ಬೆಂಗಳೂರು,ಜೂ.17- ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಸ್ವಚ್ಛತೆಯೆಡೆಗೆ ನಮ್ಮ ನಡಿಗೆ ಜಾಥಾಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನಸೌಧದ ಬಳಿ ಚಾಲನೆ ನೀಡಿದರು.
ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಸ್ಕೌಟ್್ಸ ಶಿಬಿರಾರ್ಥಿಗಳು, ಸಾರ್ವಜನಿಕರು, ಅಧಿಕಾರಿಗಳು, ಜನಪ್ರತಿನಿಧಿಗಳು ಜಾಥಾದಲ್ಲಿ ಭಾಗವಹಿಸಿದ್ದರು. ಡಿ.ಕೆ.ಶಿವಕುಮಾರ್ರವರು ವಿಧಾನಸೌಧದಲ್ಲಿ ಸೈಕಲ್ ತುಳಿಯುವ ಮೂಲಕ ಜಾಥಾಗೆ ಚಾಲನೆ ನೀಡಿ, ಸೈಕಲ್ ಬಳಸಿ ಪರಿಸರ ಉಳಿಸಿ ಸಂದೇಶ ರವಾನಿಸಿದರು. ಒಂದಷ್ಟು ದೂರ ಕಾಲ್ನಡಿಗೆಯಲ್ಲಿ ನಡೆದ ಡಿ.ಕೆ.ಶಿವಕುಮಾರ್ರವರು ಬಳಿಕ ಪ್ರಯಾಸದಿಂದ ಸೈಕಲ್ ತುಳಿದಿದ್ದು ಗಮನ ಸೆಳೆದಿತ್ತು. ತಮ್ಮ ಶಾಲಾ-ಕಾಲೇಜು ದಿನಗಳಲ್ಲಿ ತಾವೂ ಕೂಡ ಸ್ಕೌಟ್್ಸಗೈಡ್್ಸನ ಶಿಬಿರಾರ್ಥಿಯಾಗಿದ್ದಾಗಿ ಸರಿಸಿಕೊಂಡರು.
ಪರಿಸರ ರಕ್ಷಣೆಯಲ್ಲಿ ಮಕ್ಕಳ ಪಾತ್ರ ಬಹಳ ಮುಖ್ಯವಾಗಿದೆ. ಪ್ಲಾಸ್ಟಿಕ್ ನಿಷೇಧ ಅತ್ಯಗತ್ಯವಾಗಿ ಜಾರಿಯಾಗಬೇಕು. ಶಾಲಾ-ಕಾಲೇಜಿನಲ್ಲಿ ಪರಿಸರಸ್ನೇಹಿ ಕ್ಲಬ್ಗಳನ್ನು ಆರಂಭಿಸಲಾಗುತ್ತಿದ್ದು, ಈಗಾಗಲೇ 50 ಸಾವಿರಕ್ಕೂ ಹೆಚ್ಚು ಕ್ಲಬ್ಗಳು ಅಸ್ತಿತ್ವಕ್ಕೆ ಬಂದಿವೆ ಎಂದರು. ಮಳೆಯಿಂದಾಗಿ ಬೆಂಗಳೂರಿನಲ್ಲಿ ಅನಾಹುತಗಳಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸುವ ಅಗತ್ಯವಿಲ್ಲ. ಸರ್ಕಾರ ಸಮಸ್ಯೆಗೆ ಸ್ಪಂದಿಸಲಿದೆ. ಹೆಚ್ಚು ಮಳೆ ಬರುವುದು ಪರಿಸರ ರಕ್ಷಣೆಗೆ ಅಗತ್ಯವಾಗಿದೆ ಎಂದು ಹೇಳಿದರು.

ಬಳಿಕ ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಮೇಲೆ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಡಿ.ಕೆ.ಶಿವಕುಮಾರ್ರವರು ಭವಿಷ್ಯದ ಬದುಕಿಗೆ ಪರಿಸರ ರಕ್ಷಣೆ ಅತ್ಯಗತ್ಯವಾಗಿದೆ. ಬೆಂಗಳೂರಿನ ವಿಧಾನಸೌಧ ಕಾನೂನು ರೂಪಿಸುವ ಪವಿತ್ರ ಸ್ಥಳವಾಗಿದ್ದು, ಇದರ ಮುಂಭಾಗದಲ್ಲಿ ನ್ಯಾಯಾಂಗ ಇದೆ. ವಿಶ್ವದ ಎಲ್ಲಿಯೂ ಈ ರೀತಿಯ ವಿನ್ಯಾಸ ಕಂಡುಬರುವುದಿಲ್ಲ ಎಂದರು. ವಿಧಾನಸೌಧವನ್ನು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತಗೊಳಿಸಲಾಗಿದೆ. ಪರಿಸರ ನಾಶ ಮಾಡಬಾರದು. ಅದನ್ನು ರಕ್ಷಿಸಲು ಹಸಿರು ಉಸಿರು ಎಂಬ ಧ್ಯೇಯ ಪಾಲನೆ ಮಾಡಬೇಕಿದೆ. ಮರ ಬೆಳೆಸಿ ಪ್ರಕೃತಿ ರಕ್ಷಣೆ ಮಾಡಲು ಮಕ್ಕಳು ಆಸಕ್ತಿ ವಹಿಸಬೇಕು. ಸಾರ್ವಜನಿಕರು ಹೆಚ್ಚು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಪ್ರತಿಯೊಂದು ಶಾಲೆಯಲ್ಲೂ ಕಡ್ಡಾಯವಾಗಿ ಒಂದೊಂದು ಪರಿಸರ ಕ್ಲಬ್ ಇರಲೇಬೇಕು. ಮುಂದಿನ ದಿನಗಳಲ್ಲಿ ಇವುಗಳ ಮೂಲಕ ಹಲವು ರೀತಿಯ ಸ್ಪರ್ಧೆಗಳನ್ನು ಆಯೋಜಿಸಲಾಗುವುದು. ಪ್ಲಾಸ್ಟಿಕ್ ಅನ್ನು ಸಂಪೂರ್ಣ ತೊಡೆದುಹಾಕುವುದು ಎಲ್ಲರ ಜವಾಬ್ದಾರಿ ಎಂದರು. ಅರಣ್ಯ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ ಖಂಡ್ರೆ, ಶಾಸಕ ರಿಜ್ವಾನ್ ಅರ್ಷದ್, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಪಿ.ಎಂ.ನರೇಂದ್ರಸ್ವಾಮಿ, ವಿಧಾನಪರಿಷತ್ ಸದಸ್ಯ ಸುದಾಂದಾಸ್, ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಸ್.ಇ.ಸುಧೀಂದ್ರ ಮತ್ತಿತರರು ಉಪಸ್ಥಿತರಿದ್ದರು.