ಯಾದಗಿರಿ,ಮೇ.5 : ನೀರು ಕುಡಿಯಲು ಹೋಗಿದ್ದ ಮೂವರು ಬಾಲಕರು ಹೊಂಡದಲ್ಲಿ ಮುಳುಗಿ ದುರ್ಮರಣ ಹೊಂದಿರುವ ಘಟನೆ ತಾಲೂಕಿನ ಅಚೊಲಾ ತಾಂಡಾದಲ್ಲಿ ನಡೆದಿದೆ. ಕುರಿ ಕಾಯಲು ಹೋಗಿದ್ದ ಬಾಲಕರು ಬೇಸಿಗೆ ಹಿನ್ನಲೆ ನೀರಿನ ದಾಹ ತಣಿಸಿಕೊಳ್ಳಲು ಕೃಷಿ ಹೊಂಡದ ಬಳಿ ಹೋಗಿದ್ದರು ಈ ವೇಳೆ ಕಾಲು ಜಾರಿ ಬಿದ್ದು ನೀರು ಪಾಲು ಆಗಿರಬಹುದು ಎನ್ನಲಾಗಿದೆ.
ಅಚೊಲಾ ತಾಂಡಾದ ನಿವಾಸಿಗಳಾದ ಅಮರ್(12), ಜಯ(14), ಕೃಷ್ಣ 10) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಯಾದಗಿರಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.ಮಕ್ಕಳ ಸಾವಿನ ಸುದ್ದಿ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
- ಹೆಚ್ಡಿಕೆ ಭೇಟಿಯಾದ ಗೋವಾ ಸಿಎಂ, ರಾಜ್ಯ ರಾಜಕಾರಣದಲ್ಲಿ ತಲ್ಲಣ
- ದೊಡ್ಡಬಳ್ಳಾಪುರ : ಗಣೇಶ ವಿಸರ್ಜನೆ ವೇಳೆ ಪಟಾಕಿ ದುರಂತ ಗಾಯಗೊಂಡಿದ್ದ ಮತ್ತೊಬ್ಬ ಬಾಲಕ ಸಾವು
- ದಿಢೀರನೆ ಕುಸಿದ ಟೊಮ್ಯಾಟೋ ಬೆಲೆ ಬೆಳೆಗಾರರಲ್ಲಿ ಆತಂಕ..!
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (03-09-2025)
- ಧರ್ಮಸ್ಥಳ ಪ್ರಕರಣವನ್ನು ಎನ್ಐಎಗೆ ವಹಿಸುವ ಅಗತ್ಯವಿಲ್ಲ : ಪರಮೇಶ್ವರ್