Saturday, October 19, 2024
Homeರಾಜಕೀಯ | Politicsಭ್ರಷ್ಟ ಸಿಎಂ ನವರಾತ್ರಿಯನ್ನು ರಾಜಕೀಯಕ್ಕೆ ಬಳಸಿಕೊಂಡಿರುವುದು ಅಕ್ಷಮ್ಯ : ಬಿಜೆಪಿ ವಾಗ್ದಾಳಿ

ಭ್ರಷ್ಟ ಸಿಎಂ ನವರಾತ್ರಿಯನ್ನು ರಾಜಕೀಯಕ್ಕೆ ಬಳಸಿಕೊಂಡಿರುವುದು ಅಕ್ಷಮ್ಯ : ಬಿಜೆಪಿ ವಾಗ್ದಾಳಿ

CM Siddaramaiah Politics in Hindu Festival

ಬೆಂಗಳೂರು,ಅ.11- ನವರಾತ್ರಿ ಎಂಬುದಕ್ಕೆ ಹಿಂದೂ ಧರ್ಮದಲ್ಲಿ ಪೌರಾಣಿಕ ಮಹತ್ವವಿದೆ. ದುರ್ಗೆಯ ನವ ಅವತಾರಗಳನ್ನು ಆರಾಧಿಸುವ ಈ ಹಬ್ಬವನ್ನು ಭ್ರಷ್ಟ ಮುಖ್ಯಮಂತ್ರಿ, ಮುಡಾ ಹಗರಣದ ಎ1 ಆರೋಪಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯಕ್ಕಾಗಿ ಬಳಸಿಕೊಂಡಿರುವುದು ಅಕ್ಷಮ್ಯ ಎಂದು ಬಿಜೆಪಿ ಕಿಡಿಕಾರಿದೆ.

ಈ ಕುರಿತು ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಆರೋಪಿ ಸಿದ್ದರಾಮಯ್ಯ ಅವರೇ, ಈ ರೀತಿ ಜಾಹೀರಾತು ನೀಡುವುದರಿಂದ ನೀವು ಮಾಡಿರುವ ಪಾಪಕರ್ಮ, ಭ್ರಷ್ಟಾಚಾರಗಳು ಪರಿಹಾರವಾಗುವುದಿಲ್ಲ ಎಂದು ವಾಗ್ದಾಳಿ ನಡೆಸಿದೆ.

ರಾಮ ಸತ್ಯನೇ, ಆದರೆ ಸಿದ್ದರಾಮಯ್ಯ ಬ್ರಹ್ಮಾಂಡ ಸುಳ್ಳು. ಶ್ರೀರಾಮ ಸತ್ಯ ಅನ್ವೇಷಣೆಗಾಗಿ ಸೀತೆಯಿಂದ ದೂರವಾಗಿ ಸತ್ಯಶೋಧನೆ ನಡೆಸಿದ್ದ. ಅದೇ ಮಾರ್ಗದಲ್ಲಿ ನೀವು ನಡೆಯುವುದಾದರೆ ಸಿಎಂ ಪದವಿಗೆ ರಾಜೀನಾಮೆ ಸಲ್ಲಿಸಿ ಸತ್ಯಶೋಧನೆಗೆ ಅವಕಾಶ ನೀಡಿ ಎಂದು ಬಿಜೆಪಿ ಆಗ್ರಹಿಸಿದೆ.

RELATED ARTICLES

Latest News