Thursday, February 6, 2025
Homeರಾಜಕೀಯ | Politicsನಾವು ಬೀದಿಗಿಳಿದರೆ ನೀವು ಮನೆ ಖಾಲಿ ಮಾಡಬೇಕಾಗುತ್ತೆ : ಬಿವೈವಿಗೆ ಪ್ರಿಯಾಂಕ ಖರ್ಗೆ ತಿರುಗೇಟು

ನಾವು ಬೀದಿಗಿಳಿದರೆ ನೀವು ಮನೆ ಖಾಲಿ ಮಾಡಬೇಕಾಗುತ್ತೆ : ಬಿವೈವಿಗೆ ಪ್ರಿಯಾಂಕ ಖರ್ಗೆ ತಿರುಗೇಟು

Priyanka Kharge hits back at BYV

ಬೆಂಗಳೂರು,ಜ.4- ಬಿಜೆಪಿ ರಾಜ್ಯಾಧ್ಯಕ್ಷ ಎಂಬ ಕಾರಣಕ್ಕೆ ಬಿ.ವೈ.ವಿಜಯೇಂದ್ರ ಅವರಿಗೆ ಗೌರವ ನೀಡಲಾಗುತ್ತದೆ. ಬಾಯಿಗೆ ಬಂದಂತೆ ಮಾತನಾಡಿದರೆ ಸಹಿಸಲಾಗುವುದಿಲ್ಲ. ನಾವು ಬೀದಿಗಿಳಿದರೆ ನೀವು ಮನೆ ಖಾಲಿ ಮಾಡಬೇಕಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿನ್ ಪಾಂಚಾಳ್ ಆತಹತ್ಯೆ ಪ್ರಕರಣದಲ್ಲಿ ಸುಪಾರಿ ನೀಡಲಾಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಆರೋಪಕ್ಕೆ ತಿರುಗೇಟು ನೀಡಿದರು.

ಸಚಿನ್ ಪಾಂಚಾಳ್ ಕುಟುಂಬದ ಸದಸ್ಯರ ಮೇಲೆ ಬಿಜೆಪಿಯವರು ಒತ್ತಡ ಹೇರುತ್ತಿದ್ದಾರೆ. ಪ್ರಕರಣದ ದಿಕ್ಕು ತಪ್ಪಿಸುವ ಹುನ್ನಾರ ನಡೆಯುತ್ತಿದೆ. ಈಗಾಗಲೇ ಪ್ರಕರಣವನ್ನು ಸಿಐಡಿ ತನಿಖೆ ನಡೆಸಲಾಗುತ್ತಿದೆ. ಸ್ಥಳ ಮಹಜರು ನಡೆದಿದೆ. ಪಾರದರ್ಶಕ ತನಿಖೆ ನಡೆಯಲಿದೆ ಎಂದು ತಾವು ಸಚಿನ್ ಕುಟುಂಬದ ಸದಸ್ಯರಿಗೆ ಭರವಸೆ ನೀಡಿದ್ದೇನೆ ಎಂದರು.

ಹೆಚ್ಚುವರಿ ಪ್ರಕರಣಗಳನ್ನು ನಮ ತನಿಖೆಗೆ ವಹಿಸಬೇಡಿ ಎಂದು ಸಿಬಿಐ ರಾಜ್ಯಗಳಿಗೆ ಪತ್ರ ಬರೆದು ಸೂಚನೆ ನೀಡಿದೆ. ಸಚಿನ್ ಪಾಂಚಾಳ್ ಪ್ರಕರಣವನ್ನು
ಸಿಬಿಐ ತನಿಖೆಗೆ ಕೊಡುವ ಅಗತ್ಯವಿಲ್ಲ. ಬಿಜೆಪಿಯವರು ಕತೆ ಬರೆದಂತೆ ನಾವು ತಾಳ ಹಾಕಲಾಗುವುದಿಲ್ಲ. ಜೀವ ಹೋಗಿದೆ. ನ್ಯಾಯ ಕೊಡಿಸುವುದು ನಮ ಜವಾಬ್ದಾರಿ. ವಿರೋಧಪಕ್ಷಗಳು ರಾಜಕೀಯ ಮಾಡದೇ ಜವಾಬ್ದಾರಿಯುತವಾಗಿ ನಡೆದುಕೊಳ್ಳಲಿ ಎಂದರು.

ಪ್ರತಿಭಟನೆಗೆ ಬರುವಂತೆ ಕುಟುಂಬದ ಸದಸ್ಯರ ಮೇಲೆ ಒತ್ತಡ ಹೇರುತ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕುಟುಂಬದವರು ನಮಗೆ ಪ್ರಿಯಾಂಕ್ ಖರ್ಗೆ ಯಾರೆಂಬುದು ಗೊತ್ತಿಲ್ಲ. ನಮಗೂ ಅವರಿಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ನಮ ಪಕ್ಷದ ಸಚಿವ ಈಶ್ವರ್ ಖಂಡ್ರೆ, ಲಕ್ಷ್ಮೀಹೆಬ್ಬಾಳ್ಕರ್ ಅವರುಗಳು ಸಚಿನ್ ಅವರ ಮನೆಗೆ ಭೇಟಿ ನೀಡಿ ಸಾಂತ್ವಾನ ನೀಡಿದ್ದು, ಸರ್ಕಾರದಿಂದ ಅಗತ್ಯವಾದ ನೆರವು ಕೊಡಿಸುವ ಭರವಸೆ ನೀಡಿದ್ದಾರೆ.

ಈ ಹಿಂದೆ ಆತಹತ್ಯೆ ಮಾಡಿಕೊಂಡ ಸಂತೋಷ್ ಪಾಟೀಲ್ ಅವರ ಪ್ರಕರಣದಲ್ಲಿ ಬಿಜೆಪಿಯವರು ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವಾನ ಹೇಳುವ ಪ್ರಯತ್ನ ಮಾಡಿದ್ದರೇ ಎಂದು ಪ್ರಶ್ನಿಸಿದರು.

ಈ ಹಿಂದೆ ಶೇ.40ರಷ್ಟು ಕಮಿಷನ್ ಹಗರಣ, ಪಿಎಸ್ಐ ನೇಮಕಾತಿ, ಗಂಗಕಲ್ಯಾಣ ಯೋಜನೆ ಹಣ ದುರುಪಯೋಗ ಸೇರಿದಂತೆ ಹಲವಾರು ಹಗರಣಗಳಾಗಿವೆ. ಇದ್ಯಾವುದನ್ನೂ ಅವರು ಸಿಬಿಐಗೆ ಕೊಟ್ಟಿರಲಿಲ್ಲ. ಈಗ ಪ್ರತಿ ಪ್ರಕರಣವನ್ನು ಸಿಬಿಐ ತನಿಖೆಯಾಗಬೇಕು ಎಂದು ಹೇಳುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿಜಯೇಂದ್ರ ಅವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಪಕ್ಷದ ರಾಜ್ಯಾಧ್ಯಕ್ಷರಾಗಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಅವರ ತಂದೆ ಏನು ಮಾಡಿದ್ದರು ಎಂದು ಎಲ್ಲರಿಗೂ ಗೊತ್ತಿದೆ. ಪೂಜ್ಯ ತಂದೆಯವರೆಂದಾಕ್ಷಣ ಪೂಜ್ಯನೀಯರಾಗುವುದಿಲ್ಲ. ಬುದ್ಧ, ಬಸವ, ಅಂಬೇಡ್ಕರ್ ಮೇಲೆ ನಂಬಿಕೆಯಿದ್ದವರು ಬೀದಿಗಿಳಿದರೆ ಅವರು ಮನೆ ಖಾಲಿ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.ಸಿ.ಟಿ.ರವಿ, ಆರ್.ಅಶೋಕ್ ಅವರು ಬಳಸಿರುವ ಭಾಷೆಯನ್ನು ನೋಡಿದರೆ ಬಿಜೆಪಿಯವರ ಸಂಸ್ಕೃತಿ ಅರ್ಥವಾಗುತ್ತದೆ ಎಂದರು.

RELATED ARTICLES

Latest News