Tuesday, October 29, 2024
Homeಬೆಂಗಳೂರುಡಾ.ರಾಜ್, ಪಾರ್ವತಮ ಪುತ್ಥಳಿ ಸಮೀಪವೇ ಪುನೀತ್ ಕಂಚಿನ ಪುತ್ಥಳಿ ಅನಾವರಣ

ಡಾ.ರಾಜ್, ಪಾರ್ವತಮ ಪುತ್ಥಳಿ ಸಮೀಪವೇ ಪುನೀತ್ ಕಂಚಿನ ಪುತ್ಥಳಿ ಅನಾವರಣ

Puneeth Rajkumar

ಬೆಂಗಳೂರು, ಅ.28- ಯಡಿಯೂರು ನಾಗರಿಕರ ವೇದಿಕೆಯಿಂದ ನಗರದ ಸೌತ್ ಎಂಡ್ ವತ್ತದಲ್ಲಿ ಪವರ್ ಸ್ಟಾರ್ ಡಾ. ಪುನೀತ್ ರಾಜ್ಕುಮಾರ್ ಅವರ ಕಂಚಿನ ಪುತ್ಥಳಿ ಅನಾವರಣ ಮಾಡಲಾಗಿದೆ. ಯಡಿಯೂರು ವಾರ್ಡ್ನಲ್ಲಿರುವ ಸೌತ್ ಎಂಡ್ ವೃತ್ತದಲ್ಲಿ ಈಗಾಗಲೇ ನಾಗರಿಕರ ವೇದಿಕೆ ವತಿಯಿಂದ ಮೇರುನಟ ಡಾ.ರಾಜ್ ಕುಮಾರ್ ಮತ್ತು ನಿರ್ಮಾಪಕಿ ಪಾರ್ವತಮ ರಾಜ್ ಕುಮಾರ್ ರವರ ಕಂಚಿನ ಪುತ್ಥಳಿ ನಿರ್ಮಾಣ ಮಾಡಲಾಗಿದ್ದು, ಆ ಪುತ್ಥಳಿಗಳ ಸಮೀಪದಲ್ಲೇ ಕರ್ನಾಟಕ ರತ್ನ , ಪವರ್ ಸ್ಟಾರ್ ಡಾ॥ಪುನೀತ್ ರಾಜ್ ಕುಮಾರ್ ರವರ ಕಂಚಿನ ಪುತ್ಥಳಿಯ ಅನಾವರಣ ಮಾಡಲಾಗಿದೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಅಖಿಲ ಕರ್ನಾಟಕ ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘಗಳ ಒಕ್ಕೂಟದ ರಾಜ್ಯ ಗೌರವಾಧ್ಯಕ್ಷ ಎನ್.ಆರ್.ರಮೇಶ್, ಬಿಬಿಎಂಪಿ ವಿರೋಧ ಪಕ್ಷದ ಮಾಜಿ ನಾಯಕ ಎ.ಎಚ್.ಬಸವರಾಜ್ ಸಮುಖದಲ್ಲಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಪುನೀತ್ ರಾಜ್ಕಮಾರ್ ಅವರ ಪುತ್ಥಳಿ ಲೋಕಾರ್ಪಣೆ ಮಾಡಿದರು.

ದೇಶದ ಪ್ರತಿಭಾವಂತ ನಟ ಎಂದು ಖ್ಯಾತಿ ಗಳಿಸಿರುವ ಪುನೀತ್ ರಾಜ್ ಕುಮಾರ್ ರವರ ಪುತ್ಥಳಿಯನ್ನು ಪಾರ್ವತಮ ರಾಜ್ ಕುಮಾರ್ ರಸ್ತೆಯಲ್ಲಿ ಸ್ಥಾಪಿಸಲಾಗಿದೆ. ಪುನೀತ್ ರಾಜ್ ಕುಮಾರ್ ಅಗಲಿಕೆಯಾಗಿ ಮೂರು ವರ್ಷವಾಯಿತು ಆದರೂ ಅವರ ಹೆಸರು ಚಿರಸ್ಥಾಯಿಯಾಗಿ ಉಳಿದಿದೆ. ಪುನೀತ್ ರಾಜ್ ಕುಮಾರ್ ರವರ ಅಂತ್ಯಸಂಸ್ಕಾರದಲ್ಲಿ ಲಕ್ಷಾಂತರ ಜನರು ಭಾಗಿಯಾಗಿದ್ದರು ಎಂಬುದನ್ನು ಆರ್.ಅಶೋಕ್ ಈ ಸಂದರ್ಭದಲ್ಲಿ ಸರಿಸಿಕೊಂಡರು.

ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ರವರು ಯುವ ಸಮೂದಕ್ಕೆ ಸ್ಪೂರ್ತಿಯಾಗಿದ್ದಾರೆ. ಯಡಿಯೂರು ವಾರ್ಡ್ ನಲ್ಲಿ ಕಂಚಿನ ಪುತ್ಥಳಿ ಸ್ಥಳದಲ್ಲಿ ಕಂಠೀರವ ಸ್ಟೂಡಿಯೋದಲ್ಲಿ ಪುಣ್ಯಭೂಮಿಯಿಂದ ಮಣ್ಣನ್ನು ತಂದ ಪುನೀತ್ ರಾಜ್ ಕುಮಾರ್ ಪುತ್ಥಳಿ ಜಾಗ ನಿರ್ಮಿಸಲಾಗಿದೆ ಎಂದು ಎನ್.ಆರ್. ರಮೇಶ್ ಮಾಹಿತಿ ನೀಡಿದರು.

ಅಭಿವೃದ್ಧಿಯಲ್ಲಿ ಇಡಿ ದೇಶಕ್ಕೆ ಮಾದರಿಯಾಗಿರುವ ನಮ ವಾರ್ಡ್ನಲ್ಲಿ ಡಾ. ರಾಜ್ ಕುಮಾರ್ ಮತ್ತು ಪಾರ್ವತಮರಾಜ್ ಕುಮಾರ್ , ಪುನೀತ್ ರಾಜ್ ಕುಮಾರ್ ರವರು ಕಂಚಿನ ಪುತ್ಥಳಿ ಒಂದೇ ಜಾಗದಲ್ಲಿ ನಿರ್ಮಾಣವಾಗಿರುವುದು ರಾಜ್ಯದಲ್ಲಿಯೆ ಪ್ರಥಮ ಎಂದರು.ಪುನೀತ್ ರಾಜ್ ಕುಮಾರ್ ರವರ ಆದರ್ಶ ಗುಣಗಳು, ಸರಳತೆ ಪ್ರತಿಯೊಬ್ಬರು ಜೀವನದಲ್ಲಿ ಆಳವಡಿಸಿಕೊಳ್ಳಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಕರೆ ನೀಡಿದರು.

RELATED ARTICLES

Latest News