ಬೆಂಗಳೂರು,ಜೂ.8- ಖಾಸಗಿ ಕಂಪನಿಯ ನೌಕರರೊಬ್ಬರು ತಮ್ಮ ಮನೆಯ ಟೆರಸ್ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ರಾತ್ರಿ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಲ್ಲತ್ತಹಳ್ಳಿಯ ಕದಂಬ ಲೇಔಟ್ನ ನಿವಾಸಿ, ಖಾಸಗಿ ಕಂಪನಿಯ ನೌಕರ ಮಂಜುನಾಥ್(36) ಮೃತಪಟ್ಟವರು. ರಾತ್ರಿ ಸುಮಾರು 11.30ರ ಸಮಯದಲ್ಲಿ ಮಂಜುನಾಥ್ ಅವರು ಎರಡಂತಸ್ತಿನ ತಮ್ಮ ಮನೆಯ ಟೆರಸ್ ಮೇಲೆ ಮದ್ಯ ಸೇವಿಸುತ್ತಾ ಕುಳಿತಿದ್ದರು. ಆ ನಡುವೆ ಎದ್ದು ಬಂದಾಗ ಆಯತಪ್ಪಿ ಕೆಳಗೆ ಬಿದ್ದಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ.
ಕೂಡಲೇ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ. ವಿಕ್ಟೋರಿಯ ಆಸ್ಪತ್ರೆಯ ಶವಾಗಾರದಲ್ಲಿ ಶವ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಜ್ಞಾನಭಾರತಿ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.