ರಾಯಚೂರು, ಏ.18- ಕುರಿಗಳ ಖರೀದಿಗೆ ಹೋಗುತ್ತಿದ್ದ ಬೊಲೆರೋ ವಾಹನ ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಗಟ್ಟೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಗಿನ ಜಾವ ನಡೆದಿದೆ. ಮೃತರನ್ನು ತೆಲಂಗಾಣದ ಹಿಂದೂಪುರ ನಿವಾಸಿಗಳಾದ ನಾಗರಾಜ್, ಸೋಮ, ನಾಗಭೂಷಣ ಮತ್ತು ಮುರಳಿ ಎಂದು ಗುರುತಿಸಲಾಗಿದೆ.
ಕುರಿಗಳನ್ನು ಖರೀದಿಸುವ ಸಲುವಾಗಿ ಹಿಂದೂಪುರದಿಂದ ಶಹಾಪುರ ಸಂತೆಗೆ ನಾಲ್ವರು ಬೊಲೆರೋ ಪಿಕಪ್ ವಾಹನದಲ್ಲಿ ಹೋಗುತ್ತಿದ್ದರು. ಈ ವಾಹನ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ ಬಳಿ ಇಂದು ಬೆಳಗಿನ ಜಾವ 2ಗಂಟೆ
ಸುಮಾರಿನಲ್ಲಿ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ಸುದ್ದಿ ತಿಳಿದು ಗಟ್ಟೂರು ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ, ನಾಲ್ವರ ಮೃತದೇಹಗಳನ್ನು ರಿಮ್ಸ್ ಆಸ್ಪತ್ರೆಗೆ ರವಾನಿಸಿ, ಮೃತರ ಕುಟುಂಬಸ್ಥರಿಗೆ ವಿಷಯ ತಿಳಿಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
- ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬರಲಿವೆ 8 ಚೀತಾಗಳು
- ವಿದ್ಯಾರ್ಥಿಗಳ ಜನಿವಾರ ತೆಗಿಸಿದ ಘಟನೆ ; ಬ್ರಾಹ್ಮಣರ ಸಂಘ ಖಂಡನೆ
- ವಿಧಾನಸಭೆಯಿಂದ ಶಾಸಕರ ಅಮಾನತು : ಸ್ಪೀಕರ್ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾದ ಬಿಜೆಪಿ
- ನೇಪಾಳ ಬಸ್ ಅಪಘಾತದಲ್ಲಿ 25 ಭಾರತೀಯರಿಗೆ ಗಾಯ, ಮೂವರ ಸ್ಥಿತಿ ಚಿಂತಾಜನಕ
- ಹಾಸನ : ಕಾರಿನೊಳಗೆ ಅಸಿಸ್ಟೆಂಟ್ ಅಕೌಂಟೆಂಟ್ ಸಾವು