Friday, October 18, 2024
Homeರಾಷ್ಟ್ರೀಯ | Nationalಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಹತ್ಯೆ ಖಂಡಿಸಿದ ರಾಹುಲ್ ಗಾಂಧಿ

ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಹತ್ಯೆ ಖಂಡಿಸಿದ ರಾಹುಲ್ ಗಾಂಧಿ

Rahul Gandhi expresses deep condolences on demise of Baba Siddique

ನವದೆಹಲಿ,ಅ.13- ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರ ಹತ್ಯೆಯು ಮಹಾರಾಷ್ಟ್ರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಕುಸಿತವನ್ನು ಬಹಿರಂಗಪಡಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಬಾಬಾ ಸಿದ್ದಿಕ್ ಜಿ ಅವರ ದುರಂತ ನಿಧನವು ಆಘಾತಕಾರಿ ಮತ್ತು ದುಃಖಕರವಾಗಿದೆ. ಈ ಕಷ್ಟದ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬದೊಂದಿಗೆ ಇವೆ ಎಂದು ಅವರು ಎಕ್ಸ್ ಮಾಡಿದ್ದಾರೆ. ಈ ಭಯಾನಕ ಘಟನೆಯು ಮಹಾರಾಷ್ಟ್ರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಸಂಪೂರ್ಣ ಕುಸಿತವನ್ನು ಬಹಿರಂಗಪಡಿಸುತ್ತದೆ. ಸರ್ಕಾರವು ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಮತ್ತು ನ್ಯಾಯವು ಮೇಲುಗೈ ಸಾಧಿಸಬೇಕು ಎಂದು ಕಾಂಗ್ರೆಸ್ ನಾಯಕ ಕರೆ ನೀಡಿದ್ದಾರೆ.

ಮುಂಬೈನ ಬಾಂದ್ರಾ ಪ್ರದೇಶದಲ್ಲಿ ರಾತ್ರಿ 9.30 ರ ಸುಮಾರಿಗೆ ಎನ್‌ಸಿಪಿ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರನ್ನು ಮೂವರು ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ. ಬಾಂದ್ರಾದಲ್ಲಿರುವ ಅವರ ಶಾಸಕ ಪುತ್ರ ಜೀಶಾನ್ ಸಿದ್ದಿಕಿ ಅವರ ಕಚೇರಿಯ ಹೊರಗೆ ಅವರ ಮೇಲೆ ಗುಂಡು ಹಾರಿಸಲಾಯಿತು. ತಕ್ಷಣ ಅವರನ್ನು ಲೀಲಾವತಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.

66 ವರ್ಷದ ನಾಯಕ ಅವರು ಬಾಂದ್ರಾ (ಪಶ್ಚಿಮ) ಸ್ಥಾನವನ್ನು ವಿಧಾನಸಭೆಯಲ್ಲಿ ಮೂರು ಬಾರಿ ಪ್ರತಿನಿಧಿಸಿದ್ದರು. ಫೆಬ್ರವರಿಯಲ್ಲಿ ಅವರು ಕಾಂಗ್ರೆಸ್‌ನಿಂದ ಎನ್‌ಸಿಪಿ ಸೇರಿದ್ದರು.ಹತ್ಯೆ ಪ್ರಕರಣದ ವಿಚಾರಣೆ ತ್ವರಿತ ನ್ಯಾಯಾಲಯದಲ್ಲಿ ನಡೆಯಲಿದ್ದು, ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಅವರು ಘಟನೆಯ ತನಿಖೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಶನಿವಾರ ಘೋಷಿಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮುಂಬೈ ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ ಮತ್ತು ಯಾರೂ ಕಾನೂನು ಸುವ್ಯವಸ್ಥೆಯನ್ನು ತಮ್ಮ ಕೈಗೆ ತೆಗೆದುಕೊಳ್ಳದಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು. ಗ್ಯಾಂಗ್ ವಾರ್ಪು ನರುಜ್ಜೀವನಗೊಳ್ಳಬಾರದು, ಇಂತಹ ಘಟನೆಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

RELATED ARTICLES

Latest News