Friday, October 18, 2024
Homeಜಿಲ್ಲಾ ಸುದ್ದಿಗಳು | District Newsಮೈಸೂರು | Mysuruಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳಿಂದ ಬೆಂಕಿ

ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳಿಂದ ಬೆಂಕಿ

The vehicles parked in front of the house caught fire

ಮೈಸೂರು, ಅ. 18- ಮನೆ ಮುಂದೆ ನಿಲ್ಲಿಸಿದ್ದ ವಾಹನಗಳು ಹಾಗೂ ಸಿಸಿ ಟಿವಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ನಾಶಪಡಿಸಿರುವ ಘಟನೆ ಜಿಲ್ಲೆಯ ಹುಣಸೂರು ತಾಲ್ಲೂಕಿನ ಮುತ್ತುರಾಯನ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮನು ಎಂಬುವರಿಗೆ ಸೇರಿದ ವಾಹನಗಳು, ಸಿಸಿಟಿವಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಕಿಡಿಗೇಡಿಗಳ ಕೃತ್ಯಕ್ಕೆ ಒಂದು ಕಾರು, ಒಂದು ಬೈಕ್ ಹಾಗೂ ಒಂದು ಸೈಕಲ್ ನಾಶವಾಗಿದೆ.

ಕೇವಲ 9 ದಿನಗಳ ಹಿಂದೆ ಖರೀದಿಸಿದ್ದ ಹೋಂಡಾ ಆಕ್ಟಿವಾ ಕೂಡ ಸುಟ್ಟು ಭಸ್ಮವಾಗಿದೆ. ಮನು ಮತ್ತು ಕುಟುಂಬಸ್ಥರು ಮೈಸೂರಿಗೆ ತೆರಳಿದ್ದ ವೇಳೆ ಕಿಡಿಗೇಡಿಗಳು ಈ ಕೃತ್ಯವೆಸಗಿದ್ದಾರೆ. ಮನು ಅಣ್ಣನ ಮಗ ಯಶವಂತ್ ಈ ಕುರಿತು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ, ಈ ಕುರಿತು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರುದಾಖಲಿಸಿದ್ದಾರೆ.

RELATED ARTICLES

Latest News