ನಿತ್ಯ ನೀತಿ : ಉದುರಿದ ಎಲೆ, ಅರಳಿದ ಹೂವು, ಉರಿಯುವ ದೀಪ ಇವೆಲ್ಲವೂ ಹೇಳುವುದೊಂದೇ- ಯಾವುದೂ ಶಾಶ್ವತವಲ್ಲ.
ಪಂಚಾಂಗ : 17-04-2025, ಗುರುವಾರ
ವಿಶ್ವಾವಸು ನಾಮ ಸಂವತ್ಸರ / ಉತ್ತರಾಯಣ / ಸೌರ ವಸಂತ ಋತು / ಚೈತ್ರ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ಜ್ಯೇಷ್ಠಾ / ಯೋಗ: ವರೀಯಾನ್ / ಕರಣ: ಕೌಲವ
ಸೂರ್ಯೋದಯ – ಬೆ.06.06
ಸೂರ್ಯಾಸ್ತ – 06.33
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30
ರಾಶಿಭವಿಷ್ಯ :
ಮೇಷ: ವಿದ್ಯಾರ್ಥಿಗಳಿಗೆ ವಿದ್ಯೆಯ ವಿಚಾರದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.
ವೃಷಭ: ಒಂದೇ ಸಮಯಕ್ಕೆ ನಾನಾ ಬಗೆಯ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ.
ಮಿಥುನ: ಸರ್ಕಾರಿ ಕೆಲಸ-ಕಾರ್ಯಗಳಿಂದ ಅನುಕೂಲವಾಗಲಿದೆ. ಆತ್ಮಗೌರವ ಹೆಚ್ಚಾಗಲಿದೆ.
ಕಟಕ: ಆರೋಗ್ಯದ ವಿಚಾರದಲ್ಲಿ ಕಾಳಜಿ ವಹಿಸಿ. ಸಮತೋಲಿತ ರೀತಿಯಲ್ಲಿ ಆಹಾರ ಸೇವಿಸಿ.
ಸಿಂಹ: ಹಿಂಜರಿಕೆ ಮತ್ತು ಭಯದ ಸ್ವಭಾವದಿಂದ ಕಾರ್ಯಕ್ಷೇತ್ರದಲ್ಲಿ ಹಿನ್ನಡೆಗೆ ಕಾರಣವಾಗಲಿದೆ.
ಕನ್ಯಾ: ಕಚೇರಿಯಲ್ಲಿ ಆತ್ಮವಿಶ್ವಾಸದಿಂದ ಕೆಲಸ ಮಾಡಿ. ಮಾತನಾಡುವ ಮುನ್ನ ಯೋಚಿಸಿ.
ತುಲಾ: ಮಕ್ಕಳ ವಿಷಯ ದಲ್ಲಿ ಹೆಚ್ಚು ಕಾಳಜಿ ವಹಿಸಿ.
ವೃಶ್ಚಿಕ: ಪ್ರಾಮಾಣಿಕತೆ ಹಾಗೂ ಶ್ರದ್ಧೆಯಿಂದ ದುಡಿಯುವ ನಿಮ್ಮ ಮೇಲೆ ಮೇಲ ಕಾರಿಗಳಿಗೆ ಹೆಚ್ಚು ಭರವಸೆ ಮೂಡಲಿದೆ.
ಧನುಸ್ಸು: ಕಷ್ಟದ ಪರಿಸ್ಥಿತಿಯಲ್ಲಿ ಜನಬಲದ ಕೊರತೆಯಾದರೂ ಸ್ನೇಹಿತರ ಸಹಕಾರ ಸಿಗಲಿದೆ.
ಮಕರ: ವೈಯಕ್ತಿಕ ವಿಚಾರಗಳ ಬಗ್ಗೆ ಹೆಚ್ಚು ಗಮನ ಹರಿಸಿ. ಉತ್ತಮ ಆದಾಯ ಬರಲಿದೆ.
ಕುಂಭ: ತಂದೆ-ತಾಯಿಗೆ ಮಕ್ಕಳ ಸಲುವಾಗಿ ವಿದೇಶ ಪ್ರಯಾಣ ಮಾಡುವ ಅವಕಾಶ ದೊರೆಯಲಿದೆ.
ಮೀನ: ಆರೋಗ್ಯದ ಬಗ್ಗೆ ಸ್ವಲ್ಪ ಗಮನವಿರಲಿ. ಕೃಷಿಕರಿಗೆ ಅಲ್ಪ ಪ್ರಮಾಣದ ಲಾಭ ದೊರೆಯಲಿದೆ.