಕೊಲೆ ಮಾಡಿ ಹೆಣ ಹೂತು ಹಾಕಲಾಗಿತ್ತು. ಪ್ರಕರಣದಲ್ಲಿನ ಇಬ್ಬರು ಆರೋಪಿಗಳಿಗೆ ನ್ಯಾಯಾಲಯವು ಶಿಕ್ಷೆ ಮತ್ತು ದಂಡ ವಿಧಿಸಿದೆ.

ಪ್ರಕರಣದಲ್ಲಿನ 1ನೇ ಆರೋಪಿಯಾದ ಕೃಷ್ಣೇಗೌಡನಿಗೆ ಜೀವಾವಧಿ ಶಿಕ್ಷೆ ಮತ್ತು ರೂ. 50 ಸಾವಿರ ದಂಡ ಮತ್ತು 2ನೇ ಆರೋಪಿಯಾದ ಉದಯನಿಗೆ 3 ವರ್ಷಗಳ ಕಠಿಣ ಶಿಕ್ಷೆ ಮತ್ತು ರೂ. 3 ಸಾವಿರ ದಂಡ ವಿಧಿಸಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ತೀರ್ಪು ನೀಡಿದೆ.

ಪ್ರಕರಣದ ತನಿಖೆಯನ್ನು ಸಿಪಿಐ ಸೋಮಶೇಖರ್ ಜಿ ಸಿ ನಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ತನಿಖಾ ಸಹಾಯಕರಾಗಿ ಸಿಪಿಸಿ ವೈಭವ್ ಮತ್ತು ಸಿಪಿಸಿ ಮನು ಹಾಗೂ ನ್ಯಾಯಾಲಯದ ಕರ್ತವ್ಯವನ್ನು ಎಎಸ್‌ಐ ಯತೀಶ್ ನಿರ್ವಹಿಸಿದ್ದರು. ಸರ್ಕಾರಿ ಅಭಿಯೋಜಕ ಹೆಚ್ ಎಸ್ ಲೋಹಿತಾಶ್ವಚಾರ್ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.

RELATED ARTICLES

Latest News