ಮೃಸೂರು, ಜೂ.8– ಜಿಲ್ಲೆಯ ಹುಣಸೂರು ತಾಲೂಕು ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಆಯರಹಳ್ಳಿ ಗ್ರಾಮದ ಏತನೀರಾವರಿ ಹೊಳೆಯಲ್ಲಿ ತಲೆ ಕೈಕಾಲುಗಳಿಲ್ಲದ ವ್ಯಕ್ತಿಯ ಮುಂಡ ಪತ್ತೆಯಾಗಿದೆ.
ಕೊಳೆತ ಸ್ಥಿತಿಯಲ್ಲಿ ಮೃತದೇಹ ತೇಲುತ್ತಿದ್ದು, ಇದನ್ನು ಕಂಡ ಸಾರ್ವಜನಿಕರು ಬಿಳಿಕೆರೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಎಸ್ಪಿ ವಿಷ್ಣುವರ್ಧನ್, ಡಿವೈಎಸ್ಪಿ ಗೋಪಾಲಕೃಷ್ಣ, ಸಂತೋಷ್ ಕಷ್ಯಪ್ ಹಾಗೂ ಸಬ್ ಇನ್ಸ್ಪೆಕ್ಟರ್ ಪೂಜಾ ಅವರುಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೈಕಾಲು ಮತ್ತು ರುಂಡ ಇಲ್ಲದ ದೇಹವನ್ನು ಹೊರತೆಗೆದು ಮುಂದಿನ ಕ್ರಮ ಕೈಗೊಂಡಿದ್ದು, ಅಪರಿಚಿತ ಮೃತ ವ್ಯಕ್ತಿಯ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.