Saturday, October 19, 2024
Homeರಾಷ್ಟ್ರೀಯ | National"ಜೆಡಿಎಸ್‌‍ಗೆ ಮರುಜನ್ಮ ಕೊಟ್ಟಿದ್ದೇವೆ" ಎಂದ ಯತ್ನಾಳ್‌ಗೆ ಕುಮಾರಸ್ವಾಮಿ ತಿರುಗೇಟು

“ಜೆಡಿಎಸ್‌‍ಗೆ ಮರುಜನ್ಮ ಕೊಟ್ಟಿದ್ದೇವೆ” ಎಂದ ಯತ್ನಾಳ್‌ಗೆ ಕುಮಾರಸ್ವಾಮಿ ತಿರುಗೇಟು

Yatnal Vs HD Kumaraswamy

ಮಂಡ್ಯ, ಅ.19– ಯಾರಿಗೆ ಯಾರು ಮರುಜನ ಕೊಟ್ಟಿದ್ದಾರೆ ಎಂಬ ಬಗ್ಗೆ ಬೀದಿಯಲ್ಲಿ ಚರ್ಚೆ ಮಾಡಲು ಆಗುವುದಿಲ್ಲ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಜೆಡಿಎಸ್‌‍ಗೆ ಮರುಜನ್ಮ ಕೊಟ್ಟಿದ್ದೇವೆ ಎಂಬ ಶಾಸಕ ಬಸನಗೌಡ ಯತ್ನಾಳ್‌ ಹೇಳಿಕೆಗೆ ಅವರು ಟಾಂಗ್‌ ಕೊಟ್ಟಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಯಾವ ರೀತಿ ಶಕ್ತಿ ತುಂಬಿದೆ ಎಂಬ ಚರ್ಚೆಯನ್ನು ಈಗ ಮಾಡಿದರೆ ಉಪಯೋಗವಾಗುವುದಿಲ್ಲ. ದೆಹಲಿ ನಾಯಕರಿಗೆ ಅದರ ಬಗ್ಗೆ ಸಂಪೂರ್ಣ ಮಾಹಿತಿ ಇದ್ದು, ಬೀದಿಯಲ್ಲಿ ನಿಂತು ಅದರ ಬಗ್ಗೆ ಚರ್ಚೆಮಾಡುವ ಅವಶ್ಯಕತೆ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.

ನಾನು ಈ ಕ್ಷಣದವರೆಗೂ ಜನತಾದಳ, ಬಿಜೆಪಿ ಎಂದು ಬೇರ್ಪಡಿಸಿ ಮಾತನಾಡಿಲ್ಲ. ಎನ್‌ಡಿಎ ಅಭ್ಯರ್ಥಿ ಎಂದೇ ಮಾತನಾಡಿದ್ದೇನೆ. ತ್ಯಾಗದ ಬಗ್ಗೆ ಮಾತನಾಡುವವರು ಅವರ ಆತಕ್ಕೆ ಪ್ರಶ್ನೆ ಹಾಕಿಕೊಳ್ಳಬೇಕು. ನಮ ಮೈತ್ರಿಗೆ ಅಡ್ಡಿ ಆಗಬಾರದು ಎಂದು ನಡೆದುಕೊಳ್ಳುತ್ತಿದ್ದೇನೆ ಎಂದಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌‍ ಸರ್ಕಾರದ ಆಡಳಿತ ಹೇಗಿದೆ ಎಂಬುದನ್ನು ನೋಡುತ್ತಿದ್ದೇನೆ. ಆಡಳಿತ ನಡೆಯುತ್ತಿದೆಯೇ? ಸರ್ಕಾರ ಇದೆಯೇ? ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿದೆ. ಬಾಗಲಕೋಟೆ, ಹಾವೇರಿ, ಚಿತ್ರದುರ್ಗದಲ್ಲಿ ಈರುಳ್ಳಿ, ದ್ರಾಕ್ಷಿ, ಜೋಳ ಬೆಳೆಯುವವರ ಸ್ಥಿತಿ ಏನಾಗಿದೆ? ಅದರ ಬಗ್ಗೆ ಕೇಳುವವರು ಯಾರೂ ದಿಕ್ಕಿಲ್ಲದಂತಾಗಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು ನಗರದ ಕೆಲವು ಕಡೆ ಜಲಾವೃತವಾಗಿದೆ. ಯಾರಾದರೂ ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆಯೆ? ಅದರ ಬಗ್ಗೆ ಯಾರಿಗಾದರೂ ಚಿಂತನೆ ಇದೆಯೆ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಯ ಎನ್‌ಡಿಎ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಇಂದು ಸಂಜೆ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ಸೇರಿದಂತೆ ಎನ್‌ಡಿಎ ನಾಯಕರು ಸಭೆ ನಡೆಸಿ ತೀರ್ಮಾನ ಮಾಡುವುದಾಗಿ ಹೇಳಿದ್ದಾರೆ.

RELATED ARTICLES

Latest News