Thursday, April 16, 2026
Homeರಾಜ್ಯಭ್ರಷ್ಟರನ್ನು ರಕ್ಷಿಸುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸುತ್ತಾರೆ : ಅಶೋಕ್‌ ವಾಗ್ದಾಳಿ

ಭ್ರಷ್ಟರನ್ನು ರಕ್ಷಿಸುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸುತ್ತಾರೆ : ಅಶೋಕ್‌ ವಾಗ್ದಾಳಿ

People will teach Congress government a lesson for protecting corrupt: Ashok attacks

ಬೆಂಗಳೂರು,ಜ.20- ಲೈಸೆನ್ಸ್ ನೀಡಲು ಲಂಚ ಪಡೆದ ಪ್ರಕರಣದಲ್ಲಿ ಕಾಂಗ್ರೆಸ್‌‍ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು, ಸಚಿವ ತಿಮಾಪುರ ಅವರಿಂದ ರಾಜೀನಾಮೆ ಪಡೆದು, ಸಮಗ್ರ ತನಿಖೆಗೆ ಆದೇಶಿಸಬೇಕು. ಭ್ರಷ್ಟರನ್ನು ರಕ್ಷಿಸುವುದೇ ನಿಮ್ಮ ಗುರಿಯಾಗಿದ್ದರೆ, ಜನರೇ ನಿಮಗೆ ತಕ್ಕ ಪಾಠ ಕಲಿಸುತ್ತಾರೆ.

ಸುಧಾರಿಸಿಕೊಳ್ಳಿ, ಇಲ್ಲವೇ ಕುರ್ಚಿ ಬಿಟ್ಟು ತೊಲಗಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಅಬಕಾರಿ ಇಲಾಖೆಯಲ್ಲಿ ಕಾಂಗ್ರೆಸ್‌‍ ಸರ್ಕಾರದ ಲಂಚಾವತಾರ; ಬಗೆದಷ್ಟೂ ಬಯಲಾಗುತ್ತಿದೆ ಬ್ರಹಾಂಡ ಭ್ರಷ್ಟಾಚಾರ! ಅಬಕಾರಿ ಇಲಾಖೆ ಕಾಂಗ್ರೆಸ್‌‍ ಪಾಲಿನ ಪರ್ಸೆಂಟೇಜ್‌ ದಂಧೆಯ ಎಟಿಎಂ ಯಂತ್ರವಾಗಿ ಬದಲಾಗಿದೆ. ಅಧಿಕಾರಿಗಳ ವರ್ಗಾವಣೆಯಿಂದ ಹಿಡಿದು, ಮದ್ಯದಂಗಡಿಗಳ ಲೈಸೆನ್‌್ಸ ಮಂಜೂರಾತಿಯವರೆಗೆ ಪ್ರತಿಯೊಂದಕ್ಕೂ ಇಲ್ಲಿ ಲಂಚದ ಮುದ್ರೆ ಅನಿವಾರ್ಯವಾಗಿದೆ ಎಂದು ಆರೋಪಿಸಿದ್ದಾರೆ.

ಲಂಚ ನೀಡದೆ ಒಂದು ಕಡತವೂ ಕದಲುವುದಿಲ್ಲ ಎಂಬ ಸ್ಥಿತಿ ನಿರ್ಮಾಣವಾಗಿರುವುದು ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಬ್ರಹಾಂಡ ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿ. ಮದ್ಯದ ಅಂಗಡಿಗಳಿಂದ ಮಂಥ್ಲಿ ಮನಿ ಹೆಸರಿನಲ್ಲಿ ನಡೆಯುತ್ತಿರುವ ಬಲವಂತದ ವಸೂಲಿ ದಂಧೆಯಲ್ಲಿ ಬರೋಬ್ಬರಿ 2,500 ಕೋಟಿ ರೂಪಾಯಿಗಳ ಬೃಹತ್‌ ಹಗರಣ ಎಂಬ ಆರೋಪಕ್ಕೆ ಸಾಕಷ್ಟು ಸಾಕ್ಷ್ಯಾಧಾರಗಳಿವೆ ಎಂದು ಹೇಳಿದ್ದಾರೆ.

ಈ ಕುರಿತು ರಾಜ್ಯ ಮದ್ಯ ಮಾರಾಟಗಾರರ ಸಂಘವೇ ಈ ಬಗ್ಗೆ ಲಿಖಿತ ದೂರು ನೀಡಿರುವುದು, ಕೈಬೆಚ್ಚಗೆ ಮಾಡದಿದ್ದರೆ ಸುಳ್ಳು ಕೇಸ್‌‍ ಹಾಕಿ ಟಾರ್ಗೆಟ್‌ ಮಾಡಲಾಗುತ್ತದೆ ಎಂದು ಬಾರ್‌ ಮಾಲೀಕರೊಬ್ಬರು ಲೋಕಾಯುಕ್ತದ ಮೆಟ್ಟಿಲೇರಿರುವುದು ಇಲಾಖೆಯ ಕರ್ಮಕಾಂಡಕ್ಕೆ ಸ್ಪಷ್ಟ ಸಾಕ್ಷಿಗಳಾಗಿವೆ. ಇಷ್ಟಾದರೂ ಸಾಕ್ಷಿ ಕೊಡಿ ಎಂದು ಕೇಳುತ್ತಿದ್ದೀರಲ್ಲ ಸಚಿವ ಪ್ರಿಯಾಂಕ್‌ ಖರ್ಗೆ ಅವರೇ, ನಿಮ ಸರ್ಕಾರಕ್ಕೆ ನಾಚಿಕೆ ಅನ್ನೋದೇ ಇಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬ್ರಹಾಂಡ ಭ್ರಷ್ಟಾಚಾರದ ಹಣ ಯಾರ ಕಿಸೆ ಸೇರುತ್ತಿದೆ ಎಂಬುದಕ್ಕೆ ಉತ್ತರವಿಲ್ಲದಿದ್ದರೂ, ಮುಖ್ಯಮಂತ್ರಿಗಳ, ಸಚಿವರ ಆಶೀರ್ವಾದವಿಲ್ಲದೆ ಈ ಸುಲಿಗೆ ಸಾಧ್ಯವೇ? ಎಂಬ ಪ್ರಶ್ನೆ ಮೂಡುವುದು ಸಹಜ. ಯಾವಾಗಲೂ ನನ್ನದು ತೆರೆದ ಪುಸ್ತಕ ಎಂದು ಬಡಾಯಿ ಕೊಚ್ಚಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಇಷ್ಟೊಂದು ಗಂಭೀರ ಆರೋಪಗಳಿದ್ದರೂ, ದಾಖಲೆಗಳಿದ್ದರೂ ನಿಮ ಈ ಮೌನದ ಹಿಂದಿನ ರಹಸ್ಯವೇನು? ನಿಮ ಮೂಗಿನ ನೇರಕ್ಕೇ ಇಷ್ಟು ದೊಡ್ಡ ಅಕ್ರಮ ನಡೆಯುತ್ತಿದ್ದರೂ ನೀವು ಯಾಕೆ ಮೌನವಾಗಿದ್ದೀರಿ? ಈ ಲೂಟಿಯಲ್ಲಿ ನಿಮ ಪಾಲೆಷ್ಟು? ಎಂಬ ಅನುಮಾನ ಜನಸಾಮಾನ್ಯರನ್ನು ಕಾಡುತ್ತಿದೆ ಎಂದು ಅಶೋಕ್‌ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬಾರ್‌, ಪಬ್‌, ಕ್ಲಬ್‌ಗಳಿಂದ ಮಂಥ್ಲಿ ಮನಿ ವಸೂಲಿ ಮಾಡುವ ಭ್ರಷ್ಟ ಸಚಿವ ಆರ್‌. ಬಿ. ತಿಮಾಪುರ ಅವರನ್ನು ತಕ್ಷಣವೇ ಸಂಪುಟದಿಂದ ವಜಾಗೊಳಿಸಲು ನಿಮಗಿರುವ ಅಡ್ಡಿಯಾದರೂ ಏನು?ಇಷ್ಟೇ ಅಲ್ಲದೆ ದಿವಾಳಿ ಆಗಿರುವ ಸರ್ಕಾರದ ಖಜಾನೆ ತುಂಬಿಸಲು ರಾಜ್ಯದಲ್ಲಿ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯಲು ಅವಕಾಶ ನೀಡಲಾಗಿದೆ.

ಈ ಸರ್ಕಾರದ ಹಣದ ದಾಹಕ್ಕೆ ರಾಜ್ಯದ ಯುವಜನತೆಯ ಭವಿಷ್ಯ ಬಲಿಯಾಗುತ್ತಿದೆ. ಹಳ್ಳಿಹಳ್ಳಿಗಳಲ್ಲಿ ಮದ್ಯದ ದಂಧೆ ಹರಡುತ್ತಿದ್ದು, ಸಣ್ಣ ಮಕ್ಕಳು ಮತ್ತು ವಿದ್ಯಾರ್ಥಿಗಳು ಕುಡಿತದ ದಾಸರಾಗುತ್ತಿದ್ದಾರೆ. ಮದ್ಯಪಾನದ ಮದದಿಂದ ಸಂಭವಿಸುತ್ತಿರುವ ಅಪಘಾತಗಳು ಕುಟುಂಬಗಳನ್ನು ಬೀದಿಗೆ ತಳ್ಳುತ್ತಿವೆ. ಇಷ್ಟೆಲ್ಲಾ ಅವಾಂತರಗಳು ಸಂಭವಿಸುತ್ತಿದ್ದರೂ, ಅಬಕಾರಿ ಇಲಾಖೆಯ ಅಧಿಕಾರಿಗಳು ಕೇವಲ ವಸೂಲಿಯಲ್ಲೇ ಮಗ್ನರಾಗಿದ್ದಾರೆ ಎಂದು ಅವರು ಸರ್ಕಾರದ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ.

RELATED ARTICLES

Latest News