ನವದೆಹಲಿ,ಫೆ.1- ಗ್ರಾಮೀಣ ಆರ್ಥಿಕತೆಗೆ ಒತ್ತು ನೀಡುವ ಉದ್ದೇಶದಿಂದ ಇಂಡಿಯಾ ಪೋಸ್ಟ್ ಸಂಸ್ಥೆಯನ್ನು ಹೊಸ ಶಕ್ತಿಯನ್ನಾಗಿ ಪರಿವರ್ತಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಬಜೆಟ್ ಮೇಲಿನ ಭಾಷಣದಲ್ಲಿ ಅವರು, ಇಂಡಿಯಾ ಪೋಸ್ಟ್ ಸಂಸ್ಥೆಯನ್ನು ದೊಡ್ಡ ಸಾರ್ವಜನಿಕ ಲಾಜಿಸ್ಟಿಕ್ ಸಂಸ್ಥೆಯಾಗಿ ಪರಿವರ್ತಿಸುವ ಯೋಜನೆ ಹಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಗ್ರಾಮೀಣ ಭಾಗದಲ್ಲಿರುವ ಒಂದೂವರೆ ಲಕ್ಷ ಅಂಚೆ ಕಚೇರಿಗಳನ್ನು ಇದಕ್ಕಾಗಿ ಬಳಕೆ ಮಾಡಲಾಗುತ್ತದೆ. ಇದರಿಂದ ಗ್ರಾಮೀಣ ಆರ್ಥಿಕತೆಗೆ ಅನುಕೂಲವಾಗಲಿದೆ. ಪೋಸ್ಟ್ ಆಫೀಸ್ಗಳನ್ನು ಬಲವರ್ಧನೆಗೊಳಿಸುವುದರ ಜೊತೆಗೆ ಅವುಗಳಿಗೆ ಮರುಜೀವ ನೀಡಿ ಬೃಹತ್ ಉದ್ಯಮವನ್ನಾಗಿ ಪರಿವರ್ತಿಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
- 4 ಸಾವಿರ ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ 500ಕಿಮೀ ರಸ್ತೆಗೆ ವೈಟ್ ಟಾಪಿಂಗ್ : ಡಿಕೆಶಿ
- ದೀಪಾವಳಿ ಜಾತ್ರೆ : ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದು ಬಂದ ಭಕ್ತ ಸಾಗರ
- 1100 ಟನ್ ಕೆಎಂಎಫ್ ಸಿಹಿ ಉತ್ಪನ್ನಗಳ ದಾಖಲೆ ಮಾರಾಟ
- ಒಂದು ವಾರದೊಳಗೆ ಬೆಂಗಳೂರಿನ ರಸ್ತೆಗುಂಡಿಗಳನ್ನು ಮುಚ್ಚಲು ಸಿಎಂ ಸೂಚನೆ
- ತಿರುಮಲ ಕರ್ನಾಟಕ ಭವನದಲ್ಲಿ ಅಧಿಕಾರಿಗಳ ಸಭೆ, ಶೀಘ್ರ ಕಾಮಗಾರಿ ಮುಗಿಸಲು ಸೂಚನೆ