Friday, October 18, 2024
Homeರಾಜಕೀಯ | Politicsಚನ್ನಪಟ್ಟಣ ಉಪ ಚುನಾವಣೆ : ಮೈತ್ರಿ ಅಭ್ಯರ್ಥಿ ಆಯ್ಕೆ ಕುರಿತು ಶಾಸಕ ತನ್ವೀರ್‌ ಸೇಠ್‌ ಲೇವಡಿ

ಚನ್ನಪಟ್ಟಣ ಉಪ ಚುನಾವಣೆ : ಮೈತ್ರಿ ಅಭ್ಯರ್ಥಿ ಆಯ್ಕೆ ಕುರಿತು ಶಾಸಕ ತನ್ವೀರ್‌ ಸೇಠ್‌ ಲೇವಡಿ

Tanveer Sait on Channapatna Byelection

ಮೈಸೂರು, ಅ. 18- ಚನ್ನಪಟ್ಟಣ ಉಪ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ – ಜೆಡಿಎಸ್‌‍ ಮೈತ್ರಿ ಅಭ್ಯರ್ಥಿ ಆಯ್ಕೆ ಕಸರತ್ತಿನ ಬಗ್ಗೆ ಶಾಸಕ ತನ್ವೀರ್‌ ಸೇಠ್‌ ಲೇವಡಿ ಮಾಡಿದ್ದಾರೆ.ಕಾಂಗ್ರೆಸ್‌‍ ಶಾಸಕ ತನ್ವೀರ್‌ ಸೇಠ್‌, ಒಬ್ಬರ ಕೈಯಲ್ಲಿ ಹಾರೆ ಇದೆ. ಮತ್ತೊಬ್ಬರ ಕೈಯಲ್ಲಿ ಗುದ್ದಲಿ ಇದೆ. ಯಾರಿಗೆ ಟಿಕೆಟ್‌ ಸಿಕ್ಕರೂ ಅವರ ಪಿಚ್‌ಅನ್ನು ಅವರೆ ಅಗೆಯುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.

ಮೈಸೂರಿನಲ್ಲಿ ತಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ತನ್ವೀರ್‌ ಸೇಠ್‌, ರಾಷ್ಟ್ರ ರಾಜಕಾರಣವೇ ಬೇರೆ. ಚನ್ನಪಟ್ಟಣ ಪರಿಸ್ಥಿತಿಯೇ ಬೇರೆ. ಉಪ ಚುನಾವಣೆಯಲ್ಲಿ ಚನ್ನಪಟ್ಟಣ ಬಹಳ ವಿಶೇಷವಾಗಿದೆ. ಶಿಗ್ಗಾವ್‌, ಸಂಡೂರು ಒಂದಾದರೆ, ಚನ್ನಪಟ್ಟಣ ಅತ್ಯಂತ ಕುತೂಹಲ ಮೂಡಿಸಿದೆ. ಈಗಾಗಲೇ ಅಭ್ಯರ್ಥಿ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ.

ಮೈತ್ರಿ ಅಭ್ಯರ್ಥಿ ಯಾರು, ಕಾಂಗ್ರೆಸ್‌‍ನಿಂದ ಯಾರು ಎಂಬುದು ಪ್ರಶ್ನೆ. ಡಿಸಿಎಂ ನಾನೇ ಅಭ್ಯರ್ಥಿ ಅಂತ ಹೇಳಿದ್ದಾರೆ. ಆದಾಗ್ಯೂ ಪರಿಸ್ಥಿತಿಗೆ ಅನುಗುಣವಾಗಿ ಕಾಂಗ್ರೆಸ್‌‍ ಅಭ್ಯರ್ಥಿ ಹಾಕುವ ಕೆಲಸ ಮಾಡುತ್ತೆ. ನಾಲ್ಕೈದು ದಿನದಲ್ಲಿ ಚನ್ನಪಟ್ಟಣ ಕಾಂಗ್ರೆಸ್‌‍ ಅಭ್ಯರ್ಥಿ ಘೋಷಣೆ ಆಗುತ್ತದೆ ಎಂದು ಅವರು ತಿಳಿಸಿದರು.

ಡಿ.ಕೆ.ಸುರೇಶ್‌ ರಾಜಕೀಯವಾಗಿ ಮುಂದುವರಿಯಬೇಕಾದ ಅನಿವಾರ್ಯತೆ ಪಕ್ಷಕ್ಕೆ ಇದೆ. ಸಾಮಾಜಿಕ ನ್ಯಾಯದ ವಿಚಾರದಲ್ಲಿ ಶಿಗ್ಗಾವಿಯಲ್ಲಿ ಮುಸ್ಲಿಂ ಅಭ್ಯರ್ಥಿ ನಿಲ್ಲಿಸಿ ಅಂತ ನಾನೂ ಕೂಡ ಮನವಿ ಮಾಡಿದ್ದೇನೆ ಎಂದರು.ಬಿಜೆಪಿ ಅಧಿಕಾರದಲ್ಲಿದ್ದಾಗ ಒಂದು ಸಮುದಾಯ ಗುರಿಯಾಗಿ ಇಟ್ಟುಕೊಂಡು ಅಮಾಯಕರ ಮೇಲೆ ಕೇಸ್‌‍ ಹಾಕಿತ್ತು. ಆ ಕೇಸ್‌‍ ಈಗ ವಾಪಾಸ್‌‍ ಪಡೆದಿದ್ದೇವೆ. ಇದರಲ್ಲಿ ತಪ್ಪೇನಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಪ್ರಶ್ನಿಸಿದರು.

ಮುಡಾ ಅಧ್ಯಕ್ಷ ಸ್ಥಾನಕ್ಕೆ ಕೆ. ಮರಿಗೌಡ ರಾಜೀನಾಮೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಶಾಸಕ ತನ್ವೀರ್‌ ಸೇಠ್‌, ಆರೋಗ್ಯ ದೃಷ್ಟಿಯಿಂದ ರಾಜೀನಾಮೆ ಕೊಟ್ಟಿದ್ದೇನೆ ಎಂದಿದ್ದಾರೆ. ರಾಜೀನಾಮೆ ತನಿಖೆಗೆ ಒಳ್ಳೆಯದೇ. ಮರೀಗೌಡ ರಾಜೀನಾಮೆಯಿಂದ ಮೂಡಾ ತನಿಖೆಗೆ ಬಲ ಬಂದಿದೆ. ಮರಿಗೌಡ ಸಿಎಂ ಆಪ್ತರು. ಪಾರದರ್ಶಕ ತನಿಖೆ ಸಹಕಾರಿ ಆಗಲಿ ಅಂತ ರಾಜೀನಾಮೆ ಕೊಟ್ಟಿದ್ದಾರೆ. ಮುಡಾದಿಂದ ಸಿಎಂಗೆ ಆಂಟಿರುವ ಕಳಂಕ ದೂರು ಆಗತ್ತೆ ಎಂದರು.

50:50 ಅನುಪಾತದಲ್ಲಿ ಮಂಜೂರಾಗಿರುವ ಎಲ್ಲಾ ಸೈಟ್‌ ವಾಪಸ್‌‍ ಪಡೆದುಕೊಳ್ಳಿ: ಸಿಎಂ ಪತ್ನಿ 14 ಸೈಟ್‌ ವಾಪಸ್‌‍ ಕೊಟ್ಟ ರೀತಿಯಲ್ಲೆ ಅವತ್ತಿನ ಸಭೆಯಲ್ಲಿ ಮಂಜೂರಾದ ಉಳಿದ 161 ಸೈಟ್‌ ಕೂಡ ವಾಪಸ್‌‍ ಪಡೆಯಿರಿ ಎಂದು ಶಾಸಕ ತನ್ವೀರ್‌ ಸೇಠ್‌ ಆಗ್ರಹಿಸಿದರು. ಮೂಡಾದಲ್ಲಿ 50:50 ಅನುಪಾತದಲ್ಲಿ ಮಂಜೂರಾಗಿರುವ ಎಲ್ಲಾ ಸೈಟ್‌ ವಾಪಸ್‌‍ ಪಡೆದುಕೊಳ್ಳಿ. ಇದಕ್ಕೂ ಮುನ್ನ ಸಿಎಂ ಪತ್ನಿಗೆ ನಿವೇಶನ ಮಂಜೂರಾದ ಸಭೆಯಲ್ಲಿ ಆದ ಮಂಜೂರಾತಿಗಳನ್ನು ರದ್ದು ಮಾಡಿ ಎಂದು ಅವರು ಒತ್ತಾಯಿಸಿದರು.

RELATED ARTICLES

Latest News